ಹಾಸನ | ಸವರ್ಣೀಯನಿಂದ ದಲಿತ ಸಮುದಾಯದ ತಾಯಿ-ಮಗಳ ಮೇಲೆ ಹಲ್ಲೆ: ಆರೋಪ

Date:

ದಲಿತ ಸಮುದಾಯಕ್ಕೆ ಸೇರಿದ ತಾಯಿ-ಮಗಳ ಮೇಲೆ ಕ್ಷುಲ್ಲಕ ಕಾರಣಕ್ಕೆ ಸವರ್ಣೀಯನೊಬ್ಬ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನಲ್ಲಿ ನಡೆದಿದೆ.

ಪರಿಶಿಷ್ಟ ಪಂಗಡಕ್ಕೆ ಸೇರಿರುವ ಮೀನಾಕ್ಷಿ ಹಾಗೂ ಅವರ ಮಗಳು ರಕ್ಷಿತಾಳಿಗೆ ಅವಾಚ್ಯ ಶಬ್ದದಿಂದ ನಿಂದಿಸಿ,ಕ್ಷುಲ್ಲಕ ಕಾರಣದಿಂದ ಪವನ್ ಕುಮಾರ್ ಎಂಬಾತ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ. ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕು ಪಾಳ್ಯ ಹೋಬಳಿಯ ಗುಂಡನ ಬೆಳ್ಳೂರು ಗ್ರಾಮದಲ್ಲಿ ನಡೆದಿದೆ. ಎರಡು ದಿನ ಹಿಂದೆ ಲಿಂಗಾಯತ ಸಮುದಾಯಕ್ಕೆ ಸೇರಿದ ಪವನ್ ಕುಮಾರ್ ಮರದ ತುಂಡಿನಿಂದ ಹಲ್ಲೆ ಮಾಡಿದ್ದಾನೆ.

ದಿನ ಕೂಲಿ ಕೆಲಸ ಮಾಡಿ ಜೀವನ ನಡೆಸುತ್ತಿರುವ ಮೀನಾಕ್ಷಿ, ಪವನ್ ಕುಮಾರ್ ಹತ್ತಿರ 1000 ರೂಪಾಯಿ ಹಣವನ್ನು ಸಾಲ ಪಡೆದಿದ್ದರು. ಸಾಲ ಕೇಳೋದಕ್ಕೆ ಬಂದಿದ್ದ ಪವನ್ ಕುಮಾರ್ ಮನೆಯ ಸಾಮಗ್ರಿಗಳನ್ನು ಹೊರ ಹಾಕಿ ಮನೆಯಲ್ಲಿದ್ದ ವಸ್ತುಗಳನ್ನು ತೆಗೆದುಕೊಂಡು ಹೋಗಿದ್ದರು. ಮೀನಾಕ್ಷಿ ಅವರು 1000 ಹಣ ನಾನು ಈಗಲೇ ನಿಮಗೆ ಕೊಡುತ್ತೇನೆ. ನಮ್ಮ ವಸ್ತುಗಳನ್ನ ವಾಪಸ್ ಮಾಡಿ ಎಂದು ಕೇಳಿದ್ದಕ್ಕೆ, ಮರದ ತುಂಡಿನಿಂದ ಹಲ್ಲೆ ಮಾಡಿದ್ದಾನೆ ಎಂಬ ಆರೋಪ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೂರಾರು ಸಂಖ್ಯೆಯಲ್ಲಿ ಗ್ರಾಮಸ್ಥರಿದ್ದರೂ ಇರುವ ಗ್ರಾಮವಾಗಿದ್ದರೂ, ಹಲ್ಲೆಗೊಳಗಾಗುವಾಗ ಯಾರೂ ಕೂಡ ಸಹಾಯಕ್ಕೆ ಬಂದಿಲ್ಲ ಎಂದು ಮೀನಾಕ್ಷಿ ಅವರು ನೋವು ತೋಡಿಕೊಂಡಿದ್ದಾರೆ.

ಈ ಘಟನೆ ಎರಡು ದಿನ ಆದರೂ ಯಾವುದೇ ಅಧಿಕಾರಿಗಳಿಂದ ಪ್ರತಿಕ್ರಿಯೆ ಬಂದಿಲ್ಲ. ಶುಕ್ರವಾರ ಮೀನಾಕ್ಷಿ ಅವರು ಆಲೂರು ತಾಲ್ಲೂಕಿನ ಪೋಲಿಸ್ ಠಾಣೆಗೆ ದೂರನ್ನು ಕೊಟ್ಟಿದ್ದಾರೆ. ಆದರೆ ಇಲ್ಲಿಯವರೆಗೂ ಪೊಲೀಸ್ ಅಧಿಕಾರಿಗಳಿಂದ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಹಲ್ಲೆಗೊಳಗಾದ ಮೀನಾಕ್ಷಿ ಅವರು ತಾಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನು ಓದಿದ್ದೀರಾ? ಸಂಡೂರು | ಸರ್ಕಾರದ ‘ದಿಶಾಂಕ್ ಆ್ಯಪ್‌’ನಲ್ಲಿ ಇಡೀ ಗ್ರಾಮವೇ ನಾಪತ್ತೆ: ಆತಂಕದಲ್ಲಿ ಗ್ರಾಮಸ್ಥರು!

ಈ ಘಟನೆಯನ್ನು ಜಿಲ್ಲೆಯ ಭೀಮ್ ಆರ್ಮಿ ಸಂಘಟನೆಯವರಿಗೆ ಮೀನಾಕ್ಷಿ ಅವರು ತಿಳಿಸಿದ ಹಿನ್ನೆಲೆಯಲ್ಲಿ ಶನಿವಾರ ಮೀನಾಕ್ಷಿ ಮತ್ತು ಮಗಳು ರಕ್ಷಿತಾ ಭೀಮ್ ಆರ್ಮಿ ಸಂಘಟನೆಯವರೊಂದಿಗೆ ಪೊಲೀಸ್ ಠಾಣೆಗೆ ತೆರಳಿದ್ದಾರೆ. ಆ ಬಳಿಕ ಪವನ್ ಕುಮಾರ್ ವಿರುದ್ಧ ಕೇಸ್ ದಾಖಲಿಸಿಕೊಳ್ಳಲಾಗಿದೆ ಎಂದು ಭೀಮ್ ಆರ್ಮಿ ಸಂಘಟನೆ ಜಿಲ್ಲಾ ಅಧ್ಯಕ್ಷರಾದ ಪ್ರದೀಪ್ ಈ ದಿನ.ಕಾಮ್ ಗೆ ಮಾಹಿತಿ ನೀಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...