ಹಾಸನ | ಸರ್ಕಾರದಿಂದ ಕಳಪೆ ಬಿತ್ತನೆಬೀಜ ವಿತರಣೆ; ಬೆಳೆನಷ್ಟ ಪರಿಹಾರಕ್ಕೆ ಪ್ರತಿಕೃತಿ ದಹಿಸಿ ಪ್ರತಿಭಟನೆ

Date:

ಸರ್ಕಾರವು ಕಂಪೆನಿಗಳ ಮೂಲಕ ರೈತರಿಗೆ ಮೆಕ್ಕೆಜೋಳದ ಕಳಪೆ ಬಿತ್ತನೆಬೀಜ ನೀಡಲಾಗಿದ್ದು, ಬೆಳೆಗೆ ಆಗಿರುವ ನಷ್ಟದ ಬಗ್ಗೆ ಪರಿಹಾರ ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಸಾಮೂಹಿಕ ನಾಯಕತ್ವದಲ್ಲಿ ನಕಲಿ ಕಂಪನಿಗಳ ಪ್ರತಿಕೃತಿ ದಹಿಸಿ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಮುತ್ತಿಗೆ ಹಾಕಿ ಘೋಷಣೆ ಕೂಗುವ ಮೂಲಕ ತಮ್ಮ ಆಕ್ರೋಶ ಹೊರ ಹಾಕಿದರು.

ಹಾಸನ ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ನಕಲಿ ಕಂಪೆನಿಗಳ ಪ್ರತಿಕೃತಿಯನ್ನು ಹೆಗಲು ಮೇಲೆ ಹೊತ್ತುಕೊಂಡು ಹೊರಟ ಪ್ರತಿಭಟನಾ ಮೆರವಣಿಗೆಯು ಎನ್ ಆರ್ ವೃತ್ತ, ಬಿಎಂ ರಸ್ತೆ ಮೂಲಕ ಸಂತೇಪೇಟೆ ವೃತ್ತಕ್ಕೆ ಬಂದು ಮಾನವ ಸರಪಳಿ ನಿರ್ಮಿಸಿ ಪ್ರತಿಕೃತಿ ಸುಟ್ಟುಹಾಕಿ ಪ್ರತಿಭಟನೆ ನಡೆಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಸಾಮೂಹಿಕ ನಾಯಕತ್ವದ ನಾಯಕ ಗಂಗಾಧರ್ ಮಾತನಾಡಿ, “ಉತ್ತಮ ಮಳೆಯಾಗಿರುವ ಕಾರಣ ಈ ಬಾರಿ ಜೂನ್ ತಿಂಗಳಲ್ಲೇ ಜಲಾಶಯಗಳು ಭರ್ತಿಯಾಗಿದೆ. ರಾಜ್ಯದಲ್ಲಿ ಉತ್ತಮ ಬಿತ್ತನೆಯಾಗಿದೆ. ಆದರೆ ಕೃಷಿ ಮತ್ತು ತೋಟಗಾರಿಕಾ ಇಲಾಖೆ ಬಿತ್ತನೆಬೀಜ ಸಂಬಂಧಿತ ಕಾಯಿದೆ ಪರಿಪಾಲನೆ ಮಾಡುವಲ್ಲಿ ಸೋತಿದೆ. ಅಧಿಕೃತವಾಗಿ ಸರ್ಕಾರದ ಬಿಡ್ಡಿಗೆ ಮತ್ತು ಕೃಷಿ ಇಲಾಖೆಗೆ ಸರಬರಾಜು ಮಾಡದಿರುವ ಕಂಪೆನಿಗಳ ಜತೆಗೆ ಕೃಷಿ ನಿರ್ದೇಶಕರು ಶಾಮಿಲಾಗಿ ರೈತರಿಗೆ ಕಳಪೆ ಬಿತ್ತನೆಬೀಜ ನೀಡಿರುವ ಮತ್ತು ಕಂಪೆನಿಯವರು ಜಂಟಿ ಕೃಷಿ ನಿರ್ದೇಶಕರ ನೇತೃತ್ವದಲ್ಲಿ ರೈತರಿಗೆ ಆಗಿರುವ ನಷ್ಟವನ್ನು ತುಂಬಿಕೊಡಬೇಕು. ಸಾಮೂಹಿಕವಾಗಿ ರೈತರಿಗೆ ಜಿಲ್ಲಾಡಳಿತದಿಂದ ಉಚಿತವಾಗಿ ಬೆಳೆ ವಿಮೆ ಮಾಡಿಕೊಡಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಳಪೆ ಬಿತ್ತನೆಬೀಜವನ್ನು ಕೃಷಿ ಇಲಾಖೆಯವರ ಹೆಸರು ಬಳಸಿಕೊಂಡು ಪ್ರಚಾರದಲ್ಲಿ ತೊಡಗಿರುವರ ವಿರುದ್ಧ ಮೊಕದ್ದಮೆ ದಾಖಲಿಸಿ ಮತ್ತು ಕೃಷಿ ಇಲಾಖೆಗೆ ಸರಬರಾಜು ಮಾಡದೆ ಇರುವ ಕಂಪನಿಯವರನ್ನು ಅಂಗಡಿ ಮುಖಾಂತರ ಮಾರುವುದನ್ನು ನಿರ್ಬಂಧಿಸಬೇಕು. ಬೆಳೆ ಸಮೀಕ್ಷೆಯನ್ನು ತಾಲೂಕು ಆಡಳಿತ ಅಧಿಕಾರಿಗಳು ಮತ್ತು ಕೃಷಿ ಇಲಾಖೆಯ ಅಧಿಕಾರಿಗಳು ಜೊತೆಗೂಡಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಪ್ರತಿ ಹಳ್ಳಿಗಳಲ್ಲಿಯೂ ಸಮೀಕ್ಷೆ ನಡೆಸಿ ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಬೇಕು” ಎಂದು ಒತ್ತಾಯಿಸಿದರು.

“ಬೆಳೆ ನಾಶವಾಗಿರುವ ರೈತರಿಗೆ ಕಂಪೆನಿಯವರಿಂದಲೇ ಕೃಷಿ ಇಲಾಖೆಯವರು ಪ್ರತಿ ಎಕರೆಗೆ 50 ಸಾವಿರ ರೂ. ಪರಿಹಾರವನ್ನು ಕೊಡಿಸಕೊಡಬೇಕು. ಹಾಸನ ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕರ ಅನುಮತಿ ಇಲ್ಲದೆ ಹೆಸರನ್ನು ಅವರ ಅನುಮತಿ ಇಲ್ಲದೆ ಬಳಸಿಕೊಂಡು ಕರಪತ್ರವನ್ನು ಮುದ್ರಿಸಿ ಇಲಾಖೆಯನ್ನು ದುರುಪಯೋಗ ಪಡಿಸಿಕೊಂಡಿರುವ ಬಿತ್ತನೆಬೀಜದ ಹೈಟೆಕ್ ಕಂಪೆನಿ ಮತ್ತು ಏಜೆನ್ಸಿ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಇದನ್ನೂ ಓದಿದ್ದೀರಾ? ಮಂಡ್ಯ | ಕೆಲಸ ನೀಡದ ಕೂಲಿಕಾರರ ವಿರೋಧಿ ಸಿಇಒ ವರ್ಗಾವಣೆ ಆಗಬೇಕು: ಸಿಪಿಐಎಂ

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಸಾಮೂಹಿಕ ನಾಯಕತ್ವದ ಅಧ್ಯಕ್ಷೀಯ ಮಂಡಳಿಯ ಸದಸ್ಯೆ ಮುಖಂಡರಾದ ಚುಕ್ಕಿ ನಂಜುಂಡಸ್ವಾಮಿ, ತಿಪಟೂರು ಜಯಚಂದ್ರ ಶರ್ಮ, ಮೈಸೂರಿನ ಕಿರಣ್, ರೈತ ಸಂಘದ ಜಿಲ್ಲಾಧ್ಯಕ್ಷ ಮೂರ್ತಿ ಕಣಗಾಲ್, ಗ್ಯಾರಂಟಿ ರಾಮಣ್ಣ, ಮಂಜು ಬಿಟ್ಟಗೌಡನಹಳ್ಳಿ, ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಮರ್ಕುಲಿ ಪ್ರಕಾಶ್, ಹಾಸನ ತಾಲೂಕು ಅಧ್ಯಕ್ಷ ಬಿಟ್ಟಗೌಡನಹಳ್ಳಿ ಮಂಜುನಾಥ್, ಪಾಲಾಕ್ಷ ಮಾರನಹಳ್ಳಿ, ಶಿವಕುಮಾರ್ ಹಳೇಬೀಡು, ಶೇಷಣ್ಣ, ಕಾಂತರಾಜು ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...