ಹಾಸನ | ತಡೆಯಾಜ್ಞೆ‌ ಜಾಗದಲ್ಲಿ ವಿಮಾನ ನಿಲ್ದಾಣ ಕಾಮಗಾರಿಗೆ ಮುಂದಾದ ಅಧಿಕಾರಿಗಳು; ರೈತರ ಆಕ್ರೋಶ

Date:

ಹಾಸನದ ವಿಮಾನ ನಿಲ್ದಾಣ ಕಾಮಗಾರಿಗೆ ಸಂಬಂಧಿಸಿದಂತೆ ನ್ಯಾಯಾಲಯದ ತಡೆಯಾಜ್ಞೆಯಿರುವ ಜಾಗದಲ್ಲಿ ಕೆಐಎಡಿಬಿ ಅಧಿಕಾರಿಗಳು ಏಕಾಏಕಿ ತಡೆಗೋಡೆ ನಿರ್ಮಾಣಕ್ಕೆ ಮುಂದಾಗಿದ್ದಾರೆ ಎಂದು ಆರೋಪಿಸಿ ರೈತರು ಅಧಿಕಾರಿಗಳೊಂದಿಗೆ ಕೆಲ ಕಾಲ ಮಾತಿನ ಚಕಮಕಿ ನಡೆಸಿದ್ದರು. ಇದರಿಂದ ಸ್ಥಳದಲ್ಲಿ ಕೆಲಕಾಲ ಬಿಗುವಿನ ಪರಿಸ್ಥಿತಿ ಆವರಿಸಿತ್ತು.

ವಿಮಾನ ನಿಲ್ದಾಣ ಕಾಮಗಾರಿ ವ್ಯಾಪ್ತಿಯಲ್ಲಿ ಬರುವ ಬೂವನಹಳ್ಳಿಯ ಸರ್ವೆ ನಂಬರ್ 44/48,‌ 44/56ರಲ್ಲಿ ಭೂಮಾಲೀಕರು ಹಾಗೂ ಕೆಐಎಡಿಬಿ ಅಧಿಕಾರಿಗಳ ನಡುವೆ ಪರಿಹಾರದ ವಿಚಾರದಲ್ಲಿ ಗೊಂದಲವಿತ್ತು. ನಿಗಧಿತ ಸ್ಥಳದಲ್ಲಿ ಕಾಮಗಾರಿಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಆದರೂ ಕ್ಯಾರೆ ಎನ್ನದ ಅಧಿಕಾರಿಗಳು ಶನಿವಾರ ಬೆಳ್ಳಂ ಬೆಳಿಗ್ಗೆಯೇ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಮುಂದಾಗಿರುವುದರಿಂದ ರೈತರು ಕಿಡಿಕಾರಿದ್ದಾರೆ.

ಶಾಸಕ ಸ್ವರೂಪ್ ಪ್ರಕಾಶ್ ವಿಷಯ ತಿಳಿದು ಸ್ಥಳಕ್ಕಾಗಮಿಸಿದ್ದು, ರೈತರು ಹಾಗೂ ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಸಿದರು. ಈ ವೇಳೆ ಕಾಮಗಾರಿ ನಿಲ್ಲಿಸಲು ಸಾಧ್ಯವಿಲ್ಲವೆಂದ ವಿಶೇಷ ಭೂ ಸ್ವಾಧೀನಾಧಿಕಾರಿ ವೆಂಕಟರಾಜು ಮಾತಿಗೆ ಕೆರಳಿದ ರೈತರು ಸ್ಥಳದಲ್ಲಿ ಕೆಲಸ ಮಾಡುತ್ತಿದ್ದವರ ವಿರುದ್ಧ ಗಲಾಟೆ ಆರಂಭಿಸಿದರು. ಈ ವೇಳೆ ಎಚ್ಚೆತ್ತ ಅಧಿಕಾರಿಗಳು ಜನವರಿ 22ರ ಬುಧವಾರ ರೈತರ ಸಭೆ ನಡೆಸಿ ರೈತರೊಂದಿಗೆ ಮಾತುಕತೆ ನಡೆಸಿ, ಇರುವ ಸಮಸ್ಯೆ ಇತ್ಯರ್ಥಪಡಿಸಿ ನಂತರ ಕಾಮಗಾರಿ ಆರಂಭಿಸುವುದಾಗಿ ತಿಳಿಸಿದರು. ಇದರಿಂದಾಗಿ ಪರಿಸ್ಥಿತಿ ಸದ್ಯ ತಿಳಿಗೊಂಡಿದೆ. ಈ ವೇಳೆ ಶಾಸಕರು ಕೂಡ ಮಾಧ್ಯಮದೊಂದಿಗೆ ಮಾತನಾಡಿ ಕಾಮಗಾರಿ ಬಗ್ಗೆ ತಿಳಿಸಿದರು. ನಂತರ ರೈತರು ಕೂಡ ತಮ್ಮ ನಿರ್ಧಾರವನ್ನು ಮಾಧ್ಯಮದೊಂದಿಗೆ ಹಂಚಿಕಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈತರು ಕೋರ್ಟ್ ತಡೆಯಾಜ್ಞೆ ಪ್ರತಿಯನ್ನು ನೀಡಿದರೂ ಕೂಡ ಸೌಜನ್ಯಕ್ಕಾದರೂ ತಮ್ಮ ವಾಹನದಿಂದ ಇಳಿಯದೆ ವಾಹನದಲ್ಲಿಯೇ ಕುಳಿತು ಕಾಮಗಾರಿ ನಿಲ್ಲಿಸಬೇಡಿ ಮುಂದುವರೆಸಿ ಏನು ಮಾಡುತ್ತಾರೋ ಮಾಡಿಕೊಳ್ಳಲಿ ಎಂದು ಕೆಐಎಡಿಬಿ ವಿಶೇಷ ಭೂ ಸ್ವಾಧೀನಾಧಿಕಾರಿ ವೆಂಕಟರಾಜು ಉಡಾಫೆಯಿಂದ ಮಾತನಾಡಿದರು. ಉಡಾಫೆ ವರ್ತನೆ ರೈತರ ತೀವ್ರ ಆಕ್ರೋಶಕ್ಕೆ ಕಾರಣವಾಯಿತು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ವಸತಿ, ನಿವೇಶನ ರಹಿತರು ʼವಸತಿ, ನಿವೇಶನ ಪಡೆಯಲು ಜಾಗೃತಿ ಸಭೆʼ

100ಕ್ಕೂ ಹೆಚ್ಚು ಪೊಲೀಸರ ನಿಯೋಜನೆ: “ಕಾಮಗಾರಿ ಆರಂಭಿಸುವ ಮೊದಲೇ 100ಕ್ಕೂ ಅಧಿಕ ಮಂದಿ ಪೊಲೀಸರನ್ನು ಭದ್ರತೆಗಾಗಿ ಕೆಐಎಡಿಬಿ ಅಧಿಕಾರಿಗಳು ಕರೆಸಿಕೊಂಡಿದ್ದರು. ವಿಮಾನ ನಿಲ್ದಾಣ ಕಾಮಗಾರಿಯ ಸದುದ್ದೇಶಕ್ಕಾಗಿ ಜಾಗ ನೀಡಿದ್ದೇವೆ. ನಮಗೂ ವಿಮಾನ ನಿಲ್ದಾಣ ಕಾಮಗಾರಿ ಬೇಗ ಪೂರ್ಣಗೊಳ್ಳಬೇಕೆಂಬ ಆಶಯವಿದೆ. ಆದರೆ ಅಧಿಕಾರಿಗಳು ಪೊಲೀಸರನ್ನು ಮುಂದಿಟ್ಟುಕೊಂಡು ರೈತರಿಗೆ ಪರಿಹಾರ ನೀಡದೆ ಬೆದರಿಸುವ ತಂತ್ರ ಅನುಸರಿಸುತ್ತಿದ್ದಾರೆ. ಇದು ರೈತ ಸಮೂಹದ ಮೇಲೆ ಸರ್ಕಾರಗಳು, ಜನಪ್ರತಿನಿಧಿಗಳು ಇಟ್ಟಿರುವ ಗೌರವಕ್ಕೆ ಹಿಡಿದ ಕೈಗನ್ನಡಿಯಾಗಿದೆ” ಎಂದು ರೈತರು ಆಕ್ರೋಶ ಹೊರಹಾಕಿದರು.

ಕಣ್ಮುಚ್ಚಿ ಕುಳಿತ ಕೆಪಿಟಿಸಿಎಲ್ ಅಧಿಕಾರಿಗಳು: ವಿಮಾನ ನಿಲ್ದಾಣ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ತಡೆಗೋಡೆ ನಿರ್ಮಾಣಕ್ಕಾಗಿ 220 ಕೆವಿ ವಿದ್ಯುತ್ ಮಾರ್ಗದ ಅಡಿಯಲ್ಲಿ ಕೆಐಎಡಿಬಿ ಅಧಿಕಾರಿಗಳು ಬೃಹತ್ ಯಂತ್ರಗಳನ್ನು ಬಳಸಿ ಕಾಮಗಾರಿ ನಡೆಸುತ್ತಿದ್ದರೂ ಕೂಡ ನಮಗೂ ಅದಕ್ಕೂ ಸಂಬಂಧವಿಲ್ಲ ಎಂಬಂತೆ ಕೆಪಿಟಿಸಿಎಲ್ ಅಧಿಕಾರಿಗಳು ವರ್ತಿಸಿದ್ದು, ಅವರ ಕಾರ್ಯದಕ್ಷತೆಯನ್ನು ಸಾರ್ವಜನಿಕರು ಪ್ರಶ್ನಿಸುವಂತೆ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...