ಹಾಸನ | ಕೋಟ್ಯಂತರ ರೂ. ಮೌಲ್ಯದ ಚಿನ್ನ ಕದ್ದು ಪರಾರಿ; ಬ್ಯಾಂಕ್‌ನ ಹೌಸ್‌ ಕೀಪರ್‌ಗಾಗಿ ಶೋಧ

Date:

ಗಿರವಿ ಇಟ್ಟಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನವನ್ನು ಬ್ಯಾಂಕ್‌ನ ಹೌಸ್‌ ಕೀಪರ್‌ ಕದ್ದು ಪರಾರಿಯಾಗಿರುವ ಘಟನೆ ಜಿಲ್ಲೆಯ ಅರಕಲಗೂಡು ತಾಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದೆ.

ಬೆಳವಾಡಿ ಗ್ರಾಮದ ಎಸ್‌ಬಿಐ ಬ್ಯಾಂಕ್‌ನಲ್ಲಿ ಲವ ಬಿ ಎನ್‌ ಎಂಬಾತ ಹೊರಗುತ್ತಿಗೆ ನೌಕರನಾಗಿ ಕೆಲಸ ಮಾಡುತ್ತಿದ್ದ. ಅಸಲಿ ಚಿನ್ನದ ಜಾಗದಲ್ಲಿ ನಕಲಿ ಚಿನ್ನ ಇಟ್ಟು, ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ಲಪಟಾಯಿಸಿ ಪರಾರಿಯಾಗಿದ್ದಾನೆ. ಆರೋಪಿಯನ್ನು ಬಂಧಿಸಲು ಪೊಲೀಸರು ಬಲೆ ಬೀಸಿದ್ದಾರೆ.

ಹೊರಗುತ್ತಿಗೆ ನೌಕರ ಲವ ಬಿ ಎನ್‌ ಎಂಬಾತನ ವಿರುದ್ಧ ಬ್ಯಾಂಕ್‌ ದೂರು ದಾಖಲಿಸಿದೆ. ಈತನ ವಿರುದ್ಧ ಒಂದು ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಚಿನ್ನ ಕಳ್ಳತನ ಮಾಡಲಾದ ಆರೋಪ ಇದೆ. ಮೇ 5ರಂದು ಬ್ಯಾಂಕಿನ ಗಿರವಿ ವಿಭಾಗದ ಚಿನ್ನ ಪರಿಶೀಲನೆ ವೇಳೆ ಸಿಬ್ಬಂದಿಯ ವಂಚನೆ ಬಯಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
Bank Gold Theft In Hassan By It's Housekeeper
ಆರೋಪಿ ಲವ ವಿರುದ್ಧ ದಾಖಲಾದ ಎಫ್‌ಐಆರ್‌ ಪ್ರತಿ

ಬ್ಯಾಂಕ್‌ ಲಾಕರ್‌ನಲ್ಲಿ ಚಿನ್ನ ಇರುವ 30 ಪ್ಯಾಕೆಟ್‌ಗಳಲ್ಲಿ 18 ಪ್ಯಾಕೆಟ್‌ ಇದ್ದ ಚಿನ್ನವನ್ನು ಎಗರಿಸಿ, ಅವುಗಳಲ್ಲಿ ನಕಲಿ ಚಿನ್ನವನ್ನು ಇಟ್ಟ ಕಾರಣ ವಂಚನೆಯು ತಡವಾಗಿ ಬೆಳಕಿಗೆ ಬಂದಿದೆ. 2013ರಿಂದಲೂ ಬ್ಯಾಂಕ್‌ ಹೌಸ್‌ ಕೀಪರ್‌ ಆಗಿ ಲವ ಕೆಲಸ ಮಾಡುತ್ತಿದ್ದ. ಬ್ಯಾಂಕ್‌ ಅಧಿಕಾರಿಗಳ ವಿಶ್ವಾಸ ಗಳಿಸಿದ್ದ ಈತ ಚಿನ್ನದ ಸಾಲದ ದಸ್ತಾವೇಜು ಉಸ್ತುವಾರಿಯನ್ನೂ ವಹಿಸಿದ್ದ. ಆದರೀಗ ಚಿನ್ನದ ದಸ್ತಾವೇಜು ಮಾಡುವ ಬದಲು ಆತನೇ ಚಿನ್ನ ಕದ್ದು ಪರಾರಿಯಾಗಿದ್ದಾನೆ.

ಈ ಸುದ್ದಿ ಓದಿದ್ದೀರಾ? ಹೊರಗುತ್ತಿಗೆ ನೌಕರರಿಗೂ ನೇರಪಾವತಿ ಖಚಿತ; ಪೌರಾಡಳಿತ ಸಚಿವ ರಹೀಂಖಾನ್ ಭರವಸೆ

ಕೊಣನೂರು ಪೊಲೀಸ್‌ ಠಾಣೆಯಲ್ಲಿ ಎಸ್‌ಬಿಐ ಅನುರಾಧಾ ಅವರು ದೂರು ದಾಖಲಿಸಿದ್ದಾರೆ. ಎರಡು ಪ್ಯಾಕೆಟ್‌ ಚಿನ್ನವನ್ನು ಸಂಪೂರ್ಣವಾಗಿ ಎಗರಿಸಿ, 10 ಪ್ಯಾಕೆಟ್‌ಗಳಲ್ಲಿ ನಕಲಿ ಚಿನ್ನವನ್ನು ತುಂಬಿದ್ದಾನೆ. ಎರಡು ಪ್ಯಾಕೆಟ್‌ ಚಿನ್ನದ ಕೊರತೆ ಕಂಡಿದ್ದನ್ನು ನೋಡಿ ಪರಿಶೀಲನೆ ನಡೆಸಿದಾಗ ಕಳ್ಳತನ ಬಯಲಾಗಿದೆ. ಇದರಿಂದಾಗಿ ಸುತ್ತಮುತ್ತಲಿನ ಗ್ರಾಮಸ್ಥರು ಬ್ಯಾಂಕ್‌ನಲ್ಲಿ ಚಿನ್ನವನ್ನು ಗಿರವಿ ಇಡಲು ಭಯಪಡುವಂತಾಗಿದೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...