ಹಾಸನ | ಅನುಭವ ಮಂಟಪದಲ್ಲಿ ಅಸ್ಪೃಶ್ಯರಿಗೆ ಪಾಠ ಪ್ರವಚನ ಕಲಿಸುತ್ತಿದ್ದರು: ಲೋಕೇಶ್ ಚಂದ್ರ

Date:

12ನೇ ಶತಮಾನದ ಬಸವಣ್ಣನವರ ಕಾಲಘಟ್ಟದಲ್ಲೇ ತಮ್ಮ ಅನುಭವ ಮಂಟಪದಲ್ಲಿ ಅಸ್ಪೃಶ್ಯರಿಗೆ ಪಾಠ ಪ್ರವಚನ ಕಲಿಸುತ್ತಿದ್ದರು ಎಂದು ದಲಿತ ಶೋಷಿತ ರಕ್ಷಣಾ ವೇದಿಕೆ ಸಂಸ್ಥಾಪಕ ರಾಜ್ಯಾಧ್ಯಕ್ಷ ಲೋಕೇಶ್ ಚಂದ್ರ ತಿಳಿಸಿದರು.

ಹಾಸನ ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಭೀಮ್ ಆ‌ರ್ಮಿಯಿಂದ ಹಮ್ಮಿಕೊಂಡಿದ್ದ ದಲಿತರ ಮೇಲಿನ ದೌರ್ಜನ್ಯ ತಡೆಗಟ್ಟಲು ಕಾನೂನು ಅರಿವು ಹಾಗೂ ವಿಚಾರ ಸಂಕಿರಣದಲ್ಲಿ ಮಾತನಾಡಿದರು.

“ಪರಿಶಿಷ್ಟ ಜಾತಿ/ಪಂಗಡಗಳು ಅಂದರೇನು ಎನ್ನುವುದನ್ನು ನೋಡಿದರೆ ಹಲವು ಜಾತಿಗಳನ್ನು ಪರಿಷ್ಕರಣೆಗೊಳಿಸಿ ಮಾಡಿದ ಪಟ್ಟಿಯನ್ನು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳೆಂದು ಕರೆಯುತ್ತೇವೆ. ಎಸ್‌ಸಿ/ಸ್‌ಟಿ ದೌರ್ಜನ್ಯ ತಡೆ ಕಾಯಿದೆಯು ಪರಿಶಿಷ್ಟ ಜಾತಿ 101 ಮತ್ತು ಪರಿಶಿಷ್ಟ ಪಂಗಡಗಳ 52 ಸೇರಿದಂತೆ ಒಟ್ಟು 153 ಜಾತಿಗಳಿಗೆ ಅನ್ವಯಿಸುತ್ತದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಸ್ಪೃಶ್ಯತೆ ನಿರ್ಮೂಲನೆ ಬಗ್ಗೆ ಯಾರ್‍ಯಾರು ಮುಂದಾಗಿದ್ದರೆಂಬ ವಿಚಾರದ ಇತಿಹಾಸ ತಿಳಿಯುವ ಅಗತ್ಯತೆ ಇದೆ. ಈಗ ಹಲವಾರು ಕಾಯಿದೆಗಳಿವೆ. ಅದರಲ್ಲಿ ಮಕ್ಕಳ ಮೇಲಿನ ರಕ್ಷಣಾ ಕಾಯಿದೆ, ಮಹಿಳಾ ಮೇಲಿನ ಕಾಯಿದೆ, ಎಸ್‌ಸಿ/ಸ್‌ಟಿ ದೌರ್ಜನ್ಯ ತಡೆ ಕಾಯಿದೆ ಸೇರಿದಂತೆ ಹಲವಾರು ಕಾಯಿದೆಗಳಿವೆ. ಕ್ರಿಶ್ತ ಪೂರ್ವದಲ್ಲಿ ಭಗವಾನ್ ಬುದ್ಧರು ಅಸ್ಪೃಶ್ಯತೆ ತೊಡೆದುಹಾಕಲು ಹೋರಾಡಿದವರು, ದೇಶದ ಇತಿಹಾಸದಲ್ಲಿ ಅವರೇ ಪ್ರಥಮರು. 12ನೇ ಶತಮಾನದಲ್ಲಿ ಬಸವಣ್ಣನವರು ಅನುಭವ ಮಂಟಪಗಳಲ್ಲಿ ಪಾಠ ಪ್ರವಚನ ಮಾಡುವುದರ ಮೂಲಕ ಅಸ್ಪೃಶ್ಯತೆ ಹೋಗಲಾಡಿಸಲು ಮುಂದಾದರು. ಬಸವಣ್ಣನವರ ಕಾಲಘಟ್ಟದಲ್ಲೇ ಅಸ್ಪೃಶ್ಯರಿಗೆ ಪಾಠ ಪ್ರವಚನ ಕಲಿಸುತ್ತಿದ್ದರು ಎಂಬುದನ್ನು ಕಾಣಬಹುದು” ಎಂದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಕಷ್ಟದಿಂದ ಬಂದವರು ಎಲ್ಲವನ್ನೂ ನಿಭಾಯಿಸಬಲ್ಲರು

ಕಾರ್ಯಕ್ರಮದಲ್ಲಿ ದೌರ್ಜನ್ಯ ತಡೆ ಕಾಯಿದೆ ಕುರಿತು ವಿಚಾರವನ್ನು ಸಿದ್ದರಾಜು ಕೆಂಪನಹಳ್ಳಿ ಮಂಡಿಸಿದರು. ಇದೇ ವೇಳೆ ಭೀಮ್ ಆರ್ಮಿ ರಾಜ್ಯ ಕಾರ್ಯಾಧ್ಯಕ್ಷ ಹೆಚ್ ಎಸ್ ಪ್ರದೀಪ್, ಪ್ರಗತಿಪರ ಚಿಂತಕ ಕೆ ಹೆಚ್ ಮೊಹಮ್ಮದ್ ಮುಸ್ಲಿಯಾರ್, ಭೀಮ್ ಆರ್ಮಿ ರಾಜ್ಯ ಉಪಾಧ್ಯಕ್ಷ ಜಯಕುಮಾರ್ ಹಾದಿಗೆ, ಬೇಲೂರು ತಾಲೂಕು ಅಧ್ಯಕ್ಷ ಕೀರ್ತಿ ಬಿ ಅಣ್ಣಪ್ಪ, ಆಲೂರು ತಾಲೂಕು ಅಧ್ಯಕ್ಷ ಜಗದೀಶ್ ನಿಡನೂರು, ಜಿಲ್ಲಾ ಉಪಾಧ್ಯಕ್ಷ ನವೀನ್ ಸಾಲಗಾಮೆ, ಖಜಾಂಚಿ ಎಂ ಸಿ ಮಂಜುನಾಥ, ತಾಲೂಕು ಅಧ್ಯಕ್ಷ ಡಿ ಕೆ ಹೇಮಂತ್, ಸಂಚಾಲಕ ಪರಮೇಶ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...