ಹಾಸನ l ಅಕ್ರಮ ಸಂಬಂಧಕ್ಕೆ ಅಡ್ಡಿ: ವ್ಯಕ್ತಿಯ ಹತ್ಯೆ 

Date:

ಪತ್ನಿಯೇ ಪ್ರೀತಿಸಿದ ಪ್ರಿಯಕರನ ಜೊತೆ ಸೇರಿ ಸುಪಾರಿಕೊಟ್ಟು ಪತಿಯನ್ನೇ ಬರ್ಬರವಾಗಿ ಕೊಲೆ ಮಾಡಿಸಿದ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ, ಮರುವನಹಳ್ಳಿ- ಮಡಬ ರಸ್ತೆಯಲ್ಲಿ ಗುರುವಾರ ನಡೆದಿದೆ. 

ಕೊಲೆಯಾದ ಲೋಕೇಶ,(ನಂಜುಂಡೇಗೌಡ) ಚನ್ನರಾಯ ಪಟ್ಟಣ ತಾಲ್ಲೂಕಿನ ಕುಂಬಾರಹಳ್ಳಿ ಗ್ರಾಮದವರು. ಅದೇ ಗ್ರಾಮದ ಅರುಣ ತನ್ನ ಸಹಚರರೊಂದಿಗೆ ಸೇರಿ ಲೋಕೇಶನನ್ನು ಹತ್ಯೆ ಮಾಡಿದ್ದಾನೆ.

ಘಟನೆ ಏನಿದು: ಸುಮಾರು 14 ವರ್ಷಗಳ ಹಿಂದೆ ಸವಿತಾ ಎಂಬುವರ ಜೊತೆ ವಿವಾಹವಾಗಿದ್ದು, ಇವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಮದುವೆಯಾಗಿ ಮೂರು ವರ್ಷದವರೆಗೂ ಪತಿ ಜೊತೆ ಚೆನ್ನಾಗಿದ್ದ ಸವಿತಾ, ನಂತರ ಎದುರು ಮನೆಯ ಅರುಣ್‌ ಎಂಬಾತನೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದಳು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವಿಚಾರ ಗ್ರಾಮಸ್ಥರಿಗೆ ಹಾಗೂ ಕುಟುಂಬಸ್ಥರಿಗೆ ತಿಳಿದ ಕೂಡಲೇ ಮೃತ ಲೋಕೇಶ್, ಅರುಣನ ವಿರುದ್ಧ ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು, ನಂತರ ಈ ಗ್ರಾಮದ ಗ್ರಾಮಸ್ಥರು ಪಂಚಾಯಿತಿ ನಡೆಸಿ ಹೊಂದಿಕೊಂಡು ಹೋಗುವಂತೆ ಕುಟುಂಬಸ್ಥರು ತಿಳಿ ಹೇಳಿದ್ದರೂ ಬದಲಾಗದ ಸವಿತಾ ತನ್ನ ಮನೆಯಲ್ಲಿ ಏನೇ ನಡೆದರೂ, ಎಲ್ಲವನ್ನೂ ಪ್ರಿಯಕರಿನಿಗೆ ತಿಳಿಸುತ್ತಿದ್ದಳು, ತನ್ನ ಅಕ್ರಮ ಸಂಬಂಧಕ್ಕೆ ಯಾರೂ ಅಡ್ಡಿ ಮಾಡಬಾರದೆಂದು ಪತಿಯನ್ನು ಅವರ ಸಂಬಂಧಿಕರಿಂದ ದೂರ ಮಾಡಿದ್ದಳು. ತನ್ನ ಎರಡು ಹೆಣ್ಣುಮಕ್ಕಳಿಗಾಗಿ ಲೋಕೇಶ್ ಎಲ್ಲವನ್ನೂ ಸಹಿಸಿಕೊಂಡಿದ್ದನು, ಆದರೆ ತನ್ನ ಗಂಡನನ್ನೇ ಪ್ರೀತಿಸಿದವನಿಗೋಸ್ಕರ ಕೊಲೆ ಮಾಡಿಸಿ ಬಿಟ್ಟಳು ಎಂದು ಗ್ರಾಮಸ್ಥರು ಹಾಗೂ ಕುಟುಂಬಸ್ಥರು ಆರೋಪವನ್ನು ವ್ಯಕ್ತಪಡಿಸಿದ್ದಾರೆ.

ಹತ್ಯೆಗೆ ಮಾಡಿದ ಸಂಚು: ಈ ಹಿಂದೆ ಕೆಲ ದಿನಗಳ ಹಿಂದೆ ಎರಡು ಬಾರಿ ಲೋಕೇಶ (ನಂಜುಂಡೇಗೌಡ)ನ ಮೇಲೆ ಅರುಣ ತನ್ನ ಸಹಚರರೊಂದಿಗೆ ಸೇರಿ ಅಟ್ಯಾಕ್ ಮಾಡಿದ್ದ. ಆಗ ಅದೃಷ್ಟವಶಾತ್ ಲೋಕೇಶ ಬಚಾವಾಗಿದ್ದರು, ಮೂರನೇ ಬಾರಿ ತಪ್ಪಿಸಿಕೊಳ್ಳಬಾರದು ಎಂದು ಸವಿತಾ ಹಾಗೂ ಅರುಣ ಖತರ್ನಾಕ್ ಸ್ಕೆಚ್ ಹಾಕಿದ್ದರು. ಮರುವನಹಳ್ಳಿ-ಮಡಬ ಮಾರ್ಗ ಮಧ್ಯೆ ಮಹೀಂದ್ರಾ ಜಿತೋ ವಾಹನದಲ್ಲಿ ಬರುತ್ತಿದ್ದ ಲೋಕೇಶನ ಕೊಲೆಗೆ ಮೂರು ಜಾಗಗಳನ್ನು ಆರೋಪಿಗಳು ಗುರುತಿಸಿಕೊಂಡಿದ್ದರು.

ಬ್ಯಾಡರಹಳ್ಳಿಗೆ ಹೋಗುವ ರಸ್ತೆ ಮಧ್ಯೆಯಿರುವ ಬೋರೆಯ ಬಳಿ ಮರದಪಟ್ಟಿಗೆ ಉದ್ದವಾದ 50 ಕ್ಕೂ ಹೆಚ್ಚು ಮೊಳೆ ಚುಚ್ಚಿ ರಸ್ತೆಗೆ ಇಟ್ಟು ಹುಲ್ಲು ಮುಚ್ಚಿದ್ದರು. ಇದ್ಯಾವುದೂ ತಿಳಿಯದ ಲೋಕೇಶ, ಎಂದಿನಂತೆ ಹಾಲು ಅಳೆಸಿಕೊಂಡು ಗುರುವಾರ ರಾತ್ರಿ 8.30 ರ ಸುಮಾರಿಗೆ ಮಹೀಂದ್ರಾ ಜಿತೋ ವಾಹನದಲ್ಲಿ ತೆರಳುತ್ತಿದ್ದರು.

ರಸ್ತೆಯಲ್ಲಿ ಚಕ್ರಕ್ಕೆ ಮೊಳೆ ಸಿಕ್ಕಿ ಪಂಚರ್ ಆದ ವಾಹನದಿಂದ ತಕ್ಷಣವೇ ಕೆಳಗಿಳಿದು ಮೊಳೆ ಹೊಡೆದಿದ್ದ ರಿಪೀಸ್ ಪಟ್ಟಿ ವಾಹನಕ್ಕೆ ಹಾಕಿಕೊಂಡಿರುವುದು ಗೊತ್ತಾಯಿತು. ತಕ್ಷಣ ಲೋಕೇಶ ಸ್ನೇಹಿತ ತಮ್ಮಯ್ಯ ಎಂಬುವವರಿಗೆ ಕರೆ ಮಾಡಿ, ಯಾರೋ ರಿಪೀಸ್ ಪಟ್ಟಿಗೆ ಮೊಳೆ ಹೊಡೆದು ಅದರ ಮೇಲೆ ಹುಲ್ಲು ಮುಚ್ಚಿದ್ದಾರೆ. ವಾಹನ ಪಂಚರ್ ಆಗಿದೆ ಬೇಗ ಸ್ಥಳಕ್ಕೆ ಬನ್ನಿ ಎಂದು ಹೇಳಿ ವಾಹನದಲ್ಲಿ ಕುಳಿತಿದ್ದ.

ಈ ವೇಳೆ ಏಕಾಏಕಿ ದಾಳಿ ಮಾಡಿ ಲೋಕೇಶನ ಕಣ್ಣಿಗೆ ಖಾರದಪುಡಿ ಎರಚಿ, ಲಾಂಗ್‌ಗಳಿಂದ ಸಾಯುವವರೆಗೂ ಮನಬಂದಂತೆ ಕೊಚ್ಚಿ, ಲಾಂಗನ್ನು ಅಲ್ಲೇ ಬಿಟ್ಟು ಎಸ್ಕೆಪ್ ಆಗಿದ್ದರು. ಲೋಕೇಶ್ ಸ್ನೇಹಿತರು ಬರುವುದರೊಳಗೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ವಿಚಾರ ತಿಳಿದ ಕೂಡಲೇ ಪತ್ನಿ ಸವಿತಾ ಪ್ರಜ್ಞೆ ತಪ್ಪಿರುವಾಗೆ ನಾಟಕ ಆಡಿದಾಗ ಪೊಲೀಸ್ ಅವರಿಗೆ ಅನುಮಾನ ಬಂದು ವಿಚಾರಿಸಿದಾಗ ಸತ್ಯಾಂಶ ಹೇಳಿದ್ದಾಳೆ.

ಶುಕ್ರವಾರ ಸಂಜೆ ಕುಂಬಾರಹಳ್ಳಿ ಗ್ರಾಮದಲ್ಲಿ ಲೋಕೇಶ್ ಅವರ ಅಂತ್ಯಕ್ರಿಯೆ ನಡೆದಿದ್ದು, ಅವರ ಮಕ್ಕಳು ಹಾಗೂ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿದ್ದೀರಾ?ಹಾಸನ l ಜಿಲ್ಲೆಯ ಅಭಿವೃದ್ಧಿ ಮಾಡಿಯೇ, ರಾಜಕೀಯಕ್ಕೆ ನಿವೃತ್ತಿ ಪಡೆಯುವೆ; ಶಾಸಕ ಹೆಚ್ ಡಿ ರೇವಣ್ಣ 

ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...