ಹಾಸನ | ಜೆಡಿಎಸ್ ಅಭ್ಯರ್ಥಿ ಎಚ್ ಪಿ ಸ್ವರೂಪ್ ಬೆಂಬಲಿಸಲು ದಸಂಸ ನಿರ್ಧಾರ

Date:

  • ʼಸಂವಿಧಾನದಲ್ಲಿ ನೀಡಿರುವ ಮೀಸಲಾತಿ ನೀತಿ ದುರ್ಬಲಗೊಳಿಸುತ್ತಿರುವ ಬಿಜೆಪಿʼ
  • ʼಸುಳ್ಳು ಪ್ರಮಾಣ ಪತ್ರ ಪಡೆದಿರುವ ವೀರಶೈವ ಜಂಗಮರ ಮೇಲೆ ಕಾನೂನು ಕ್ರಮಕ್ಕೆ ಬಿಜೆಪಿ ಹಿಂದೇಟುʼ

ಕೋಮುವಾದಿ, ಜಾತಿವಾದಿ ದಲಿತ ವಿರೋಧಿ, ಭ್ರಷ್ಟ ಬಿಜೆಪಿ ಸರ್ಕಾರ ತೊಲಗಿಸಿ, ಜಾತ್ಯಾತೀತ ಜನತಾದಳದ ಅಭ್ಯರ್ಥಿ ಎಚ್ ಪಿ ಸ್ವರೂಪ್ ಅವರನ್ನು ಬೆಂಬಲಿಸಲು ದಲಿತ ಸಂಘಟನೆಗಳು ನಿರ್ಧಾರಿಸಿದ್ದೇವೆ ಎಂದು ದಲಿತ ಸಂಘಟನೆಗಳ ಸಮನ್ವಯ ಸಮಿತಿ ಪ್ರಧಾನ ಕಾರ್ಯದರ್ಶಿ ಕೃಷ್ಣದಾಸ್ ತಿಳಿಸಿದರು.

ಹಾಸನದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, “ರಾಜ್ಯದಲ್ಲಿ ಮೇ 10ರಂದು ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ಇದು ರಾಜ್ಯದ ಜನರ ಭವಿಷ್ಯವನ್ನು ನಿರ್ಧರಿಸುವ ಮಹತ್ತರವಾದ ಚುನಾವಣೆಯಾಗಿದೆ” ಎಂದರು.

“ನಮ್ಮ ರಾಜ್ಯ ಹಲವು ಧರ್ಮ, ಜಾತಿ, ಭಾಷೆ, ವಿಭಿನ್ನ ಆಚಾರ-ವಿಚಾರ ಸೇರಿದಂತೆ ಬಹುಸಂಸ್ಕೃತಿಯ ನೆಲೆಬೀಡಾಗಿದೆ. ಕಳೆದ ಮೂರ್ನಾಲ್ಕು ವರ್ಷಗಳಿಂದ ಧರ್ಮ, ಜಾತಿ ಹೆಸರಿನಲ್ಲಿ ಸಮಾಜದಲ್ಲಿ ವಿಷಬೀಜ ಬಿತ್ತಿ ಜನರ ಮನಸ್ಸನ್ನು ಬಿಜೆಪಿ ನೇತೃತ್ವದ ಸಂಘ ಪರಿವಾರ ಘಾಸಿಗೊಳಿಸಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಮಸಮಾಜದ ನಿರ್ಮಾಣಕ್ಕಾಗಿ ಸಂವಿಧಾನದಲ್ಲಿ ನೀಡಿರುವ ಮೀಸಲಾತಿ ನೀತಿಯನ್ನು ದುರ್ಬಲಗೊಳಿಸಲಾಗುತ್ತಿದೆ. ಸರ್ಕಾರಿ ಒಡೆತನದಲ್ಲಿರುವ ಉದ್ದಿಮೆಗಳನ್ನು ಖಾಸಗೀಕರಣ ಮಾಡುವ ಪ್ರಕ್ರಿಯೆ ತೀವ್ರ ಗತಿಯಲ್ಲಿ ಸಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಕಲ್ಪಿಸುವ ನ್ಯಾಯಮೂರ್ತಿ ಎ ಜೆ ಸದಾಶಿವ ಆಯೋಗದ ವರದಿಯನ್ನು ಸದನದಲ್ಲಾಗಲಿ ಅಥವಾ ಸಾರ್ವಜನಿಕವಾಗಿ ಆಗಲಿ ಬಹಿರಂಗ ಚರ್ಚೆಗೊಳಪಡಿಸದೆ ಕೇವಲ ಸಚಿವ ಸಂಪುಟ ಉಪಸಮಿತಿಯ ಶಿಫಾರಸ್ಸುಗಳನ್ನು ಅಸಮರ್ಪಕವಾಗಿ ಜಾರಿಗೊಳಿಸಿ, ಪರಿಶಿಷ್ಟ ಜಾತಿಯ 101 ಉಪಜಾತಿಗಳ ನಡುವೆ ಅಸಹನೆ ದ್ವೇಷ ಹುಟ್ಟುವಂತೆ ಮಾಡಿದ್ದಾರೆ” ಎಂದು ಆರೋಪಿಸಿದರು.

“ಪ್ರಜಾತಿಯ ಬೇಡಜಂಗಮರ ಹೆಸರಿನಲ್ಲಿ ವೀರಶೈವ ಜಂಗಮರು ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದುಕೊಂಡು ಬೇಡಜಂಗಮರ ಸೌಲಭ್ಯಗಳನ್ನು ಕಬಳಿಸುತ್ತಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಬಿಜೆಪಿ ಸರ್ಕಾರ ಹಿಂದೇಟು ಹಾಕುತ್ತಿದೆ” ಎಂದರು.

“ದೇಶದ ಸುಪ್ರೀಂ ಕೋರ್ಟ್ ಪಿಟಿಸಿಎಲ್‌ ಕಾಯಿದೆಗೆ ಕಾಲಮಿತಿ ನಿಗದಿಪಡಿಸಿ ಮಾಡಿರುವ ಆದೇಶಕ್ಕೆ ತಿದ್ದುಪಡಿ ತರುವಂತೆ ಕಳೆದ ಮೂರ್ನಾಲ್ಕು ವರ್ಷಗಳಿಂದ ಜಿಲ್ಲೆ ರಾಜ್ಯಾದ್ಯಂತ ಸತ್ಯಾಗ್ರಹ ಹೋರಾಟ ಮಾಡಿದರೂ ಯಾವುದೇ ಕಿಮ್ಮತ್ತು ನೀಡದೆ ಬಿಜೆಪಿ ಸರ್ಕಾರ ದಲಿತ ವಿರೋಧಿ ನೀತಿ ಅನುಸರಿಸುತ್ತಿದೆ” ಎಂದು ಗುಡುಗಿದರು.

“ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಕೆಪಿಎಸ್‌ಸಿ, ಶಿಕ್ಷಕರ ನೇಮಕಾತಿ, ಪೊಲೀಸ್ ನೇಮಕಾತಿ, ಕೆಪಿಟಿಸಿಎಲ್‌ನಲ್ಲಿ ಎಗ್ಗಿಲ್ಲದಂತೆ ಭ್ರಷ್ಟಾಚಾರ ಸಾಗುತ್ತಿದೆ. ಸರ್ಕಾರದ ಏಜೆಂಟರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಶೇ. 40ರಷ್ಟು ಕಮಿಷನ್ ಪಡೆದು ಬಿಜೆಪಿ ಸರ್ಕಾರ ದೇಶದಲ್ಲೇ ಭ್ರಷ್ಟಾಚಾರದಲ್ಲಿ ಕುಖ್ಯಾತಿ ಪಡೆದಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಕಾಂಗ್ರೆಸ್‌ಗೆ ಷರತ್ತುಬದ್ಧ ಬೆಂಬಲ ಸೂಚಿಸಿದ ದಸಂಸ ಐಕ್ಯ ಹೋರಾಟ ಚಾಲನಾ ಸಮಿತಿ

ಎಸ್‌ಸಿ – ಎಸ್‌ಟಿ ಸಮುದಾಯದ ಮತದಾರರು ಮುಂಬರುವ ಚುನಾವಣೆಯಲ್ಲಿ ಬಹಳ ಎಚ್ಚರದಿಂದ ಮತ ಚಲಾಯಿಸಬೇಕಾಗಿದೆ. ಈ ಹಿನ್ನೆಲೆ ಜಿಲ್ಲೆಯ ಬಹುತೇಕ ದಲಿತ ಸಂಘಟನೆಗಳ ಮುಖಂಡರು ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರೀತಂ ಜೆ ಗೌಡ ಅವರನ್ನು ಸೋಲಿಸಲು ಜಾತ್ಯಾತೀತ ಜನತಾದಳದ ಅಭ್ಯರ್ಥಿ ಎಚ್‌ ಪಿ ಸ್ವರೂಪ್  ಅವರನ್ನು ಬೆಂಬಲಿಸಲು ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದೆ. ಆದುದರಿಂದ ಜಿಲ್ಲೆಯಲ್ಲಿ ಕೋಮುವಾದಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಲು ಜಾತ್ಯಾತೀತ ಪಕ್ಷಗಳಿಗೆ ಬೆಂಬಲಿಸುವಂತೆ ಆಯಾ ವಿಧಾನಸಭಾ ಕ್ಷೇತ್ರದ ದಲಿತ ಸಂಘಟನೆಗಳ ಮುಖಂಡರು ತೀರ್ಮಾನ ಕೈಗೊಳ್ಳಲಿದ್ದಾರೆ” ಎಂದು ಹೇಳಿದರು.

ದಲಿತ ಸಂಘಟನೆಗಳ ಸಮನ್ವಯ ಸಮಿತಿ ಗೌರವಾಧ್ಯಕ್ಷ ನಾರಾಯಣ ದಾಸ್, ಅಧ್ಯಕ್ಷ ಕೆ ಈರಪ್ಪ, ಉಪಾಧ್ಯಕ್ಷ ಎಚ್‌ ಕೆ ಸಂದೇಶ್‌, ದಲಿತ ಮುಖಂಡರಾದ ವೀರಭದ್ರಯ್ಯ ಅಣಚನಹಳ್ಳಿ, ಕ್ರಾಂತಿ ಪ್ರಸಾದ್ ತ್ಯಾಗಿ, ದಂಡೋರ ಸೋಮು ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...