ಹಾಸನ l ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಯಶಸ್ವಿ 

Date:

ಡಾ. ಬಿ.ಆರ್. ಅಂಬೇಡ್ಕರ್ ಅವರ 134 ನೇ ಹಾಗೂ ಡಾ.ಬಾಬು ಜಗಜೀವನ್ ರಾಮ್ ಅವರ 118 ನೇ ಜನ್ಮ ದಿನಾಚರಣೆಯನ್ನು ಹಾಸನ ನಗರದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಜಿಲ್ಲಾ ಬಾಬು ಜಗಜೀವನ್ ರಾಮ್ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಗುರುವಾರ ಯಶಸ್ವಿಯಾಗಿ ನಡೆಸಲಾಯಿತು.

ಜಯಂತಿಗಳು ಮಹಾನ್ ನಾಯಕರ ಆಶಯ ಹಾಗೂ ವಿಚಾರಗಳನ್ನು ಮುಂದಿನ ಪೀಳಿಗೆಗೆ ತಿಳಿಸಲು ಇರುವಂತವು. ಅಂಬೇಡ್ಕರ್ ಅವರು ಇರದೇ ಇದ್ದಿದ್ದರೆ ಇಂದು ನಾವು ಈ ಕಾರ್ಯಕ್ರಮ ಮಾಡಲು ಸಾಧ್ಯವೇ ಆಗುತ್ತಿರಲಿಲ್ಲ 3 ಅಂಬೇಡ್ಕರ್ ಅವರು ದೇವರಾದರೆ ಸಮಾಜಕ್ಕೆ ಅಪಾಯ, ಮಹಾನ್ ನಾಯಕರು ದೇವರಾಗುವ ಬದಲು, ವಿಮೋಚಕರಾಗಿಯೇ ಇರಬೇಕು. ಇಲ್ಲದಿದ್ದರೆ ಸಮುದಾಯ ಮತ್ತೆ ಪತನದತ್ತ ಸಾಗುತ್ತದೆ ಎಂಬುದನ್ನು ಮರೆಯ ಬಾರದು ಎಂದು ಅರಕಲವಾಡಿ ನಾಗೇಂದ್ರ ಮಾತಾಡಿದರು.

ದಲಿತರು ಹಾಗೂ ಹಿಂದುಳಿದ ವರ್ಗಗಳಿಗೆ ಶೇ.49.5ರಷ್ಟು ಮೀಸಲಾತಿ ಸರ್ಕಾರಿ ಕ್ಷೇತ್ರದಲ್ಲಿ ಮಾತ್ರ ಇದೆ. ದೇಶದಲ್ಲಿ ಸರ್ಕಾರಿ ಕ್ಷೇತ್ರ ಇರುವುದು ಕೇವಲ ಶೇ.2ರಷ್ಟು ಮಾತ್ರ ಎಂಬುದನ್ನು ಎಲ್ಲರೂ ಅರ್ಥೈಸಿಕೊಳ್ಳಬೇಕು. ಖಾಸಗಿ ಕ್ಷೇತ್ರದಲ್ಲಿ ಹೆಚ್ಚಿನ ರೀತಿಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಸದೃಢರಾಗಬೇಕು. ಭೂಮಿ, ಕೈಗಾರಿಕೆ ಸೇರಿದಂತೆ ಇತರೆ ರೂಪದಲ್ಲಿದ್ದು, ಹೆಚ್ಚಿನ ಪ್ರಮಾಣ ಉಳ್ಳವರ ಕೈವಶದಲ್ಲಿಯೇ ಇದೆ. ಶೇ. 2 ರಷ್ಟು ಮೀಸಲಾತಿಯಲ್ಲಿ ಶೇ. 1ರಷ್ಟು ಮೀಸಲಾತಿ ಉಳ್ಳವರಿಗೆ ಸೇರಿದೆ. ಇದೆಲ್ಲವನ್ನೂ ಅರಿತು ಜೀವನ ಶೈಲಿ ರೂಪಿಸಿಕೊಳ್ಳಬೇಕು. ಆರ್ಥಿಕವಾಗಿ ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಸದೃಢರಗಬೇಕು ಎಂದು ನಾಗೇಂದ್ರ ಮಾತಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿದ್ದೀರಾ?ಹಾಸನ l ಪಹಲ್ಗಾಮ್‌ ಉಗ್ರರ ದಾಳಿ: ವಕೀಲರ ಪ್ರತಿಭಟನೆ

ಈ ವೇಳೆ ಜಿಲ್ಲಾ ಬಾಬೂಜಿ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಬಸವರಾಜು, ಗೌರವಾಧ್ಯಕ್ಷ ಶಿವಣ್ಣ, ಕಾರ್ಯದರ್ಶಿ ಸೋಮಶೇಖರ್, ದಾಸಪ್ಪ, ಹಿರಿಯ ದಲಿತ ಮುಖಂಡ ಹೆಚ್.ಪಿ.ಶಂಕರ್ ರಾಜು, ಸಮಾಜ ಸೇವಕ ಧರ್ಮಪ್ಪ ನಾಯಕ, ದಂಡೋರ ಮಂಜುನಾಥ್, ಜಾಂಬವ ಸೇನೆಯ ಅರಕಲಗೂಡು ನಿಂಗರಾಜು, ಕೆ.ಡಿ.ಎಸ್. ಎಸ್ ತಾಲೂಕು ಸಂಚಾಲಕ ಬಾಣಾವರ ಮಹೇಶ್, ಆಲೂರು ವೆಂಕಟಯ್ಯ, ಅರಸಪ್ಪ ಹೊಳೆನರಸೀಪುರ ನಾಗರಾಜ್ ಇನ್ನಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...