ಹಾಸನ | ಹಂದಿಜೋಗಿ ಕಾಲೋನಿಗೆ ಅಂಬೇಡ್ಕರ್ ಭವನ ನಿರ್ಮಾಣ; ಭೂಮಿ ಮಂಜೂರು ಮಾಡುವಂತೆ ಸಿಜಿಎಂ ಆಗ್ರಹ

Date:

ಅಲೆಮಾರಿ ಹಂದಿಜೋಗಿ ಕಾಲೋನಿಯಲ್ಲಿ ಅಂಬೇಡ್ಕರ್ ಭವನ ನಿರ್ಮಿಸಲು ಒಂದು ಎಕರೆ ಭೂಮಿ ಮಂಜೂರಾತಿಗಾಗಿ ಆಗ್ರಹಿಸಿ ಸಿಜಿಎಂ(ಚಂದ್ರಗುಪ್ತ ಮೌರ್ಯ ದಲಿತ ಹೋರಾಟಗಾರ) ಒಕ್ಕೂಟದಿಂದ ಹಾಸನ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಚಂದ್ರಗುಪ್ತ ಮೌರ್ಯ ದಲಿತ ಹೋರಾಟಗಾರರ ಒಕ್ಕೂಟದಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದು, “ಕೆ ಗೋಪನಹಳ್ಳಿಯ ಅಲೆಮಾರಿ ಹಂದಿ ಜೋಗಿ ಕಾಲೋನಿಗೆ ಡಾ. ಬಿ ಆರ್ ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣ ಮಾಡಲು 1 ಎಕರೆ ಜಾಗವನ್ನು ಮಂಜೂರು ಮಾಡಿಕೊಡಬೇಕು” ಎಂದು ಆಗ್ರಹಿಸಿದ್ದಾರೆ.

ಜಿಲ್ಲಾಧ್ಯಕ್ಷ ವಿಜಯಕುಮಾರ ಬಾಗಿವಾಳು ಮಾತನಾಡಿ, “ಹೊಳೆನರಸೀಪುರ ತಾಲೂಕಿನ ಹಳ್ಳಿ ಮೈಸೂರು ಹೋಬಳಿ ವ್ಯಾಪ್ತಿಗೆ ಬರುವ ಕೆ ಗೋಪನಹಳ್ಳಿ(ಕೆರೆಗೋಡು ದಾಖಲೆ) ಗ್ರಾಮದಲ್ಲಿ ಅಲೆಮಾರಿ ಹಂದಿಜೋಗಿ ಜನಾಂಗದ ಸುಮಾರು 30 ಕುಟುಂಬಗಳು ವಾಸವಾಗಿದ್ದು, ಸದರಿ ಹಂದಿಜೋಗಿ ಕಾಲೋನಿಯ ದಲಿತ ಸಮುದಾಯದವರು ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳು, ಮನರಂಜನೆ, ಹಬ್ಬ ಹರಿದಿನ, ಮದುವೆ ಮುಂತಾದ ಕಾರ್ಯಕ್ರಮ ಮತ್ತು ಸಮಾರಂಭಗಳನ್ನು ಮಾಡಲು ಜಾಗವಿಲ್ಲದ ಕಾರಣ ರಸ್ತೆ, ಬೀದಿಗಳಲ್ಲಿ ಸಮಾರಂಭಗಳನ್ನು ಮಾಡುತ್ತಿರುವುದರಿಂದ ತುಂಬಾ ತೊಂದರೆ ಅನುಭವಿಸುವಂತಾಗಿದೆ. ಹಾಗಾಗಿ ದಲಿತ ಕಾಲೋನಿಗೆ ಒಂದು ಭವನ ನಿರ್ಮಿಸಿಕೊಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೆರಗೋಡು ಗ್ರಾಮದ ಸರ್ವೆ ನಂಬರ್ 46ರಲ್ಲಿ 5 ಎಕರೆ 17 ಗುಂಟೆ ಸರ್ಕಾರಿ ಗೋಮಾಳ ಜಾಗವಿದ್ದು, ಅಲೆಮಾರಿ ಹಂದಿಜೋಗಿ ಕಾಲೋನಿಗೆ ಹೊಂದಿಕೊಂಡಿದೆ. ಈ ಜಾಗದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಭವನ ಮತ್ತು ಉದ್ಯಾನವನ ನಿರ್ಮಾಣ ಮಾಡಲು ಒಂದು ಎಕರೆ ಜಾಗವನ್ನು ಮಂಜೂರು ಮಾಡಿಕೊಡಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಎಲ್ಲೆಂದರಲ್ಲಿ ಕಸ ಸುರಿಯುವ ನಾಗರಿಕರಿಗೆ ಇನ್ಮುಂದೆ ದಂಡ ವಿಧಿಸುವುದೇ ಪಾಲಿಕೆ?

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹರೀಶ್ ಹುಳವಾರೆ, ಜಿಲ್ಲಾ ಕಾರ್ಯಧ್ಯಕ್ಷ ಗೋವಿಂದರಾಜು ಎಂ ವಿ, ರಂಗಸ್ವಾಮಿ ಎಸ್ ಎಸ್, ಚಂದ್ರಶೇಖರ್ ಸಾಣೆನಹಳ್ಳಿ, ಕೇಶವಣ್ಣ ಮುಸಾವತ್ತೂರು, ಪ್ರಸನ್ನಕುಮಾರ, ಭೀಮಾ ಶ್ರೇಯಸ್, ಗ್ರಾಮಸ್ಥರಾದ ಮಂಜುನಾಥ್, ಹರೀಶ, ಗೋವಿಂದರಾಜು, ಜಯಣ್ಣ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...