ಹಾಸನ ನಗರದ ಮಲ್ನಾಡ್ ಹಿಪೋಕ್ಯಾಂಪಸ್ ಇಂಟರ್ ನ್ಯಾಷನಲ್ ಶಾಲೆ ವತಿಯಿಂದ ರಸ್ತೆ ಸುರಕ್ಷತೆ ಮಾಸಾಚರಣೆ ಅಂಗವಾಗಿ ನಗರದ ಸಾರ್ವಜನಿಕರಲ್ಲಿ ರಸ್ತೆ ಸುರಕ್ಷತೆ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ವನ್ನು ಸಂಚಾರ ಪೊಲೀಸ್ ಠಾಣೆ ಸಹಕಾರದೊಂದಿಗೆ ಇಂದು ಆಯೋಜಿಸಲಾಗಿತ್ತು.
ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಪಿಎಸ್ಐ ಶ್ರೀನಿವಾಸ್, ರಸ್ತೆ ಸುರಕ್ಷತೆ ಮಹತ್ವ, ಸಂಚಾರ ನಿಯಮಗಳ ಪಾಲನೆ ಹಾಗೂ ಹಾಗೂ ಕಾನೂನು ಅರಿವಿನ ಬಗ್ಗೆ ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ರಸ್ತೆ ಅಪಘಾತ ತಡೆಯಲು ಎಲ್ಲರೂ ಜವಾಬ್ದಾರಿಯಿಂದ ವರ್ತಿಸಬೇಕೆಂದು ಅವರು ಕರೆ ನೀಡಿದರು.
ಇದನ್ನೂ ಓದಿದ್ದೀರಾ?ಹಾಸನ | ಸ್ವಚ್ಛತೆ ಎಲ್ಲರಿಗೂ ಪ್ರೇರಣೆಯಾಗಲಿ ನ್ಯಾಯಾಧೀಶೆ ಹೇಮಾವತಿ ಸಲಹೆ
ಈ ಸಂದರ್ಭದಲ್ಲಿ ಶಾಲೆಯ ವಿದ್ಯಾರ್ಥಿಗಳು ಅಣುಕು ನಾಟಕದ ಮೂಲಕ ಸಂಚಾರ ಸೂಚನೆಗಳನ್ನು ಹೇಗೆ ಪಾಲಿಸಬೇಕು ಹಾಗೂ ಜವಾಬ್ದಾರಿಯುತ ನಾಗರಿಕರಾಗಿ ಹೇಗೆ ವರ್ತಿಸಬೇಕು ಎಂಬ ಸಂದೇಶವನ್ನು ಮನಮುಟ್ಟುವ ರೀತಿಯಲ್ಲಿ ಪ್ರದರ್ಶಿಸಿದರು.
ಅಲ್ಲದೆ ಶಾಲೆಯ ವಿದ್ಯಾರ್ಥಿಗಳು ಸಂಚಾರಿ ಪೊಲೀಸರ ಸಹಕಾರದೊಂದಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ರಸ್ತೆ ಸುರಕ್ಷತೆ ಕುರಿತು ಜಾಗೃತಿ ಜಾಥಾ ನಡೆಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.





