ಹಾಸನ | ಹಲವೆಡೆ ಉತ್ತಮ ಮಳೆ; ಕಾಫಿ ಕೃಷಿಕರ ಮೊಗದಲ್ಲಿ ಮಂದಹಾಸ

Date:

ಹಾಸನ ಜಿಲ್ಲೆಯ ಹಲವೆಡೆ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆಯಾಗಿದೆ. ಬಿರು ಬಿಸಿಲಿನ ತಾಪದಿಂದ ಕಂಗೆಟ್ಟಿದ್ದ ರೈತರ ಮುಖದಲ್ಲಿ ಇದೀಗ ಸಂತಸ ಮನೆ ಮಾಡಿದೆ.

ಯಸಳೂರು, ಹೆತ್ತೂರು ಹೋಬಳಿ ವ್ಯಾಪ್ತಿಯ ಹೊಂಗಡಹಳ್ಳ, ಮೊಕನಮನೆ, ಜೇಡಿಗದ್ದೆ ಗ್ರಾಮಗಳಲ್ಲಿ ಆಲಿಕಲ್ಲು ಸಹಿತ ಉತ್ತಮ ಮಳೆಯಾಗಿದೆ. ಮಳೆಯಾಗಿರುವ ಭಾಗಗಳಲ್ಲಿ ತಂಪಿನ ವಾತಾವರಣ ನಿರ್ಮಾಣವಾಗಿದೆ. ವಳಲಹಳ್ಳಿ, ಹಡ್ಲಹಳ್ಳಿ, ಹಿರದನಹಳ್ಳಿ, ಕರಡಿಗಾಲ ಹಾಗೂ ಜೇಡಿಗದ್ದೆ ಗ್ರಾಮಗಳಲ್ಲಿ 2.5 ಸೆಂ.ಮೀ ಮಳೆಯಾಗಿದೆ. ಐಗೂರು, ಚಿಕ್ಕಕುಂದೂರು, ಹಳ್ಳಿಗದ್ದೆ, ಉಚ್ಚಂಗಿ, ಮಲಗಳ್ಳಿ, ಹುಲಗತ್ತೂರು, ಪಾಲಹಳ್ಳಿ, ಕರಗೂರು ಸೇರಿ ಇತರ ಸುತ್ತ ಮುತ್ತಲ ಗ್ರಾಮಗಳಲ್ಲಿ ತುಂತುರು ಮಳೆಯಾಗಿದೆ.

ಕಾಫಿ ತೋಟಗಳಿಗೆ ನೀರಿಲ್ಲದೆ, ನೀರು ಹಾಯಿಸಲು ಕಷ್ಟಪಡುತ್ತಿದ್ದ ಕಾಫಿ ಬೆಳೆಗಾರರು ಈಗ ನಿಟ್ಟುಸಿರು ಬಿಟ್ಟಿದ್ದಾರೆ. ಇನ್ನೂ ಕೆಲ ದಿನ ಇದೇ ರೀತಿ ಮಳೆ ಬಂದರೆ ಭೂಮಿ ತಂಪಾಗುವುದರ ಜೊತೆಗೆ ಜಾನುವಾರುಗಳಿಗೆ ಅನುಕೂಲವಾಗಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...