ಹಾಸನ | ಶಾಸಕ ಶಿವಲಿಂಗೇಗೌಡರ ಆಡಿಯೋ ವೈರಲ್; ಜೆಡಿಎಸ್ ವಕ್ತಾರ ಎಸ್‌ಪಿಗೆ ದೂರು

Date:

ಲೋಕಸಭಾ ಚುನಾವಣೆ ವೇಳೆ ಅರಸೀಕೆರೆ ಕ್ಷೇತ್ರದ ಶಾಸಕ ಶಿವಲಿಂಗೇಗೌಡ ನೀತಿಸಂಹಿತೆ ಉಲ್ಲಂಘನೆಯ ಮಾತುಗಳನ್ನಾಡಿರುವ ಆಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜೆಡಿಎಸ್ ವಕ್ತಾರ ಹಾಸನ ಎಸ್‌ಪಿಗೆ ದೂರು ನೀಡಿದ್ದಾರೆ.

ಜೆಡಿಎಸ್ ಜಿಲ್ಲಾಧ್ಯಕ್ಷ ಕೆ ಎಸ್ ಲಿಂಗೇಶ್ ಸುದ್ದಿಗಾರರೊಂದಿಗೆ ಮಾತನಾಡಿ, “ಕಳೆದ ಲೋಕಸಭೆ ಚುನಾವಣೆ ವೇಳೆ ವಾಮ ಮಾರ್ಗದಿಂದ ಚುನಾವಣೆ ನೀತಿಸಂಹಿತೆ ಉಲ್ಲಂಘಿಸಿ ಚುನಾವಣೆ ಗೆದ್ದಿರುವುದು ಇತ್ತೀಚೆಗೆ ವೈರಲ್ ಆಗಿರುವ ಅರಸೀಕೆರೆ ಶಾಸಕ ಕೆ ಎಂ ಶಿವಲಿಂಗೇಗೌಡ ಅವರ ಆಡಿಯೋದಿಂದ ಬಹಿರಂಗವಾಗಿದೆ” ಎಂದು ಹೇಳಿದರು.

“ಸಂಸದ ಶ್ರೇಯಸ್ ಪಟೇಲ್, ಗೃಹಮಂಡಳಿ ಅಧ್ಯಕ್ಷ ಶಿವಲಿಂಗೇಗೌಡ, ಮಾಜಿ ಸಚಿವ ಬಿ ಶಿವರಾಂ, ವಿಧಾನ ಪರಿಷತ್‌ ಮಾಜಿ ಸದಸ್ಯ ಎಂ ಎ ಗೋಪಾಲಸ್ವಾಮಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾ‌ರ್, ರಾಜ್ಯಸಭಾ ಸದಸ್ಯ ಚಂದ್ರಶೇಖ‌ರ್ ಸೇರಿದಂತೆ ಹಲವರು ಕೋಟ್ಯಂತರ ರೂಪಾಯಿ ಹಣ ಹಂಚಿಕೆಯಲ್ಲಿ ಭಾಗಿಯಾಗಿರುವ ಬಗ್ಗೆ ವೈರಲ್ ಆಗಿರುವ ಆಡಿಯೋದಲ್ಲಿ ಉಲ್ಲೇಖವಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಜೆಡಿಎಸ್ 7

“ಮತದಾರರಿಗೆ ಹಣ ಹಂಚಿರುವ ಬಗ್ಗೆ ಆಡಿಯೋದಲ್ಲಿ ದಾಖಲೆಗಳಿವೆ. ಜತೆಗೆ ಪ್ರತಿಯೊಬ್ಬರೂ ಕೋಟ್ಯಂತರ ರೂಪಾಯಿ ಹಣ ಹಂಚಿಕೆಗೆ ಬಳಸಿದ್ದಾರೆ. ಅವರೆಲ್ಲರಿಗೂ ಹಣ ಹೇಗೆ ಬಂತು ಎಂಬ ಬಗ್ಗೆ ತನಿಖೆ ನಡೆಸಬೇಕು. ಜತೆಗೆ ಚುನಾವಣಾ ಆಯೋಗದ ನೀತಿ ನಿಯಮಗಳನ್ನು ಗಾಳಿಗೆ ತೂರಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

“ಚುನಾವಣಾ ಆಯೋಗ, ಇ.ಡಿ ಸೇರಿದಂತೆ ಇತರ ತನಿಖಾ ಸಂಸ್ಥೆಗಳು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿ ಜಿಲ್ಲಾ ಜೆಡಿಎಸ್‌ ಕಾರ್ಯಕರ್ತರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಇಂದು ದೂರು ಸಲ್ಲಿಸಿದ್ದಾರೆ.

ಘಟನೆ ಹಿನ್ನೆಲೆ

ಲೋಕಸಭೆ ಚುನಾವಣೆ ವೇಳೆ ಹಾಸನ ಜಿಲ್ಲಾದ್ಯಂತ ಕೋಟ್ಯಂತರ ರೂಪಾಯಿ ಹಂಚಲಾಗಿದೆಯೆಂದು ಅರಸೀಕೆರೆ ಶಾಸಕ ಕೆ ಎಂ ಶಿವಲಿಂಗೇಗೌಡ ಹೇಳಿರುವ ಆಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಿಎಂ, ಡಿಸಿಎಂ ನಿರ್ದೇಶನದಂತೆ ಹಣ ಹಂಚಬೇಕು. ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ 5 ಕೋಟಿ ರೂ., ಮಾಜಿ ಎಂಎಲ್‌ಸಿ ಗೋಪಾಲಸ್ವಾಮಿ 1 ಕೋಟಿ ರೂ., ನಾನು 1 ಕೋಟಿ ರೂ. ನೀಡುತ್ತೇನೆ. ಒಟ್ಟಾರೆ 7 ಕೋಟಿ ರೂ. ಹಂಚಬೇಕೆಂದು ಶಾಸಕ ಶಿವಲಿಂಗೇಗೌಡ ತಮ್ಮ ಪಕ್ಷದ ಮುಖಂಡರ ಜತೆಗೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಕ್ಲಿಪ್‌ ವೈರಲ್‌ ಆಗಿದೆ ಎನ್ನಲಾಗುತ್ತಿದೆ.

ಪ್ರತಿ ವೋಟಿಗೆ ಐದು ನೂರು ರೂಪಾಯಿ ಕೊಡಬೇಕು. ಒಟ್ಟು ಶೇಕಡಾ 68 ರಿಂದ 70 ಜನರಿಗೆ ಹಣ ಕೊಡಿ. ಯಾರು ನಮಗೆ ವೋಟ್ ಹಾಕುತ್ತಾರೆ ಎಂಬುದು ಗೊತ್ತಿರುತ್ತೆ, ಅವರಿಗೆ ಕೊಡಿ. ಅವರು ಶೇ.30ರಷ್ಟು ವೋಟು ತೆಗೆದುಕೊಳ್ಳುತ್ತಾರೆ, ಅವರಿಗೆ ಕೊಡೋದು ಬೇಡ. ಸಿಎಂ, ಡಿಸಿಎಂ, ಉಸ್ತುವಾರಿ ಅವರೇ ತೀರ್ಮಾನ ಮಾಡಿದ್ದಾರೆ. ಅದರಂತೆ ಹಂಚಲಿ. ಶಿವರಾಂ ಅವರು ಮನೆಗೊಂದು ಸಾವಿರ ಕೊಡುತ್ತಿದ್ದಾರಂತೆ. ಅವರ ಶಿಷ್ಯನೇ ಹೇಳಿದ್ದಾರೆ, ಅವರು ಐದು ನೂರು ರೂಪಾಯಿ ಕೊಟ್ಟಿದಾರೆ ಎಂಬುದಾಗಿ” ಎಂದಿರುವ ಆಡಿಯೋ ವೈರಲ್‌ ಆಗಿದೆ.

ಈ ಸುದ್ದಿ ಓದಿದ್ದೀರಾ? ಉಪಚುನಾವಣೆ | ಸಂಡೂರಿನ ರಾಜಕೀಯ ಇತಿಹಾಸ; ಗೆಲುವು ಯಾರ ತೆಕ್ಕೆಗೆ?

ನಾವೂ ಕೂಡಾ ಒಂದು ವೋಟಿಗೆ ₹500 ಕೊಡಬೇಕು ಎಂದಿರುವುದು ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಸಚಿವ ಬಿ ಶಿವರಾಂ ಅವರ ಬಗ್ಗೆಯೂ ಆಕ್ಷೇಪ ವ್ಯಕ್ತಪಡಿಸಿರುವುದು ಆಡಿಯೋದಲ್ಲಿದೆ. ʼತೀರ್ಮಾನ ಆಗಿರುವುದು ಐದು ನೂರು ರುಪಾಯಿ ಹಂಚಬೇಕೆಂದು, ಅಷ್ಟು ಹಂಚದಿದ್ದರೆ ಚೆನ್ನಾಗಿರಲ್ಲʼ ಎಂದು ಮಾತನಾಡಿರುವುದು ಆಡಿಯೋದಲ್ಲಿದೆ ಎನ್ನಲಾಗಿದೆ.

ಎಸ್‌ಪಿಗೆ ದೂರು ನೀಡುವ ಸಂದರ್ಭದಲ್ಲಿ ಜೆಡಿಎಸ್ ವಕ್ತಾರ ಹೊಂಗೆರೆ ರಘು, ಜೆಡಿಎಸ್ ತಾಲೂಕು ಅಧ್ಯಕ್ಷ ಎಸ್ ದ್ಯಾವೇಗೌಡ, ವಕೀಲ ಪೂರ್ಣಚಂದ್ರ ತೇಜಸ್ವಿ ಸೇರಿದಂತೆ ಇತರರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...