ಹಾಸನ l ಮುಂದುವರೆದ ಮೈಕ್ರೋ ಫೈನಾನ್ಸ್‌ ಕಿರುಕುಳ; ಕೊಟ್ಟಿಗೆಗೆ ಬಿದ್ದಿದ್ದ ಕುಟುಂಬ ಮರಳಿ ಮನೆಗೆ

Date:

ರಾಜ್ಯದಲ್ಲಿ ಮೈಕ್ರೊ ಫೈನಾನ್ಸ್‌ ಹಾವಳಿ ಮುಂದುವರೆದಿದ್ದು, ಸಾಲ ಮರುಪಾವತಿಸದ ಕಾರಣಕ್ಕೆ ಮನೆಗೆ ಬೀಗ ಹಾಕಿ ಕುಟುಂಬವನ್ನು ಹೊರಹಾಕಿರುವ ಘಟನೆ ಹಾಸನ ತಾಲೂಕಿನ ದೊಡ್ದ ಆಲದಹಳ್ಳಿ ಗ್ರಾಮದಲ್ಲಿ ನಡೆದಿದೆ.

ಆಧಾ‌ರ್ ಹೌಸಿಂಗ್ ಫೈನಾನ್ಸ್ ಸಂಸ್ಥೆಯಿಂದ ಗ್ರಾಮದ ಮಂಜೇಗೌಡ ಮನೆ ನಿರ್ಮಾಣಕ್ಕಾಗಿ ₹9 ಲಕ್ಷ ಸಾಲ ಪಡೆದಿದ್ದರು. ಮನೆ ನಿರ್ಮಾಣದ ಹಂತದಲ್ಲಿರುವಾಗಲೇ ಮಂಜೇಗೌಡ ಅವರ ಮಗ ಅಪಘಾತಕ್ಕೀಡಾದ ಕಾರಣ, ಕುಟುಂಬ ಆರ್ಥಿಕ ಸಂಕಷ್ಟಕ್ಕೆ ಸಿಲುಕಿತು. ಸಾಲ ಕಟ್ಟಲು ಸಾಧ್ಯವಾಗದೆ ಪರದಾಡಿದೆ. ಸಾಲ ಮರುಪಾವತಿ ಮಾಡಲು ವಿಳಂಬವಾಗಿದ್ದರಿಂದ ಮನೆಗೆ ಬೀಗ ಹಾಕಿ ಕುಟುಂಬವನ್ನು ಆಧಾ‌ರ್ ಹೌಸಿಂಗ್ ಫೈನಾನ್ಸ್ ಸಂಸ್ಥೆ ಬೀದಿಗಿಟ್ಟಿತ್ತು.

ಫೈನಾನ್ಸ್‌ ಕಂಪನಿಯ ಕಿರುಕುಳದ ಕಾರಣ ಮಂಜೇಗೌಡರ ಕುಟುಂಬ ತಿಂಗಳುಗಳಿಂದ ಕೊಟ್ಟಿಗೆಯಲ್ಲಿಯೇ ಜೀವನ ನಡೆಸುತ್ತಿತ್ತು. ವಿಷಯ ಬೆಳಕಿಗೆ ಬಂದ ಬಳಿಕ ರೈತ ಸಂಘದ ಕಾರ್ಯಕರ್ತರು ಇಂದು ಫೈನಾನ್ಸ್ ಕಂಪನಿ ಹಾಕಿದ್ದ ಬೀಗ ಒಡೆದು ಕುಟುಂಬವನ್ನು ಮನೆಯೊಳಗೆ ಸೇರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿದ್ದೀರಾ?ಹಾಸನ | ಜೀತ ಕಾರ್ಮಿಕ ಪ‌ದ್ದತಿ ಆಚರಣೆ ಶಿಕ್ಷಾರ್ಹ ಅಪರಾಧ: ಪಿಡಿಒ ಆರ್‌ ಪ್ರಭಾ

ಆರು ತಿಂಗಳ ಹಿಂದೆ ಕಂಪನಿ ಮನೆಯನ್ನು ಸೀಜ್ ಮಾಡಿತ್ತು. ರೈತ ಸಂಘ ಮಾಡಿದ ಕಾರ್ಯದಿಂದ ಇದೀಗ ಮಂಜೇಗೌಡ ಕುಟುಂಬ ನಿಟ್ಟುಸಿರು ಬಿಟ್ಟಂತಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...