ಹಾಸನ | ಪೋಲಿಯೊ ಜಾಗೃತಿ ಅಭಿಯಾನದಲ್ಲಿ ₹30 ಕೋಟಿ ಬೆಲೆ ಬಾಳುವ ಶ್ವಾನ ಪ್ರದರ್ಶನ!

Date:

ಪೋಲಿಯೊ ನಿರ್ಮೂಲನೆಗಾಗಿ ಲಸಿಕೆ ಬಗ್ಗೆ ಪ್ರಾಮುಖ್ಯತೆ ತಿಳಿಸಲು ಹಾಸನ ನಗರದ ಮಲೆನಾಡು ಇಂಜಿನಿಯರಿಂಗ್ ಕಾಲೇಜಿನ ಆವರಣದಿಂದ ಹೇಮಾವತಿ ಪ್ರತಿಮೆವರೆಗೂ ಜಾಗೃತಿ ಅಭಿಯಾನ ಕೈಗೊಳ್ಳಲಾಯಿತು. ಈ ಮಧ್ಯೆ ₹30 ಕೋಟಿ ದುಬಾರಿ ಬೆಲೆ ಬಾಳುವ ಪಾಂಡಾ ಶ್ವಾನವನ್ನು(ಪಾಂಡಾ ಡಾಗ್) ಪ್ರದರ್ಶಿಸಲಾಯಿತು.

ರೋಟರಿ ಕ್ಲಬ್‌ನ ಅಧ್ಯಕ್ಷರಾದ ಬಿ.ವಿ ವಿಜಯ್ ರವರು ಮಾತನಾಡಿ, ಪೋಲಿಯೊ ಎಂಬುದು ಒಂದು ಮಾರಣಾಂತಿಕ ಕಾಯಿಲೆಯಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ರೋಟರಿ ಸಂಸ್ಥೆ ಸರ್ಕಾರದ ಜೊತೆ ಸೇರಿಕೊಂಡು ಇದರ ನಿರ್ಮೂಲನೆಗೆ ಕೆಲಸ ಮಾಡುತ್ತಿದೆ. ಸಾರ್ವಜನಿಕರು ನವಂಬ‌ರ್ ತಿಂಗಳಲ್ಲಿ ನಡೆಯುವ ಪೋಲಿಯೊ ಲಸಿಕೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಹಾಸನ 12

ಅಭಿಯಾನದಲ್ಲಿ ಹಾಸನ, ಮಲ್ನಾಡ್ ಇಂಜಿನಿಯರಿಂಗ್ ಕಾಲೇಜ್, ರೋಟರಿ ಕ್ಲಬ್ ಆಫ್ ಹಾಸನ ಹೊಯ್ಸಳ ರೋಟರಿ ಕ್ಲಬ್ ಆಫ್ ಚನ್ನರಾಯಪಟ್ಟಣ ವಿಷನ್, ಮತ್ತು ರಾಯಲ್ ಅಪೋಲ್ಲೋ ಇಂಟರ್‌ನ್ಯಾಶನಲ್ ಶಾಲೆಯ ಇಂಟರಾಕ್ಟ್‌ ಕ್ಲಬ್‌ನಿಂದ ಪೋಲಿಯೊ ಜಾಗೃತಿ ಅಭಿಯಾನವು ಜನರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಯಶಸ್ವಿಯಾಯಿತು. ಅದರಲ್ಲೂ ಅಪರೂಪದ ದುಬಾರಿಯಾಗಿ ಬೆಲೆ ಬಾಳುವ ಪಾಂಡಾ ಡಾಗ್ ಎಲ್ಲರನ್ನೂ ಆಕರ್ಷಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ:ಚಿಕ್ಕಮಗಳೂರು | ಮೂಲಸೌಕರ್ಯವನ್ನೇ ಕಾಣದ ಸಂಸೆ ಗ್ರಾಮ; ಅಧಿಕಾರಿ, ಜನಪ್ರತಿನಿಧಿಗಳ ನಿರ್ಲಕ್ಷ್ಯ

ಅಭಿಯಾನದ ಜಾಥಾದಲ್ಲಿ ರಾಯಲ್ ಅಪೋಲೋ ಇಂಟರ್ ನ್ಯಾಷನಲ್ ಶಾಲೆಯ ಪ್ರಾಂಶುಪಾಲ ರವಿಕುಮಾರ್, ಅಸಿಸ್ಟೆಂಟ್ ಗವರ್ನರ್ ರೋಟರಿಯೇನ್ ಮೋಹನ್, ಸದಸ್ಯರಾದ ವಿಜಯಕುಮಾರ್, ಪ್ರಕಾಶ್, ಶಿವಕುಮಾರ್, ಬಾಲಾಜಿ, ಕಾರ್ಯದರ್ಶಿ ನಳಿನಿ ಇನ್ನಿತರರು ಭಾಗವಹಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...