ಹಾಸನಾಂಬ ದೇವಾಲಯದ ಪ್ರವೇಶಕ್ಕೆ ಅನಧಿಕೃತ ವ್ಯಕ್ತಿಗಳಿಗೆ ಪ್ರವೇಶ ನೀಡಲು ತಮ್ಮ ಅಧಿಕೃತ ಗುರುತಿನ ಚೀಟಿಯನ್ನು ನೀಡಿ ಕರ್ತವ್ಯ ಲೋಪ ಎಸಗಿದ ಇಬ್ಬರು ಸರ್ಕಾರಿ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.
“ಸ್ಪಷ್ಟ ನಿರ್ದೇಶನಗಳಿದ್ದರೂ, ಅನಧಿಕೃತ ಪ್ರವೇಶಕ್ಕೆ ಅವಕಾಶ ನೀಡಿರುವುದು ಗಂಭೀರ ಉಲ್ಲಂಘನೆಯಾಗಿದೆ. ಸರ್ಕಾರಿ ಗುರುತಿನ ಚೀಟಿಯನ್ನು ದುರುಪಯೋಗಪಡಿಸಿಕೊಳ್ಳುವುದು ಗಂಭೀರ ಅಪರಾಧ. ಇಂತಹ ವರ್ತನೆ ಸರ್ಕಾರಿ ನೌಕರರಿಗೆ ಯೋಗ್ಯವಲ್ಲ ಮತ್ತು ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದೆ. ಈ ಹಿನ್ನೆಲೆ ಕ್ರಮ ಜರುಗಿಸಲಾಗಿದೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಹಾಸನ | ಸಮೀಕ್ಷೆ ವೇಳೆ ಗಣತಿದಾರರಿಂದ ಲೋಪ; ಕ್ರಮಕ್ಕೆ ಮನವಿ
ಈ ಘಟನೆ ಹೊರತುಪಡಿಸಿ, ಎಲ್ಲಾ ಸರ್ಕಾರಿ ಸಿಬ್ಬಂದಿ ಸಾರ್ವಜನಿಕರಿಗೆ ಅತ್ಯುತ್ತಮ ದರ್ಶನ ವ್ಯವಸ್ಥೆ ಕಲ್ಪಿಸುವಲ್ಲಿ ಅನುಕರಣೀಯ ಸೇವೆ ಸಲ್ಲಿಸಿದ್ದಾರೆ. ವ್ಯವಸ್ಥಿತ ದರ್ಶನ, ಶಿಸ್ತುಬದ್ಧ ನಿರ್ವಹಣೆ ಮತ್ತು ಸಮನ್ವಯತೆಯಿಂದ ತಂಡ ಉತ್ತಮ ಕೆಲಸ ನಿರ್ವಹಿಸಿದೆ ಎಂದು ಉಳಿದ ಅಧಿಕಾರಿಗಳನ್ನು ಪ್ರಶಂಸಿಸಿದರು.





