ಹಾಸನ l ಪ್ರಚೋದನಕಾರಿ ಭಾಷಣ; ಮುತಾಲಿಕ್ ವಿರುದ್ದ ಪ್ರಕರಣ ದಾಖಲು

Date:

ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಹಿನ್ನೆಲೆಯಲ್ಲಿ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹಾಗೂ ಇತರರ ವಿರುದ್ಧ ಸಕಲೇಶಪುರ ತಾಲ್ಲೂಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜ.9 ರಂದು ಸಕಲೇಶಪುದರಲ್ಲಿ ನಡೆದಿದ್ದ ವಿರಾಟ್ ಹಿಂದೂ ಸಮಾಜೋತ್ಸವ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಪ್ರಮೋದ್ ಮುತಾಲಿಕ್ ವಿರುದ್ದ ಗುಪ್ತ ಮಾಹಿತಿ ಸಿಬ್ಬಂದಿ ಎಂ.ಕೆ. ಶ್ರೀಧರ್ ದೂರು ಆಧರಿಸಿ ಮೊಕದ್ದಮೆ ದಾಖಲಿಸಲಾಗಿದೆ. ಬಿಎನ್ಎಎಸ್ 2023,196(1), 353 (2), 3 (5) ಅಡಿ ಪ್ರಕರಣ ದಾಖಲಾಗಿದೆ.

ಹಿಂದೂಗಳು ಮುಸ್ಲಿಂರಿಗೆ ಕುರಿ ಮಾಂಸ ಎಂದು ಹೇಳಿ ಕೊಡಿ ಅವರು ಹಲಾಲ್ ಆಗಿಲ್ಲ ಎಂದು ತಿನ್ನುವುದಿಲ್ಲ. ಆದರೆ ಹಿಂದೂಗಳು ಮುಸ್ಲಿಂ ಹೋಟೆಲ್‌ಗಳಿಗೆ ಹೋಗಿ ಹಲಾಲ್ಮಾ ಮಾಡಿರುವ ಮಾಂಸವನ್ನು ಚಪ್ಪರಿಸಿಕೊಂಡು ತಿಂತಾರೆ ಅದೂ ಸಗಣಿ ತಿಂದಂಗೆ ಇದು ಸರಿನಾ ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2003ರಲ್ಲಿ ಸಕಲೇಶಪುರದಲ್ಲಿ ಹಿಂದೂಗಳ ಏರಿಯಾದಲ್ಲಿ ಮುಸ್ಲಿಂ ಸಮುದಾಯದವರು ಒಂದು ಗೋಮಾಂಸದ ಅಂಗಡಿಯನ್ನು ತೆರೆದಿದ್ದರು. ಆಗ ಹಿಂದೂಗಳು ಸುಮ್ಮನೆ ಇರಲಿಲ್ಲ. ಅದೇ ಅಂಗಡಿಯ ಎದುರು ಒಂದು ಹಂದಿ ಮಾಂಸದ ಅಂಗಡಿಯನ್ನು ತೆರೆದರು. ಮುಸ್ಲಿಂರು ಏನಾದರು ದನದ ಮಾಂಸದ ಅಂಗಡಿ ಯನ್ನು ತೆರೆದರೆ ನಿಮ್ಮ ಮನೆಯ ಮುಂದೆ ಹಂದಿ ಕಡಿದು ತಿಂತೀವಿ ಎಂದು ಎಚ್ಚರಿಸಿದರು.

ಸಹನೆಗೆ ಒಂದು ಮಿತಿ ಬೇಡವಾ ಆಕಳ ರಕ್ತ, ನಮ್ಮ ರಕ್ತ, ಮುಂದಿನ ದಿನಗಳಲ್ಲಿ ನಾವು ಗೋಮಾತೆ ರಕ್ಷಣೆ ಮಾಡುತ್ತೇವೆ. ನಾವುಗಳು ಇವತ್ತಿನ ದಿನ ಪ್ರತಿಜ್ಞೆಮಾಡಬೇಕು. ಬೆಳಿಗ್ಗೆ ತರಕಾರಿ ಅಂಗಡಿಗೆ ಹೋದಾಗ ಹಿಂದೂಗಳ ಅಂಗಡಿಗಳಲ್ಲಿ ಮಾತ್ರ ತೆಗೆದುಕೊಳ್ಳಬೇಕು. ದೇವಸ್ಥಾನಕ್ಕೆ ಹೋದಾಗ ಹಿಂದೂಗಳ ಹತ್ತಿರ ಹಣ್ಣು ಕಾಯಿ ಖರೀದಿಸಬೇಕು. ಆಗ ಗೋಮಾತೆ ರಕ್ಷಣೆ ಮಾಡಿದಂತೆ ಆಗುತ್ತದೆ. ಆದರೆ ನಾವು ಮುಸ್ಲಿಂರ ಬಳಿ ತೆಗೆದುಕೊಂಡು ನಮ್ಮ ಮೇಲೆ ನಾವೇ ಚಪ್ಪಡಿ ಎಳೆದುಕೊಳ್ಳುತ್ತಿದ್ದೇವೆ. ಮುಸ್ಲಿಂರ ಹೋಟೆಲ್‌ಗೆ ಹೋಗುವಾಗ ಒಂದು ಸಾರಿ ಮೂತ್ರ ವಿಸರ್ಜನೆ ಮಾಡಿರುವುದನ್ನು ನೆನಪಿಸಿಕೊಳ್ಳಿ ಮೂತ್ರ ವಿಸರ್ಜನೆ ಮಾಡಿರುವವರನ್ನು ಪೊಲೀಸರು, ಸರ್ಕಾರ ಜಿಲ್ಲೆಯಿಂದ ಗಡಿಪಾರು ಮಾಡದಿದ್ದರೆ ನಾವೇ ಆತನ ಬಾಯಿಗೆ ಮೂತ್ರ ವಿಸರ್ಜನೆ ಮಾಡುತ್ತೇವೆ ಎಂದರು.

ಸಕಲೇಶಪುರ ಕಾಫಿ ಎಸ್ಟೇ ಟ್‌ಗಳಲ್ಲಿರುವ ಬಾಂಗ್ಲಾ ದೇಶದವರನ್ನು ಹೊರಹಾಕಬೇಕು. ಇಲ್ಲದ್ದಿದ್ದಲಿ ಮುಂದಿನ ದಿನಗಳಲ್ಲಿ ಗಂಡಾಂತರ ತಪ್ಪಿದ್ದಲ್ಲ. ಕಾಫಿ ತೋಟಕ್ಕೆ ಜನರು ಬೇಕಾದಲ್ಲಿ ನಾನು ಉತ್ತರ ಕರ್ನಾಟಕದಿಂದ ಕಳುಹಿಸಿ ಕೊಡುತ್ತೇನೆ. ಇಲ್ಲವಾದಲ್ಲಿ ನಾವೇ ಬಂದು ಬಾಂಗ್ಲಾ ಮುಸ್ಲಿಂರನ್ನು ಹೊರ ಹಾಕುತ್ತೇವೆ. ಹಿಂದೂಗಳ ರಕ್ಷಣೆಗಾಗಿ ಬರ್ಜಿ, ಕತ್ತಿತಲ್ವಾರ್, ಬಂದೂಕುಗಳನ್ನು ಮನೆಗಳಲ್ಲಿ ಕಾಣುವ ರೀತಿಯಲ್ಲಿ ಇಟ್ಟುಕೊಳ್ಳಬೇಕು. ಬಾಂಗ್ಲಾದಲ್ಲಿ ಹಿಂದೂಗಳ ಹತ್ಯೆ ಆಗುತ್ತಿದೆ. ಇದನ್ನು ಕ್ರೂರವಾಗಿ ನಾವು ಖಂಡಿಸುತ್ತೇವೆ ಎಂದರು.

ಇದನ್ನೂ ಓದಿದ್ದೀರಾ?ಹಾಸನ l ಸ್ನೇಹಿತನ ಕೊಲೆ ಶಿರಾಡಿ ಘಾಟ್ ಶವ ಎಸೆತ, ಆರೋಪಿಗಳ ಬಂಧನ; ಹರಳಹಳ್ಳಿ ಗ್ರಾಮಸ್ಥರ ಪ್ರತಿಭಟನೆ

ಸಮಾಜದ ಶಾಂತಿ ಹಾಳು ಮಾಡುವ ಉದ್ದೇಶ ಹಾಗೂ ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ. ಎಂಬ ಕಾರಣಕ್ಕೆ ಪ್ರಕರಣ ದಾಖಲಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...