ಹಾಸನ | ಮರಳಿ ತಾಯಿ ಮಡಿಲು ಸೇರಿದ ಚಿರತೆ ಮರಿಗಳು; ಅರಣ್ಯ ಇಲಾಖೆ ಕಾರ್ಯವೈಖರಿಗೆ ಮೆಚ್ಚುಗೆ

Date:

ತಾಯಿ ಚಿರತೆಯಿಂದ ಬೇರ್ಪಟ್ಟಿದ್ದ ಮೂರು ಮರಿಗಳನ್ನು ಮರಳಿ ತಾಯಿ ಮಡಿಲಿಗೆ ಸೇರಿಸುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದ್ದು, ಅರಣ್ಯ ಇಲಾಖೆಯ ಕಾರ್ಯವೈಖರಿಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.

ಹಾಸನದ ಚನ್ನರಾಯಪಟ್ಟಣ ತಾಲೂಕಿನ ಬೇಡಿಗನಹಳ್ಳಿ ಗ್ರಾಮದ ಚೆಲುವೇಗೌಡ ಎಂಬುವವರ ಕಬ್ಬಿನ ತೋಟದಲ್ಲಿ ಅ. 2 ರಂದು ಚಿರತೆಯೊಂದು ಮೂರು ಮರಿಗಳಿಗೆ ಜನ್ಮ ನೀಡಿತ್ತು. ಕಬ್ಬು ಕಟಾವು ಕಾರ್ಯ ಆರಂಭಿಸಿದಾಗ ತಾಯಿ ಚಿರತೆ ಹೆದರಿ ಮರಿಗಳನ್ನು ಅಲ್ಲೇ ಬಿಟ್ಟು ಹೋಗಿತ್ತು. ಕಬ್ಬು ಕಟಾವು ಕಾರ್ಮಿಕರು ಅವುಗಳನ್ನು ಮನೆಗೆ ತೆಗೆದುಕೊಂಡು ಹೋಗಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಬ್‌ ಕುಮಾರ್ ಹಾಗೂ ಡಿಆರ್‌ಎಫ್‌ಒ ಶಂಕರ್, ಸಿಬ್ಬಂದಿ ಮರಿಗಳ ಆರೈಕೆ ಮಾಡಿ ತಾಯಿ ಜೊತೆಗೆ ಸೇರಿಸಿದ್ದಾರೆ.

ಕಬ್ಬಿನ ಗದ್ದೆಯಿಂದ ಮನೆಗೆ ತೆಗೆದುಕೊಂಡು ಹೋಗಿದ್ದ ಮರಿ ಚಿರತೆಗಳನ್ನು ವಶಕ್ಕೆ ಪಡೆದಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಮರದ ಪೆಟ್ಟಿಗೆಯೊಂದರಲ್ಲಿ ಹಾಕಿ ತಾಯಿ ಚಿರತೆ ಬರಬಹುದೆಂಬ ನಿರೀಕ್ಷೆಯಿಂದ ಜನ್ಮ ಪಡೆದ ಸ್ಥಳದಲ್ಲೇ ಇಟ್ಟಿದ್ದರು. ಕರುಳ ಕುಡಿಗಳ ಚೀರಾಟ ಶಬ್ದ ಕೇಳಿದ್ದ ತಾಯಿ ಚಿರತೆ ಮೊದಲ ದಿನ ಬಂದು ಒಂದು ಮರಿಯನ್ನು ಎತ್ತಿಕೊಂಡು ಹೋಗಿತ್ತು. ಅದನ್ನು ಗಮನಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಉಳಿದ ಎರಡು ಮರಿಗಳಿಗೆ ನಿಪ್ಪಲ್ ಸಹಾಯದಿಂದ ಹಾಲುಣಿಸಿ ಪೋಷಿಸಿದ್ದರು. ಮತ್ತೆ ಎರಡು ದಿನಗಳ ಬಳಿಕ ಬಂದಿದ್ದ ಚಿರತೆ ಮತ್ತೊಂದು ಮರಿಯನ್ನು ಹೊತ್ತೊಯ್ದಿದೆ. ಉಳಿದ ಒಂದು ಮರಿಯನ್ನು ಕರೆದೊಯ್ಯಲು ಆರು ದಿನಗಳಾದರೂ ಬರಲಿಲ್ಲ.‌ ಹುಟ್ಟಿದ ಆರು ದಿನವಾದರೂ ತಾಯಿ ಚಿರತೆ ಜೊತೆಗೆ ಸೇರದ ಮರಿಯನ್ನು ಹೇಗಾದರೂ ಮಾಡಿ ಸೇರಿಸಬೇಕೆಂದು ಪಣ ತೊಟ್ಟಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ತಾಯಿ ಚಿರತೆಯ ಜಾಡು ಹಿಡಿದು ಹೊರಟರು. ಅದಕ್ಕಾಗಿ ಭದ್ರಾ ಅರಣ್ಯದಿಂದ ಶ್ವಾನದಳವನ್ನು ಕರೆಸಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಹಾಸನ | ಸಮೀಕ್ಷೆ ವೇಳೆ ಗಣತಿದಾರರಿಂದ ಲೋಪ; ಕ್ರಮಕ್ಕೆ ಮನವಿ

ಚಿರತೆ ಹೆಜ್ಜೆಯ ಜಾಡು ಹಿಡಿದ ಶ್ವಾನ ಒಂದು ಕಿ.ಮೀ. ವರೆಗೆ ಸಾಗಿ ನಿಂತಿತು. ನಂತರ ಥರ್ಮಲ್ ಡೋನ್ ಹಾರಿಸಿ ಎರಡು ಮರಿಗಳ ಜೊತೆ ತಾಯಿ ಚಿರತೆ ಇರುವುದನ್ನು ಪತ್ತೆ ಹಚ್ಚಿದರು. ಅಲ್ಲೇ ಹತ್ತಿರದಲ್ಲಿ ಕಡಿಮೆ ಹಾಲುಣಿಸಿ ಮರಿಯನ್ನು ಬಿಡಲಾಗಿತ್ತು. ಮಧ್ಯರಾತ್ರಿ ಮರಿಯ ಕಿರುಚಾಟ ಕೇಳಿದ ತಾಯಿ ಚಿರತೆ ಅಲ್ಲಿಗೆ ಬಂದು ಅದನ್ನು ಎತ್ತಿಕೊಂಡು ಹೋಗಿದೆ. ತಾಯಿ ಚಿರತೆ ಹಾಗೂ ಮರಿಗಳನ್ನು ಒಂದು ಗೂಡಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಒಂದು ವಾರಗಳ ಕಾಲ ನಡೆಸಿದ ಪ್ರಯತ್ನ ಕೊನೆಗೂ ಸಫಲಗೊಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...