ಹಾಸನ | ಶಿರಾಡಿಘಾಟ್‌ನ ಕೆಲವೆಡೆ ಗುಡ್ಡ ಕುಸಿತ; ಕೊಚ್ಚಿ ಹೋದ ತಡೆಗೋಡೆ, ಕೈ ಕೊಟ್ಟ ವಿದ್ಯುತ್

Date:

ಕಳೆದ ನಾಲ್ಕು ದಿನಗಳಿಂದ ಜಿಲ್ಲೆಯಲ್ಲಿ ಸುರಿಯುತ್ತಿರುವ ವರ್ಷಧಾರೆಯಿಂದಾಗಿ ಶಿರಾಡಿಘಾಟ್‌ನ ಕೆಲವೆಡೆ ಗುಡ್ಡ ಕುಸಿತ ಉಂಟಾಗಿದ್ದು, ಸಾರ್ವಜನಿಕರು ಹಾಗೂ ವಾಹನ ಸವಾರರಲ್ಲಿ ಆತಂಕ ಮನೆ ಮಾಡಿದೆ.

ಶಿರಾಡಿಘಾಟ್ ಸೇರಿದಂತೆ ಮಲೆನಾಡು ಭಾಗದ ಕೆಲ ಗ್ರಾಮಗಳಲ್ಲಿ ಮನೆ ಕುಸಿತದ ಆತಂಕ ಎದುರಾಗಿದ್ದು, ನಿವಾಸಿಗಳು ಮನೆ ಖಾಲಿ ಮಾಡುತ್ತಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಜಿಲ್ಲೆಯಲ್ಲಿ ವರುಣ ಅಬ್ಬರಿಸುತ್ತಿದ್ದು, ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.

ಮಲೆನಾಡು ಭಾಗದಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಶಿರಾಡಿಘಾಟ್ ರಸ್ತೆಯಲ್ಲಿ ಹಲವು ಕಡೆ ಭೂಕುಸಿತ ಉಂಟಾಗಿದೆ. ಸಕಲೇಶಪುರ ತಾಲೂಕಿನ ಹೆಗ್ಗದ್ದೆ ಬಳಿ ಭೂಮಿ ಕುಸಿಯುತ್ತಲೇ ಇದ್ದು, ಮನೆ, ಚರ್ಚ್‌ಗೆ ತೆರಳುವ ರಸ್ತೆ ಬಂದ್ ಆಗಿದೆ. ಮೂರ್ನಾಲ್ಕು ದಿನಗಳ ಹಿಂದೆಯೇ ಹೆಗ್ಗದ್ದೆ ನಿವಾಸಿ ಯಶಸ್ವಿ ಎಂಬುವವರು ಮನೆಗೆ ರಸ್ತೆ ಸಂಪರ್ಕವಿಲ್ಲದ ಕಾರಣ ಹಾಗೂ ನೀರಿನ ಸರಬರಾಜು ಸ್ಥಗಿತ ಮತ್ತು ಗುಡ್ಡ ಕುಸಿತದ ಭಯದಿಂದ ಕುಟುಂಬ ಸಹಿತ ಮನೆ ಖಾಲಿ ಮಾಡಿ ಬೇರೆಡೆಗೆ ತೆರಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮತ್ತೊಂದೆಡೆ ನಿತ್ಯ ಸುರಿಯುತ್ತಿರುವ ಮಳೆಗೆ ಮನೆ, ಚರ್ಚ್, ಟವರ್ ಕುಸಿಯುವ ಭೀತಿ ಎದುರಾಗಿದೆ. ಒಂದು ಭಾಗದಲ್ಲಿ ರಸ್ತೆ ಸಂಚಾರ ಬಂದ್ ಮಾಡಿ ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ಇನ್ನೊಂದೆಡೆ ಮಳೆಯ ಆರ್ಭಟಕ್ಕೆ ಗುಡ್ಡ ಕುಸಿಯುತ್ತಲೇ ಇದೆ. ಮಣ್ಣಿನ ಜೊತೆ ಮರ, ಗಿಡಗಳು ರಸ್ತೆಗೆ ಉರುಳುತ್ತಿವೆ.

ಗುಡ್ಡ ಕುಸಿತ 2

ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಸಕಲೇಶಪುರ, ಆಲೂರು, ಹಾಸನ, ಬೇಲೂರು ಭಾಗದಲ್ಲಿ ಬಿರುಗಾಳಿ ಸಹಿತ ಮಳೆಯಾಗುತ್ತಿದೆ.

ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಜಿಲ್ಲೆಯ ಬಹುತೇಕ ಕಡೆ ಮೋಡಕವಿದ ವಾತಾವರಣವಿದೆ. ಇನ್ನು ಸಕಲೇಶಪುರ, ಚಿಕ್ಕಮಗಳೂರು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಹಾಸನದ ಜೀವನದಿ ಹೇಮಾವತಿ(ಗೋರೂರು) ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹೇಮಾವತಿ ಜಲಾಶಯಕ್ಕೆ ಒಟ್ಟು 8,276 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ನದಿ, ನಾಲೆಗಳು ಸೇರಿ ಒಟ್ಟು 350 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ.

ಕೊಚ್ಚಿ ಹೋದ ತಡೆಗೋಡೆ

ಜೋರು ಮಳೆಗೆ ಆನೆಮಹಲ್ ಬಳಿ ರಸ್ತೆಯ ತಡೆಗೋಡೆ ಕೊಚ್ಚಿಹೋಗಿದ್ದು, ನೂರು ಮೀಟರ್ ಉದ್ದಕ್ಕೂ ಗೆಬ್ರಿಯನ್ ವಾಲ್ ಕುಸಿದಿದೆ. ರಸ್ತೆ ಸುರಕ್ಷತೆಗೆಂದು ತಡೆ ಗೋಡೆ ನಿರ್ಮಿಸಲಾಗಿತ್ತು. ಆದರೀಗ ಅದೇ ಕುಸಿದಿದೆ. ದೊಡ್ಡತಪ್ಲು ಬಳಿ ಮರವೊಂದು ರಸ್ತೆಗೆ ಉರುಳಿ ಬಿದ್ದಿದೆ. ಮರದ ಜೊತೆ ಮಣ್ಣೂ ಕೂಡ ಕುಸಿದು ಸಂಚಾರ ಸ್ಥಗಿತಗೊಂಡಿತ್ತು. ರಾತ್ರಿ 3 ಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರ ಬಂದ್ ಆಗಿತ್ತು. ಮುಂಜಾನೆವರೆಗೂ ಮರ ಹಾಗೂ ಮಣ್ಣನ್ನು ರಕ್ಷಣಾ ಸಿಬ್ಬಂದಿ ತೆರವು ಮಾಡಿದರು. ಬೆಳಿಗ್ಗೆ 7ಕ್ಕೆ ಮತ್ತೆ ವಾಹನ ಸಂಚಾರ ಆರಂಭವಾಯಿತು.

ಈ ಸುದ್ದಿ ಓದಿದ್ದೀರಾ? ರಾಯಚೂರು | ‘ಕೆಸರಲ್ಲಿ ಶಾಲೆಯೋ, ಶಾಲೆಯಲ್ಲಿ ಕೇಸರೋʼ

ಕೈ ಕೊಟ್ಟ ವಿದ್ಯುತ್

ನಿರಂತರ‌ ಸುರಿಯುತ್ತಿರುವ ಮಳೆಯಿಂದ ವಿದ್ಯುತ್ ಕೈಕೊಟ್ಟಿದ್ದು, ಆಲೂರು ತಾಲೂಕಿನ ಕರಿಗೌಡನಹಳ್ಳಿಯಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಐದು ದಿನಗಳಿಂದ ವಿದ್ಯುತ್ ಇಲ್ಲದೆ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಎಷ್ಟೇ ದೂರು ನೀಡಿದರೂ ಸೆಸ್ಕ್ ಅಧಿಕಾರಿಗಳು ಸ್ಪಂದಿಸುತ್ತಿಲ್ಲವೆಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ವಿದ್ಯುತ್ ಇಲ್ಲದೆ ಕುಡಿಯುವ ನೀರಿಗೂ ಸಮಸ್ಯೆ ಆಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಈ ಬಗ್ಗೆ ಗಮನ ಹರಿಸಬೇಕು” ಎಂಬುದು ಸ್ಥಳೀಯರ ಒತ್ತಾಯವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...