ಹಾಸನ | ಸಹಕಾರ ಸಂಘಗಳ ಸ್ಥಾಪನೆಯಿಂದ ಆರ್ಥಿಕ ಬಲವರ್ಧನೆ ಸಾಧ್ಯ: ಶಾಸಕ ಸ್ವರೂಪ್ ಪ್ರಕಾಶ್

Date:

ಸಹಕಾರ ಸಂಘಗಳ ಸ್ಥಾಪನೆಯಿಂದ ಮಹಿಳೆಯರಿಗೆ ಸ್ವಯಂ ಉದ್ಯೋಗದ ಜೊತೆಗೆ ಆರ್ಥಿಕ ಬಲವರ್ಧನೆಯು ಸಾಧ್ಯ ಎಂದು ಶಾಸಕ ಸ್ವರೂಪ್ ಪ್ರಕಾಶ್ ಅಭಿಪ್ರಾಯಪಟ್ಟರು.

ಹಾಸನ ತಾಲೂಕಿನ ನಂಜೆ ದೇವರ ಕಾವಲ್ ಗ್ರಾಮದಲ್ಲಿ ಇಂದು ಸಮುದಾಯ ಭವನ ಹಾಗೂ ಹಾಲು ಉತ್ಪಾದಕರ ಸಹಕಾರ ಸಂಘ ಉದ್ಘಾಟಿಸಿ ಮಾತನಾಡಿದ ಅವರು, “ಹಾಲು ಉತ್ಪಾದನೆಯಲ್ಲಿ ಹಾಸನ ಹಾಲು ಒಕ್ಕೂಟ ರಾಜ್ಯದಲ್ಲಿ ಎರಡನೇ ಸ್ಥಾನ ಗಳಿಸಿದೆ. ಇದಕ್ಕೆ ಹಲವರ ಕೊಡುಗೆ ಇದೆ. ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು, ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರ ಪರಿಕಲ್ಪನೆಗೆ ಅನುಗುಣವಾಗಿ ಹಾಸನದಲ್ಲಿ ಕ್ಷೀರ ಉತ್ಪನ್ನ ಹೆಚ್ಚಾಗುತ್ತಿದೆ. ಇದರಿಂದ ಸಾವಿರಾರು ಮಹಿಳೆಯರು ತಮ್ಮ ಬದುಕನ್ನು ಕಟ್ಟಿಕೊಂಡಿದ್ದಾರೆ. ಅಲ್ಲದೆ ಹಲವು ಬಡ ಕುಟುಂಬಗಳು ಹೈನುಗಾರಿಕೆ ಹಾಗೂ ಹಾಲು ಉತ್ಪಾದನೆಯಿಂದ ಲಾಭಾಂಶ ಕಂಡುಕೊಂಡಿವೆ. ಇದಕ್ಕೆ ಇನ್ನಷ್ಟು ಉತ್ತೇಜನ ನೀಡುವ ನಿಟ್ಟಿನಲ್ಲಿ ಪ್ರತಿ ಹಳ್ಳಿಗಳಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘಗಳ ಸ್ಥಾಪನೆಗೆ ಮುಂದಾಗಿದ್ದೇವೆ” ಎಂದರು.

“ಗ್ರಾಮದಲ್ಲಿ ಸ್ಥಾಪನೆ ಆಗಿರುವ ವಿವಿಧೋದ್ದೇಶ ಸಹಕಾರ ಸಂಘದಿಂದ ಸುತ್ತಮುತ್ತಲ ಗ್ರಾಮದ ಜನರಿಗೆ ಹಲವು ಅನುಕೂಲಗಳು ಇವೆ, ಕೇವಲ ಹಾಲು ಉತ್ಪಾದನೆ ಮಾತ್ರವಲ್ಲದೆ, ವಿವಿಧ ಉದ್ದೇಶಗಳಿಗೆ ಈ ಸಂಘವನ್ನು ಬಳಸಿಕೊಳ್ಳಬಹುದು, ತಾವು ಬೆಳೆದ ಬೆಳೆಗಳು, ಔಷಧಿ, ಅಗತ್ಯ ವಸ್ತುಗಳ ಮಾರಾಟದ ವ್ಯವಸ್ಥೆಗೂ ಸಂಬಂಧಿಸಿದ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಿ ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಹಾಸನ | ದಸರಾ ಆಹ್ವಾನ ತಿರಸ್ಕರಿಸುವಂತೆ ಸಾಹಿತಿ ಬಾನು ಮುಷ್ತಾಕ್‌ಗೆ ಮನವಿ

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸೋಮನಹಳ್ಳಿ ನಾಗರಾಜ್ ಮಾತನಾಡಿ, “ರೈತರಿಗೆ ಹಾಸನ ಜಿಲ್ಲಾ ಸಹಕಾರ ಬ್ಯಾಂಕ್‌ನಿಂದ ಹತ್ತು ಹಲವು ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಕೇವಲ ಸಾಲ ನೀಡುವುದಲ್ಲದೆ ಇನ್ನಿತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜನರು ಇದರ ಬಗ್ಗೆ ಮಾಹಿತಿ ಪಡೆದು, ಸದುಪಯೋಗ ಪಡೆದುಕೊಳ್ಳಬೇಕು. ಗ್ರಾಮದಲ್ಲಿ ಆರಂಭವಾಗಿರುವ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಆಹಾರ ಉತ್ಪನ್ನಗಳ ಮಾರಾಟಕ್ಕೂ ಅವಕಾಶ ಕಲ್ಪಿಸಬಹುದು. ಬಿತ್ತನೆ ಬೀಜ ಹಾಗೂ ಇನ್ನಿತರ ವಸ್ತುಗಳ ವ್ಯಾಪಾರ ವಹಿವಾಟಿಗೆ ಕೂಡ ಸಂಘ ಅನುಕೂಲ ಆಗಲಿದೆ. ಹಾಲನ್ನು ಉತ್ಪಾದನೆ ಮಾಡಿ ಶೇಖರಣೆ ಮಾಡಲು ಬಲ್ಕ್ ಮಿಲ್ಕ್ ಕೂಲರ್ ಸ್ಥಾಪನೆ ಮಾಡಲಾಗಿದೆ. ಇದರ ಸದುಪಯೋಗ ಪಡಿಸಿಕೊಳ್ಳಬೇಕು” ಎಂದು ಮನವಿ ಮಾಡಿದರು.

ಸಹಕಾರ ಇಲಾಖೆ ರೈತರ, ಬಡವರ ಆರ್ಥಿಕ ಕ್ಷೇಮಾಭಿವೃದ್ಧಿಗೆ ಕೆಲಸ ಮಾಡುತ್ತಿದೆ. ವಿವಿಧೋದ್ದೇಶ ಸಹಕಾರ ಸಂಘವನ್ನು ಎಲ್ಲಾ ನಿರ್ದೇಶಕರು ಹಾಗೂ ಪದಾಧಿಕಾರಿಗಳು ಒಗ್ಗಟ್ಟಾಗಿ ಒಳ್ಳೆಯ ರೀತಿಯಲ್ಲಿ ನಡೆಸಿಕೊಂಡು ಹೋದಲ್ಲಿ ಮುಂದಿನ ಪೀಳಿಗೆಗೆ ಉತ್ತಮ ಸೌಲಭ್ಯ ಒದಗಿಸಲು ಸಾದ್ಯ ಇದಕ್ಕೆ ಪೂರಕ ಸಹಕಾರ ಬೇಕಾದಲ್ಲಿ ಕೇಂದ್ರ ಸಹಕಾರ ಬ್ಯಾಂಕ್ ನೆರವು ಪಡೆಯಲು ಮನವಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...