ಹಾಸನ | ಉತ್ತಮ ವಿದ್ಯಾಭ್ಯಾಸ ಇದ್ದರೆ ಆರ್ಥಿಕ ಸ್ವಾವಲಂಬನೆ ಸಾಧ್ಯ: ಡಿಸಿ ಲತಾ ಕುಮಾರಿ

Date:

ಪ್ರತಿಯೊಂದು ಮಗುವೂ ಉತ್ತಮ ವಿದ್ಯಾಭ್ಯಾಸ ಪಡೆದು ಮುಂದಿನ ಭವಿಷ್ಯ ರೂಪಿಸಿಕೊಳ್ಳುವ ಮೂಲಕ ಉದ್ಯೋಗದಲ್ಲಿ ತೊಡಗಿಸಿಕೊಳ್ಳಬೇಕು. ಉನ್ನತ ವಿದ್ಯಾಭ್ಯಾಸದಿಂದ ಆರ್ಥಿಕ ಸ್ವಾವಲಂಬನೆ ಸಾಧ್ಯ ಎಂದು ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯ SSLC ಉತ್ತಮ ಫಲಿತಾಂಶ ಹಾಗೂ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಗುಣಮಟ್ಟದ ಭೋದನೆ ಮತ್ತು ಕಲಿಕೆಗೆ ಕ್ರಮ ಕೈಗೊಳ್ಳುವ ಬಗ್ಗೆ ನಡೆದ ವಿಡಿಯೋ ಸಂವಾದದಲ್ಲಿ ಅವರು ಮಾತನಾಡಿದರು.

“ಶಿಕ್ಷಕರು ಉತ್ತಮವಾಗಿ ಭೋಧನೆ ಮಾಡುವ ಮೂಲಕ ಮಕ್ಕಳಿಗೆ ಒಳ್ಳೆಯ ಶಿಕ್ಷಣ ನೀಡಲು ಮುತುವರ್ಜಿ ವಹಿಸಬೇಕು. ಈ ಕಾರ್ಯಕ್ರಮವು ಮಕ್ಕಳ ಉತ್ತಮ ಭವಿಷ್ಯಕ್ಕೆ ಬುನಾದಿ ಆಗಿದ್ದು, ಜೀವನದಲ್ಲಿ ಮಕ್ಕಳು ತಮ್ಮ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿ ಆಗುವಂತೆ ಈ ಕಾರ್ಯಕ್ರಮದ ಮೂಲಕ ಪ್ರಯತ್ನ ನಡೆಸಲಾಗುತ್ತಿದೆ. ಒಂದು ಕಾಲದಲ್ಲಿ ಉದ್ಯೋಗಂ ಪುರುಷ ಲಕ್ಷಣಂ ಎಂದು ಹೇಳಲಾಗುತ್ತಿತ್ತು. ಆದರೆ ಇಂದಿನ ದಿನಗಳಲ್ಲಿ ಉದ್ಯೋಗ ಸರ್ವರ ಲಕ್ಷಣ ಎಂಬತ್ತಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಂದು ಮಗುವೂ ಹೆಣ್ಣು ಗಂಡು ಎಂಬ ಭೇದವಿಲ್ಲದೆ ಪ್ರತಿಯೊಬ್ಬರು ಕೆಲಸ ಮಾಡುವ ಮೂಲಕ ಆರ್ಥಿಕ ಸಬಲತೆ ಸಾಧಿಸಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎಸ್.ಎಸ್.ಎಲ್.ಸಿ ಹಂತದಲ್ಲಿಯೇ ಮುಂದೆ ಯಾವ ರೀತಿಯ ಕೆಲಸ ಮಾಡಬೇಕು ಎಂದು ನಿರ್ಧರಿಸಿ ಮುಂದಿನ ವಿದ್ಯಾಭ್ಯಾಸಕ್ಕೆ ವಿಷಯಗಳನ್ನು ಆಯ್ಕೆ ಮಾಡಿಕೊಂಡು ವಿದ್ಯಾಭ್ಯಾಸ ನಡೆಸಿ ಎಂದು ತಿಳಿಸಿದರಲ್ಲದೆ, ಜೀವನಕ್ಕೆ ವಿದ್ಯೆ ಭದ್ರ ಬುನಾದಿ, ವಿದ್ಯಾಭ್ಯಾಸ ಮುಗಿಸಿದ ತಕ್ಷಣ ಕೆಲಸ ದೊರೆಯುವುದಿಲ್ಲ. ಲಭ್ಯವಿರುವ ಅವಕಾಶಗಳನ್ನು ಬಳಸಿಕೊಂಡು ಕೆಲಸ ಪಡೆದುಕೊಳ್ಳಬೇಕು” ಎಂದು ತಿಳಿಸಿದರು.

ಇದನ್ನೂ ಓದಿ: ಹಾಸನ | ಕುಟುಂಬ ಸಮೇತ ಹಾಸನಾಂಬ ದೇವಿ ದರ್ಶನ ಪಡೆದ ಡಿಸಿಎಂ ಡಿ.ಕೆ ಶಿವಕುಮಾರ್

“ಮಕ್ಕಳು ಯಾವುದೇ ನೆಪ ನೀಡಿ ಶಾಲೆಗೆ ಗೈರು ಹಾಜರಾಗಬಾರದು. ಈ ಕಾರ್ಯಕ್ರಮದ ಮೂಲಕ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಪ್ರಯತ್ನಿಸಲಾಗಿ 6ನೇ ವಾರ ತಲುಪಿದೆ, ಜೀವನದಲ್ಲಿ ಯಶಸ್ಸು ಕಾಣಲು ಎಲ್ಲಾ ಸುಖವನ್ನು ತ್ಯಾಗ ಮಾಡಿ ಸಾಧನೆ ಮಾಡಬೇಕು ಎಂದ ಅವರು ಸಮಾಜದಲ್ಲಿ ಗೌರವ ಪಡೆಯಲು, ನೆಮ್ಮದಿ ಬದುಕು ಕಟ್ಟಿಕೊಳ್ಳಲು, ದೇಶಕ್ಕೆ ಕೊಡುಗೆ ನೀಡಲು ಒಳ್ಳೆಯ ದಾರಿ ಆಯ್ಕೆ ಮಾಡಿಕೊಂಡು ಉತ್ತಮ ದಾರಿಯಲ್ಲಿ ನಡೆಯಬೇಕು ಆರ್ಥಿಕ ಅಭಿವೃದ್ಧಿ ಹೊಂದಬೇಕು” ಎಂದರು.

ಶಾಲಾ ಮಕ್ಕಳಿಗೆ ಗೌರಿ ಗಣೇಶ ಹಬ್ಬದ ಶುಭಾಶಗಳನ್ನು ತಿಳಿಸಿದರು. ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಬಲರಾಮ, ಮತ್ತಿತರ ಅಧಿಕಾರಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...