ಹಾಸನ | ಅಂತಾರಾಷ್ಟ್ರೀಯ ಬೂಕರ್ ಪುರಸ್ಕಾರ; ಬಾನು ಮುಷ್ತಾಕ್‌ ಕೃತಿ ಆಯ್ಕೆ

Date:

ಕನ್ನಡದ ಖ್ಯಾತ ಸಾಹಿತಿ ಬಾನು ಮುಷ್ತಾಕ್ ಅವರ ಸಣ್ಣಕತೆಗಳ ಅನುವಾದಿತ ಸಂಕಲನ ‘ಹಾರ್ಟ್ ಲ್ಯಾಂಪ್’ ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಪುರಸ್ಕಾರಕ್ಕೆ ಪರಿಗಣನೆಗೆ ಸಿದ್ಧವಾಗಿರುವ ಪಟ್ಟಿಯಲ್ಲಿ ಸೇರ್ಪಡೆಗೊಂಡಿದೆ.

ಬಾನು ಮುಷ್ತಾಕ್ ಅವರ ‘ಹಸೀನಾ ಮತ್ತು ಇತರ ಕತೆಗಳು’ ಕಥಾಸಂಕಲನವನ್ನು ದೀಪಾ ಭಸ್ತಿ ಅವರು ‘ಹಾರ್ಟ್ ಲ್ಯಾಂಪ್’ ಶೀರ್ಷಿಕೆಯೊಂದಿಗೆ ಇಂಗ್ಲಿಷ್‌ಗೆ ಅನುವಾದಿಸಿದ್ದರು.

“ಕನ್ನಡ ಭಾಷೆಯ ಕೃತಿಯೊಂದು ಬೂಕರ್ ಸ್ಪರ್ಧೆಗೆ ಪ್ರವೇಶ ಪಡೆದಿರುವುದು ಇದೇ ಮೊದಲ ಬಾರಿ. ಕುಟುಂಬ ಹಾಗೂ ಸಮುದಾಯದ ತುಮುಲಗಳನ್ನು ಹೃದಯಸ್ಪರ್ಶಿಯಾಗಿ ಪ್ರಾದೇಶಿಕ ಸೊಗಡಿನೊಂದಿಗೆ ಮುಷ್ತಾಕ್ ಅವರ ಕಥೆಗಳು ಕಟ್ಟಿಕೊಟ್ಟಿವೆ” ಎಂದು ತೀರ್ಪುಗಾರರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಂಚಿನಲ್ಲಿರುವ ಸಮುದಾಯಗಳಿಗೆ ದೀರ್ಘಕಾಲದಿಂದ ಧ್ವನಿಯಾಗಿರುವ ಹಾಸನ ಮೂಲದ ಮುಷ್ತಾಕ್ ಅವರು ನಾಮನಿರ್ದೇಶನದ ಬಗ್ಗೆ ಸಂತೋಷ ವ್ಯಕ್ತಪಡಿಸಿದ್ದು, “ಹಾರ್ಟ್ ಲ್ಯಾಂಪ್ ಸಂಕಲನ ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಪುರಸ್ಕಾರಕ್ಕೆ ಆಯ್ಕೆಯಾಗಿರುವುದು ʼಅತ್ಯುತ್ತಮ ಶಿವರಾತ್ರಿ ಉಡುಗೊರೆʼಯಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ವಿವಿಗಳನ್ನು ಮುಚ್ಚುವ ತೀರ್ಮಾನ ಕೂಡಲೇ ಹಿಂಪಡೆಯಲು ಸಿಪಿಐಎಂ ಆಗ್ರಹ

50 ಸಾವಿರ ಪೌಂಡ್(ಸುಮಾರು ₹55 ಲಕ್ಷ) ಮೊತ್ತದ ಬೂಕರ್ ಪ್ರಶಸ್ತಿಗೆ, ಪರಿಗಣನೆಯ ಪಟ್ಟಿಯಲ್ಲಿ ಒಟ್ಟು 13 ಕೃತಿಗಳು ಪ್ರವೇಶಪಡೆದಿವೆ.

ಅಂತಿಮ ಸುತ್ತಿಗೆ ಪ್ರವೇಶ ಪಡೆಯುವ 6 ಕೃತಿಗಳ ಪೈಕಿ ಒಂದನ್ನು ಬೂಕರ್ ಪ್ರಶಸ್ತಿಗೆ ಆಯ್ಕೆ ಮಾಡಲಾಗುವುದು. ಏಪ್ರಿಲ್ 8ರಂದು ಬೂಕರ್ ಪುರಸ್ಕಾರ ಘೋಷಣೆಯಾಗಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...