ಹಾಸನ l ಚನ್ನರಾಯಪಟ್ಟಣ ತಹಶೀಲ್ದಾರ್ ಅಮಾನತಿಗೆ ಜನಪರ ಸಂಘಟನೆ ಆಗ್ರಹ; ಪ್ರತಿಭಟನೆ ಎಚ್ಚರಿಕೆ

Date:

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನಲ್ಲಿ ತಹಶೀಲ್ದಾ‌ರ್ ಕಛೇರಿ ಒಳಗೊಂಡು ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ನಡೆಯುತ್ತಿರುವ, ಭ್ರಷ್ಟಾಚಾರ ವಿರುದ್ಧ ಭ್ರಷ್ಟಾಚಾರ ವಿರೋಧಿ ಆಂದೋಲನ ವೇದಿಕೆ ವತಿಯಿಂದ, ವಾರದಿಂದ ನಡೆಸುತ್ತಿರುವ ಆಹೋರಾತ್ರಿ ಧರಣಿ ಸತ್ಯಾಗ್ರಹಕ್ಕೆ ಜನಪರ ಸಂಘಟನೆಯಿಂದ ಬೆಂಬಲ ವ್ಯಕ್ತ ಪಡಿಸಿ, ಪ್ರತಿಭಟನೆ ನಡೆಸುವುದಾಗಿ ಪತ್ರಿಕಾ ಗೋಷ್ಠಿ ನಡೆಸಿದರು.

ಜನತೆಗೆ ಉತ್ತಮ ಆಡಳಿತ ವ್ಯವಸ್ಥೆ ಇರಬೇಕು. ತಹಶೀಲ್ದಾರ್ ಕಛೇರಿ ಮೊದಲು ಭ್ರಷ್ಟಾಚಾರ ಮುಕ್ತ ಆಡಳಿತಕ್ಕೆ ಮುಂದಾಗಲು ಶುದ್ದೀಕರಣ ಇಲ್ಲಿಂದಲೇ ಪ್ರಾರಂಭ ಆಗಬೇಕೆಂದು ಸಾರ್ವಜನಿಕರ ಒತ್ತಾಸೆಯಾಗಿತ್ತು. ಹಲವು ಸಮಸ್ಯೆಗಳ ಕುರಿತು ತಾಲ್ಲೂಕಿನ ನೊಂದ ರೈತರು ಅರ್ಜಿಗಳನ್ನು ನೀಡಿದ್ದರು. ಕಲ್ಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಕೆರೆ ಗೇಟ್ (ಕಟ್ಟೆಮನೆ) ಸರ್ವೆ ನಂ. 154 ರಲ್ಲಿ ಸುಮಾರು 60 ಕುಟುಂಬಗಳಿಗೆ ಹಕ್ಕುಪತ್ರ ನೀಡುವಂತೆ ಒತ್ತಾಯಿಸಿ 2021-22 ಸಾಲಿನಲ್ಲಿ ಸರ್ಕಾರದ ಆದೇಶದ ಮೇರೆಗೆ ಕಂದಾಯ ಇಲಾಖೆಯ 94ಸಿ ಅಡಿಯಲ್ಲಿ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಅಲ್ಲಿನ ನಿವಾಸಿಗಳು ಹತ್ತಾರು ಬಾರಿ ತಾಲ್ಲೂಕು ಕಛೇರಿಗೆ ತಿರುಗಿದರು. ಕಾನೂನಿನನ್ವಯ ಹಕ್ಕುಪತ್ರ ನೀಡಬೇಕೆಂದು ನಾವುಗಳು ಹಕ್ಕೊತ್ತಾಯ ಮಾಡಿದ್ದರು, ಏನು ಪ್ರಯೋಜನವಾಗಿಲ್ಲ ಎಂದು ಭ್ರಷ್ಟಾಚಾರ ವಿರೋಧಿ ಆಂದೋಲನ ವೇದಿಕೆ ಮುಖಂಡರಾದ ಮಂಜುನಾಥ್ ತಿಳಿಸಿದರು.

ಶ್ರೀಮತಿ ಲಕ್ಷ್ಮಮ್ಮ ಲೇ। ರಂಗೇಗೌಡ, ಶೆಟ್ಟಿಹಳ್ಳಿ ಗ್ರಾಮ, ಕಸಬಾ ಹೋಬಳಿ 35 ಗುಂಟೆ ಜಮೀನಿನ ಸರ್ವೆಮಾಡಿ 194 ಹೊಸ ನಂಬರ್ ನೀಡಿದ್ದಾರೆ ಇದರ ಇಂಡೀಕರಣ ಮಾಡಲು ಆಗಸ್ಟ್ 2024 ರಂದು ತಹಶೀಲ್ದಾರ್ ಅವರಿಗೆ ಸರ್ವೆಯವರು ನೀಡಿದ್ದಾರೆ. ಹಣ ನೀಡದ ಕಾರಣ ಇಲ್ಲಿಯವರೆಗೂ ಇಂಡೀಕರಣ ಮಾಡಿಲ್ಲ. ತಹಸಿಲ್ದಾರ್ ವಿ.ಎಸ್ ನವೀನ್ ಕುಮಾರ್ (ಕೆ.ಎ.ಎಸ್.) ಇವರು ಚನ್ನರಾಯಪಟ್ಟಣ ನಗರದ ಸುತ್ತ ಮುತ್ತ ಹಳ್ಳಿಗಳಲ್ಲಿ ಜಮೀನು ದುರಸ್ತು ಮಾಡಲು ಎಕರೆಗೆ ಲಕ್ಷಾಂತರ ರೂಪಾಯಿಗಳನ್ನು ರೈತರು ನೀಡಬೇಕೆಂದು ಕೇಳುತ್ತಾರೆ. ಈ ಮೂಲಕ ನೇರವಾಗಿ ಸುಲಿಗೆಗೆ ಇಳಿದಿದ್ದಾರೆ ಎಂದು ಸಂಘಟನೆಯ ಮುಖಂಡರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಹಶೀಲ್ದಾರ್ ನವೀನ್‌ ಕುಮಾರ್ ಅವರನ್ನು ಕೂಡಲೇ ತಹಶೀಲ್ದಾ‌ರ್ ಸೇವೆಯಿಂದ ಅಮಾನತು ಮಾಡಿ ಅವರ ವಿರುದ್ಧ ಸೂಕ್ತ ತನಿಖೆ ನಡೆಸಬೇಕು. ಇಲ್ಲದಿದ್ದರೆ ಜಿಲ್ಲಾಧಿಕಾರಿ ಕಚೇರಿ ಮುಂದೆ ತೀವ್ರವಾದ ಬೃಹತ್ ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಜನಪರ ಸಂಘಟನೆ ಆಗ್ರಹಿಸಿದೆ.

ಇದನ್ನೂ ಓದಿದ್ದೀರಾ?ಹಾಸನ l ದೇವಸ್ಥಾನದಲ್ಲಿ ಅರ್ಚಕ ಅತ್ಮಹತ್ಯೆ 

ಈ ವೇಳೆ ಎಚ್.ಎಸ್.ಮಂಜುನಾಥ್, ಸಂದೇಶ್, ಎಚ್ ಆರ್ ನವೀನ್‌ ಕುಮಾರ್, ಎಂ ಜಿ ಪೃಥ್ವಿ, ರಾಮಚಂದ್ರ ಹಳಗೇರಳ್ಳಿ, ರವಿಗೌಡಯ್ಯ ಶಂಕರಣ್ಣ ಹಾಗೂ ಇನ್ನಿತರರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...