ಹಾಸನ l ಮಹಾತ್ಮ ಜ್ಯೋತಿಬಾ ಫುಲೆ ಜಯಂತಿ ಆಚರಣೆ 

Date:

ಮಹಾತ್ಮ ಜ್ಯೋತಿಬಾ ಪುಲೆ ಅವರ 198ನೇ ಜಯಂತಿಯನ್ನು ಹಾಸನ ಜಿಲ್ಲೆ ಬೇಲೂರು ತಾಲೂಕಿನಲ್ಲಿ ಭೀಮ ಆರ್ಮಿ ಸಂಘಟನೆ ವತಿಯಿಂದ ಶುಕ್ರವಾರ ಆಚರಿಸಲಾಯಿತು.

“ಜ್ಯೋತಿಬಾ ಪುಲೆ ಅವರು 1827 ಏಪ್ರಿಲ್ 11 ರಂದು ಮಹಾರಾಷ್ಟ್ರದ ಸತಾರ ಎಂಬಲ್ಲಿ ಜನಿಸಿ, ಚಿಕ್ಕಂದಿನಿಂದಲೇ ಬುದ್ಧಿಶಾಲಿಯಾಗಿದ್ದ ಜ್ಯೋತಿಬಾ ಫುಲೆ ಉತ್ತಮ ವಾತಾವರಣದಲ್ಲಿ ವಿದ್ಯಾಭ್ಯಾಸ ಮಾಡಿದರು ಹಾಗೂ ಸಿರಿವಂತ ಕುಟುಂಬದಲ್ಲಿ ಜನಿಸಿದ ಪುಲೆ  ತನ್ನ ಸಹಪಾಠಿಗಳಂತೆ ಬದುಕುತ್ತಿದ್ದರು. ಮೇಲ್ವರ್ಗದಲ್ಲಿ ಜನಿಸಿದರು ಸದಾ ಕೆಳ ವರ್ಗದ ಜನರ ಒಳಿತಿನ ಬಗ್ಗೆ ಚಿಂತಿಸುತ್ತಿದ್ದರು, ಚಿಕ್ಕಂದಿನಿಂದಲೇ ಸ್ತ್ರೀ ಶೋಷಣೆ ,ದಲಿತರ ಮೇಲಿನ ಅಸಮಾನತೆ, ಶಿಕ್ಷಣದಿಂದ ವಂಚಿತರಾಗಿದ್ದ ಭಾರತದ ಬಹು ಜನರ ಬಗ್ಗೆ ಚಿಂತಿಸುತ್ತಿದ್ದರು. ಭಾರತದ ಸಾಮಾಜಿಕ ಪಿಡುಕುಗಳಾದ ಸ್ತ್ರೀ ಅಸಮಾನತೆ, ಜಾತಿ ವ್ಯವಸ್ಥೆ ಮೌಲ್ಯ ಕಂದಾಚಾರ ಇವುಗಳ ವಿರುದ್ಧ ಹೋರಾಡಲು ಸಿದ್ದರಾದರು ಇದಕ್ಕೆ ಇವರು ಶಿಕ್ಷಣವನ್ನು ದೊಡ್ಡ ಅಸ್ತ್ರವನ್ನಾಗಿ ಬಳಸಿದರು. ಎಸ್ ಸಿ, ಎಸ್ ಟಿ , ಒ ಬಿ ಸಿ ಹಾಗೂ ಎಲ್ಲಾ ಜನಾಂಗದ ಮಹಿಳೆಯರು ವಿದ್ಯಾವಂತರಾಗಿದ್ದಾರೆ ಎಂದರೆ, ಇದಕ್ಕೆ ಮೂಲ ಕಾರಣ ಜ್ಯೋತಿಬಾ ಪುಲೆ ಹಾಗೂ ಅವರ ಪತ್ನಿ ಸಾವಿತ್ರಿಬಾಯಿ ಪುಲೆ” ಎಂದು ಕಾರ್ಯಕ್ರಮದಲ್ಲಿ ಶಿಕ್ಷರಾದ ಸಂಪತ್ ತಿಳಿಸಿದರು.

ಸಂವಿಧಾನವೇ ಶ್ರೇಷ್ಠ ಗ್ರಂಥವೆಂದು ಒಪ್ಪಿಕೊಂಡು ಸಂವಿಧಾನದ ಆಶ್ರಯದಲ್ಲಿ ಸುಖ ಜೀವನ ನಡೆಸುತ್ತಿದ್ದೇವೆ ಎಂದರೆ, ಇದಕ್ಕೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಮೂಲ ಕಾರಣ ಜ್ಯೋತಿಬಾ ಪುಲೆ ಎಂದೇ ಹೇಳಬಹುದು. ಭಾರತದಲ್ಲಿ ಆರಂಭವಾದ ಸಮಾನತೆಯ ಕ್ರಾಂತಿಯು ಬುದ್ಧನ ಕಾಲದಿಂದ ಬಸವಣ್ಣನವರಿಗೆ ಹಿಡಿದು ಬಾಬಾ ಸಾಹೇಬರು ಬರೆದ ಸಂವಿಧಾನದಲ್ಲಿ ಅಂತ್ಯವಾಗುತ್ತದೆ. ಇದರ ಮಧ್ಯೆ ಭಾರತದ ಪಾಲಿನ ಜನರಿಗೆ ಮುಖ್ಯ ಘಟ್ಟವಾಗುವುದು, ಜ್ಯೋತಿಬಾ ಪುಲೆ ಅವರ ಸಾಮಾಜಿಕ ಕ್ರಾಂತಿ ಎಂದು ಭೀಮ್ ಆರ್ಮಿ ಸಂಘಟನೆಯ ಕೀರ್ತಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿದ್ದೀರಾ?ಹಾಸನ l ವಳಲಹಳ್ಳಿ ಗ್ರಾ.ಪಂ ಉಪಾಧ್ಯಕ್ಷರಾಗಿ ಹೆಚ್ ಆರ್ ಸುಧಾಕರ್ ಅವಿರೋಧ ಆಯ್ಕೆ

ಈ ವೇಳೆ ಮುಖಂಡರಾದ ರಾಕೇಶ್ ನಾಗರಾಜ್, ಹರೀಶ್ ಕೊನೆರ್ಲು, ವಕೀಲರಾದ ಉಮೇಶ್, ಭೀಮ್ ಆರ್ಮಿ ವಿದ್ಯಾರ್ಥಿ ಘಟಕದ  ಸಂಚಾಲಕರಾದ ರಾಕೇಶ್ , ರಕ್ಷಿತ್, ಪ್ರತಾಪ್ ಅಜ್ಜೇನಹಳ್ಳಿ ವಿದ್ಯಾರ್ಥಿಗಳಾದ ಗಗನ್ ಹಾಗೂ ವಿನಯ್ ಇನ್ನಿತರರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...