ಹಾಸನ ತಾಲೂಕಿನ ಲಕ್ಷ್ಮೀಸಾಗರ ಗ್ರಾಮದ ಸರ್ವೆ ನಂಬರ್ 35ರಲ್ಲಿ ಸರ್ಕಾರದಿಂದ ಮಂಜೂರಾಗಿರುವ, ರೈತರ ಸ್ವಾಧೀನದಲ್ಲಿರುವ ಬಗರ್ ಹುಕಂ ಸಾಗುವಳಿ ಭೂಮಿಯನ್ನು ಕೆಐಎಡಿಬಿಯವರು ಬಲವಂತವಾಗಿ ಭೂಸ್ವಾಧಿನ ಮಾಡುತ್ತಿರುವುದನ್ನು ಖಂಡಿಸಿ ಕರ್ನಾಟಕ ಪ್ರಾಂತ ರೈತ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಬಳಿಕ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ನವೀನ್ ಕುಮಾರ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದು, “1997ರಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯು ಹಾಸನದ ವಿಮಾನ ನಿಲ್ದಾಣಕ್ಕಾಗಿ ಭೂಸ್ವಾಧೀನ ಪ್ರಕ್ರಿಯೆ ನಡೆಸಿ ರೈತರ ಸ್ವಾಧೀನದಲ್ಲಿರುವ ಭೂಮಿಯಲ್ಲಿ ಸ್ವಲ್ಪ ಭಾಗವನ್ನು ಸ್ವಾಧೀನ ಪಡಿಸಿಕೊಂಡು ಪರಿಹಾರವನ್ನು ನೀಡಿದೆ. ಆದರೆ 26 ಕುಟುಂಬಗಳಿಗೆ ಮಂಜೂರಾಗಿದ್ದ ತಲಾ 0.26 ಎಕ್ಕರೆ ಜಾಗದಲ್ಲಿ ಕೆಐಡಿಬಿಯವರು ಭೂಸ್ವಾದೀನ ಮಾಡಿಕೊಂಡು ಉಳಿದಿರುವ ಭೂಮಿಯಲ್ಲಿ ರೈತರು ಈಗಲೂ ಅನುಭವದಲ್ಲಿದ್ದು, ಕೃಷಿ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ” ಎಂದು ಸಂಘಟನಾಕಾರರು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ತುಂಗಭದ್ರಾ ಕ್ರಸ್ಟ್ಗೇಟ್ | ಕಳಪೆ ನಿರ್ವಹಣೆಗೈದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಿ: ರೈತ ಮುಖಂಡ ಬಸವರಾಜಪ್ಪ
“ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯು ಉಳಿಕೆ ಭೂಮಿಯೂ ತಮಗೆ ಸೇರಬೇಕೆಂದು ರೈತರ ಮೇಲೆ ದೌರ್ಜನ್ಯ ನಡೆಸಿ ಭೂಮಿ ಸ್ವಾಧೀನ ಮಾಡಿಕೊಳ್ಳುವ ಪ್ರಕ್ರಿಯೆ ನಡೆಸಲು ಮುಂದಾಗಿದೆ. ರೈತರ ಅನುಭವದಲ್ಲಿರುವ ಕೃಷಿ ಚಟುವಟಿಕೆಯ ಉಳಿಕೆ ಭೂಮಿಯನ್ನು ಸರ್ವೆ ಮಾಡಿ, ಗಡಿಗಳನ್ನು ಗುರುತಿಸಿ, ಅದ್ದುಬಸ್ತ್ ಮೂಲಕ ಪೋಡಿ ಮಾಡಿಕೊಡಬೇಕು ಮತ್ತು ಅನಗತ್ಯವಾಗಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯು ರೈತರಿಗೆ ತೊಂದರೆ ಕೊಡಬಾರದು” ಎಂದು ಜಿಲ್ಲಾಧಿಕಾರಿ ಬಳಿ ಮನವಿ ಮಾಡಿದ್ದಾರೆ.





