ಹಾಸನ | ಖಾರಿಫ್ ಬೆಳೆಗಳಿಗೆ ಮಾತ್ರ ಹೇಮಾವತಿ ನಾಲೆಗಳ ನೀರು ಬಳಸಿ: ರೈತರಿಗೆ ಸೂಚನೆ

Date:

ಹೇಮಾವತಿ ಜಲಾಶಯ ಯೋಜನೆಯ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರೂ, ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್.ರಾಜಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಕೈಗೊಂಡ ತೀರ್ಮಾನದ ಮೇರೆಗೆ ಹೇಮಾವತಿ ಜಲಾಶಯದಿಂದ 2025-26ನೇ ಸಾಲಿಗೆ ಖಾರಿಫ್ ಅವಧಿಯ ಬೆಳೆಗಳಿಗೆ ನೀರನ್ನು ಸರಬರಾಜು ಮಾಡಲಾಗುತ್ತಿದೆ ಎಂದು ಚನ್ನರಾಯಪಟ್ಟಣ ಹೇಮಾವತಿ ನಾಲಾ ವೃತ್ತದ ಸೂಪರೀಟೆಂಡಿಂಗ್ ಇಂಜಿನಿಯರ್ ತಿಳಿಸಿದ್ದಾರೆ.

ಅದರನ್ವಯ, ಜು.16 ರಿಂದ ನ.30ರವರೆಗೆ ಹೇಮಾವತಿ ಎಡದಂಡ ನಾಲೆ ಹಾಗೂ ನದಿ ಅಣೆಕಟ್ಟು ನಾಲೆಗಳಾದ ಶ್ರೀರಾಮದೇವರ ಉತ್ತರ ನಾಲೆ. ಹೇಮಗಿರಿ ನಾಲೆ, ಅಕ್ಕಿಹೆಬ್ಬಾಳು ನಾಲೆ, ಮಂದಗೆರೆ ಎಡದಂಡೆ ಮತ್ತು ಬಲದಂಡೆ ನಾಲೆಗಳಲ್ಲಿ ಈ ಕೆಳಕಂಡಂತೆ ಖುಷ್ಕಿ ಹಾಗೂ ಭತ್ತದ ಬೆಳೆಗಾಗಿ ನೀರನ್ನು ಹರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಮೇಲ್ಕಂಡ ನೀರಿನ ನಿಯಂತ್ರಣವನ್ನು ಹೇಮಾವತಿ ಜಲಾಶಯದಲ್ಲಿ ಇರುವ ನೀರಿನ ಶೇಖರಣೆ ಮತ್ತು ಮಳೆಯನ್ನು ಆಧರಿಸಿ, ಜಲಾಶಯಕ್ಕೆ ಹರಿದು ಬರಬಹುದಾದ ಪರಿಮಾಣವನ್ನು ಅಂದಾಜು ಮಾಡಲಾಗಿದ್ದು, ಇಂತಹ ನಿಯಂತ್ರಣ ಪ್ರಾಕೃತಿಕ ಅಥವಾ ನೈಸರ್ಗಿಕ ವ್ಯತ್ಯಾಸದಿಂದ ನೀರಿನ ಕೊರತೆ ಉಂಟಾಗಿ ಬೆಳೆ ನಷ್ಟವಾದಲ್ಲಿ ಇಲಾಖೆಯವರು ಜವಾಬ್ದಾರರಲ್ಲ ಹಾಗೂ ರೈತ ಬಾಂಧವರಿಗೆ ಇದರಿಂದ ಯಾವ ಪರಿಹಾರ ಕೇಳುವ ಹಕ್ಕೂ ಇರುವುದಿಲ್ಲ ಎಂದೂ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೀರಿನ ನಿಯಂತ್ರಣ ಸೌಲಭ್ಯವನ್ನು ರೈತರು ಕೃಷಿ ಅಧಿಕಾರಿಗಳ ಸಲಹೆ ಪಡೆದು ಸೂಕ್ತ ಬೆಳೆಗಳನ್ನು ಅಳವಡಿಸಿ ಸದುಪಯೋಗ ಪಡೆಯಬೇಕೆಂದು ತಿಳಿಸಿದ್ದಾರೆ. ರೈತ ಬಾಂಧವರು ನಿಗದಿತ ಬೆಳೆಯನ್ನೇ ಬೆಳೆಯತಕ್ಕದ್ದು, ತಿಳಿಸಿರುವ ಬೆಳೆಗಳಿಗೆ ವಿರುದ್ಧವಾಗಿ ಬೇರೆ ಬೆಳೆ ಬೆಳೆದಲ್ಲಿ ರ್ನಾಟಕ ನೀರಾವರಿ ಕಾಯ್ದೆಯ ಹಾಗೂ ಚಾಲ್ತಿಯಲ್ಲಿರುವ ನಿಯಮಾವಳಿಗಳ ಪ್ರಕಾರ ದಂಡ ಕರವನ್ನು ವಿಧಿಸಲಾಗುವುದು ಹಾಗೂ ಆಗಬಹುದಾದ ನೀರಿನ ಕೊರತೆ ಮತ್ತು ಬೆಳೆ ನಷ್ಕಕ್ಕೆ ರೈತರೇ ಜವಾಬ್ದಾರರಾಗುತ್ತಾರೆ ಎಂದು ಇಂಜಿನಿಯರ್ ಎಚ್ಚರಿಕೆ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಹಾಸನ | ಜಿಲ್ಲೆಯಲ್ಲಿ ಹೆಚ್ಚಾದ ಹಠಾತ್ ಸಾವು: ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಒತ್ತಾಯಿಸಿ ದುಂಡು ಮೇಜಿನ ಸಭೆ

ವಿವಿಧ ವಿತರಣಾ ನಾಲೆಗಳಲ್ಲಿ ನೀರು ಬಿಡುವ ಮತ್ತು ನಿಲ್ಲಿಸುವ ಅವಧಿಯ ದಿನಾಂಕವನ್ನು ಆಯಾ ವಿಭಾಗಕ್ಕೆ ಸಂಬಂಧಿಸಿದಂತೆ ಎಕ್ಸಿಕ್ಯುಟಿವ್ ಇಂಜಿನಿಯರ್‌ರುಗಳು ಪ್ರತ್ಯೇಕವಾಗಿ ಪ್ರಕಟಣೆ ಹೊರಡಿಸಿ ಅಚ್ಚುಕಟ್ಟು ಪ್ರದೇಶದ ಗ್ರಾಮ ಪಂಚಾಯಿತಿಗಳಿಗೆ ಹಾಗೂ ರೈತ ಬಾಂಧವರಿಗೆ ತಲುಪಿಸಿ ಸೂಕ್ತ ತಿಳುವಳಿಕೆ ನೀಡುವುದು. ನೀರಾವರಿಗೆ ಸಂಬಂಧಪಟ್ಟ ವಿತರಣಾ ನಾಲಾವಾರು, ಗ್ರಾಮವಾರು, ಸರ್ವೆ ನಂಬರು, ಮುಂತಾದ ಮಾಹಿತಿಗೆ ಸಂಬಂಧಿಸಿದಂತೆ ವಿಭಾಗ ಹಾಗೂ ಉಪ ವಿಭಾಗ ಕಚೇರಿಗಳಲ್ಲಿ ಪಡೆಯಬಹುದು. ನೀರನ್ನು ನಿಲ್ಲಿಸುವ ಅವಧಿಯನ್ನು ಯಾವುದೇ ಸಂದರ್ಭದಲ್ಲಿ ಅಥವಾ ಯಾವುದೇ ಕಾರಣಗಳಿಗಾಗಿಯೂ ಮುಂದುವರೆಸಲಾಗುವುದಿಲ್ಲ ಎಂದು ಚನ್ನರಾಯಪಟ್ಟಣ ಹೇಮಾವತಿ ನಾಲಾ ವೃತ್ತದ ಸೂಪರೀಟೆಂಡಿಂಗ್ ಇಂಜಿನಿಯರ್ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...