ಹಾಸನ | ಎಲ್ಲರಿಂದ ಸಮ್ಮತಿ ಸಿಕ್ಕರೆ ಮಾತ್ರ ಸ್ಪರ್ಧೆ: ಕೆ ಎಂ ರಾಜೇಗೌಡ

Date:

  • ಹಾಸನ ಕ್ಷೇತ್ರದ ಜೆಡಿಎಸ್ ಟಿಕೆಟ್ ಗೊಂದಲ ಕುರಿತು ಸ್ಪಷ್ಟನೆ
  • ನಾನು ಯಾರ ಪರ, ವಿರುದ್ಧವೂ ಇಲ್ಲ ಎಂದ ರಾಜೇಗೌಡ

ನಾನು ಯಾರ ಪರವಾದ ಅಭ್ಯರ್ಥಿಯಲ್ಲ. ಜೆಡಿಎಸ್‌ನಲ್ಲಿ ಎಲ್ಲರಿಂದಲೂ ಸಮ್ಮತಿ ಸಿಕ್ಕರೆ ಮಾತ್ರ ಸ್ಪರ್ಧೆಗಿಳಿಯುವೆ ಎಂದು ಪಕ್ಷದ ಹಿರಿಯ ಮುಖಂಡ ಕೆ.ಎಂ ರಾಜೇಗೌಡ ಸ್ಪಷ್ಟಪಡಿಸಿದ್ದಾರೆ.

ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಾಕಾಂಕ್ಷಿಗಳಲ್ಲಿ ನನ್ನ ಹೆಸರು ಪ್ರಸ್ತಾಪವಾದ ನಂತರ ನನ್ನ ಬಗ್ಗೆ ವಿಭಿನ್ನ ಹೇಳಿಕೆಗಳು ಕೇಳಿ ಬರುತ್ತಿವೆ. ನಾನು ಯಾರ ಪರ, ವಿರುದ್ಧವೂ ಇಲ್ಲ. ಯಾರ ಬಿಂಬಿತ ಅಭ್ಯರ್ಥಿಯೂ ಅಲ್ಲ” ಎಂದು ಹೇಳಿದರು.

“ಭವಾನಿ ರೇವಣ್ಣ ಅವರೇ ಅಭ್ಯರ್ಥಿ ಎಂಬ ಮಾತುಗಳು ಈಗ ಕೇಳಿಬರುತ್ತಿವೆ. ಆದರೆ, ಪಕ್ಷದ ಎಲ್ಲ ಮುಖಂಡರೂ ಸಂಘಟಿತರಾಗಿ ಚುನಾವಣೆಯಲ್ಲಿ ಬೆಂಬಲ ನೀಡಿ ಹೋರಾಟ ಮಾಡುವ ನಿಖರ ಭರವಸೆ ನೀಡಿದರೆ ಮತ್ತು ನಾನು ಸರ್ವಸಮ್ಮತ ಅಭ್ಯರ್ಥಿಯಾದರೆ ಮಾತ್ರ ಸ್ಪರ್ಧಿಸುತ್ತೇನೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪಕ್ಷದಲ್ಲಿ ಒಮ್ಮತ ಮೂಡಿ ಸ್ಪರ್ಧೆಗಿಳಿಯಿರಿ ಎಂದರೆ ಸ್ಪರ್ಧಿಸುವೆ. ಇಲ್ಲವೇ ಪಕ್ಷದ ಮುಖಂಡರು ಸೂಚಿಸುವ ಅಭ್ಯರ್ಥಿ ಪರ ಪ್ರಚಾರ ಮಾಡುವೆ” ಎಂದು ಹೇಳಿದರು.

“ಚುನಾವಣೆಯಲ್ಲಿ ಜೆಡಿಎಸ್‌ನ ಅಧಿಕೃತ ಅಭ್ಯರ್ಥಿ ಘೋಷಣೆ ಆಗುವವರೆಗೂ ನಾನು ಪ್ರಚಾರ ಮಾಡಲು ಹೋಗುವುದಿಲ್ಲ. ನಮ್ಮ ಪಕ್ಷದಲ್ಲಿ ಒಗ್ಗಟ್ಟಿರಬೇಕು. ಒಟ್ಟಾಗಿ ಎಂಬುದು ನನ್ನ ಅಪೇಕ್ಷೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...