ಹಾಸನ l ಅಕ್ರಮವಾಗಿ ಮದ್ಯ ಮಾರಾಟ; ನಾಶ ಪಡಿಸಿದ ಅಬಕಾರಿ ಇಲಾಖೆ ಅಧಿಕಾರಿಗಳು

Date:

ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಹಲವಾರು ಪ್ರಕರಣಗಳಲ್ಲಿ ವಶಕ್ಕೆ ಪಡೆದಿದ್ದ ಅಕ್ರಮ ಮದ್ಯವನ್ನು ಪ್ರಾಧಿಕೃತ ಅಧಿಕಾರಿ ಹಾಗೂ ಅಬಕಾರಿ ಉಪಆಯುಕ್ತರ ಆದೇಶದಂತೆ ಅಬಕಾರಿ ಉಪ ಅಧೀಕ್ಷಕ ಎಂ ಹೆಚ್ ರಘು, ತಹಸೀಲ್ದಾರ್ ಗ್ರೇಡ್-2 ಅಶೋಕ್ ಕುಮಾರ್ ಸೇರಿದಂತೆ ಇತರರ ಸಮ್ಮುಖದಲ್ಲಿ ಸಿಬ್ಬಂದಿಗಳು ಮದ್ಯ ನಾಶಪಡಿಸಿದರು.

ಹಾಸನ ಉಪವಿಭಾಗದ ಅಬಕಾರಿ ಉಪ ಅಧೀಕ್ಷಕ ಎಂ ಹೆಚ್ ರಘು ಸುದ್ದಿಗಾರರೊಂದಿಗೆ ಮಾತನಾಡಿ, “ಅಬಕಾರಿ ಮೊಕದ್ದಮೆ ಹಾಗೂ ಪೊಲೀಸ್ ಮೊಕದಮ್ಮೆಗಳಲ್ಲಿ ವಶಕ್ಕೆ ಪಡೆದ 5 ಪ್ರಕರಣಗಳಲ್ಲಿ 486.465 ಲೀಟರ್ ಮದ್ಯ, 172.310 ಲೀಟರ್ ಬಿಯರ್, 06 ಲೀಟರ್ ಕಳ್ಳಭಟ್ಟಿ, 14.5 ಲೀಟರ್ ಬೆಲ್ಲದ ಕೊಳೆ ಹಾಗೂ ಇತರೆ ವಸ್ತುಗಳನ್ನು ಅಬಕಾರಿ ಉಪ ಆಯುಕ್ತರ ಆದೇಶ‌ದಂತೆ ಇಲಾಖೆ ಅಧಿಕಾರಿಗಳ ಹಾಗೂ ತಹಶೀಲ್ದಾರ್ ಗ್ರೇಡ್-2 ಅಶೋಕ್ ಕುಮಾರ್ ಸಮ್ಮುಖದಲ್ಲಿ ಪರಿಸರಕ್ಕೆ ಹಾನಿಯಾಗದಂತೆ ಮದ್ಯ ನಾಶಪಡಿಸುತ್ತಿದ್ದೇವೆ” ಎಂದು ಹೇಳಿದರು.

“ಯಾರಾದರೂ ಅಕ್ರಮವಾಗಿ ಮದ್ಯ ಮಾರಾಟ ಮಾಡುವುದು, ಸರಬರಾಜು ಮಾಡುವುದು ಕಂಡು ಬಂದಲ್ಲಿ ಮೊಕದ್ದಮೆ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಮುಖ್ಯವಾಗಿ ಬಾರ್ ಅಂಡ್‌ ರೆಸ್ಟೋರೆಂಟ್‌ಗಳಲ್ಲಿ ಸ್ವಚ್ಛತೆ ಕೊರತೆ ಬಗ್ಗೆ ದೂರು ಕಂಡುಬಂದಲ್ಲಿ ಅಂತಹವರನ್ನು ಕರೆದು ತಿಳಿ ಹೇಳುತ್ತೇವೆ. ಆದರೂ ಸರಿ ಪಡಿಸದಿದ್ದಲ್ಲಿ ಕ್ರಮಕ್ಕೆ ಮುಂದಾಗಲಿದ್ದೇವೆ” ಎಂದು ಅಬಕಾರಿ ಇಲಾಖೆ ತಹಶೀಲ್ದಾರ್ ಗ್ರೇಡ್-2 ಅಶೋಕ್ ಕುಮಾರ್ ಮಾಹಿತಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿದ್ದೀರಾ?ಹಾಸನ | ಗರ್ಭ ಕೊರಳ, ಸ್ತನ ಕ್ಯಾನ್ಸರ್ ಬಗ್ಗೆ ಜಾಗೃತಿ ಜಾಥಾ

ಈ ವೇಳೆ ಅಬಕಾರಿ ಇಲಾಖೆ ತಹಶೀಲ್ದಾರ್ ಗ್ರೇಡ್-2 ಅಶೋಕ್ ಕುಮಾರ್, ನಿರೀಕ್ಷಕಿ ಎ ಟಿ ಚಂದನ, ಅಬಕಾರಿ ಉಪ ನಿರೀಕ್ಷಕ ಹರೀಶ್ ಸಿ ಹಾಗೂ ಹಾಸನದ ಕೆಎಸ್‌ಬಿಎಲ್ ಡಿಪೋ-2 ವ್ಯವಸ್ಥಾಪಕರು ಹಾಗೂ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...