ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಬೆಳಗೋಡು ಹೋಬಳಿಯ ಮೂಗಲಿ ಗ್ರಾಮದಲ್ಲಿ ಮೂರು ದಿನಗಳ ಹಿಂದೆ ಮಹಿಳೆಯನ್ನು ಹತ್ಯೆಮಾಡಿದ ಕಾಡಾನೆ ಸೆರೆ ಹಿಡಿಯಲು ಅರಣ್ಯ ಇಲಾಖೆ ಶುಕ್ರವಾರ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.
ಕಾರ್ಮಿಕ ಮಹಿಳೆ ಶೋಭಾ ಮೇಲೆ ದಾಳಿ ನಡೆಸಿ, ಸಾವಿಗೆ ಕಾರಣವಾದ ಕಾಡಾನೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಸಾರ್ವಜನಿಕ ಆಕ್ರೋಶದ ಹಿನ್ನೆಲೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಘಟನೆ ನಡೆದ ಬಳಿಕ ಸ್ಥಳೀಯ ರಲ್ಲಿ ಭೀತಿ ಹಾಗೂ ಆಕ್ರೋಶ ಹೆಚ್ಚಾಗಿದ್ದು, ಗ್ರಾಮಸ್ಥರು ಕಾಡಾನೆ ದಾಳಿ ತಡೆಯಲು ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ಈ ಕಾರ್ಯಾಚರಣೆಗೆ ಮೈಸೂರು ಜಿಲ್ಲೆಯ ದುಬಾರೆ ಆನೆ ಶಿಬಿರದಿಂದ ಐದು ತರಬೇತಿ ಪಡೆದ ಸಾಕಾನೆಗಳನ್ನು ಬೈರಾಪುರಕ್ಕೆ ಕರೆತರಲಾಗಿದೆ. ಸುಗ್ರೀವ, ಧನಂಜಯ, ಲಕ್ಷಣ, ಅಯ್ಯಪ್ಪ ಹಾಗೂ ಹರ್ಷ ಎಂಬ ಸಾಕಾನೆಗಳು ಕಾರ್ಯಾಚರಣೆಯಲ್ಲಿ ಭಾಗವಹಿ ಸಲಿದ್ದು, ಅನುಭವೀ ಮಾವುತರ ಸಹಕಾರವೂ ಇದೆ. ಕಾಡಾನೆ ಬಿಕ್ಕೋಡು ಭಾಗದಲ್ಲಿ ಸಂಚರಿಸುತ್ತಿರುವಮಾಹಿತಿ ಲಭ್ಯವಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಇಟಿಎಫ್ (ಎಲಿಫೆಂಟ್ ಟಾಸ್ಕ್ ಪೋರ್ಸ್) ತಂಡಗಳು ಕಾಡಾನೆ ಚಲನ ವಲನವನ್ನು ನಿಖರವಾಗಿ ಟ್ರ್ಯಾಕ್ ಮಾಡುತ್ತಿವೆ. ಪ್ರೋನ್ಗಳು, ಟ್ರ್ಯಾಕಿಂ ಗ್ ಸಾಧನಗಳು ಮತ್ತು ಸ್ಥಳೀಯರ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಇದನ್ನೂ ಓದಿದ್ದೀರಾ?ಹಾಸನ | ಶಿವಲಿಂಗೇಗೌಡ ಹೇಳಿಕೆಗೆ ಮಾಜಿ ಸಚಿವ ಎಚ್.ಡಿ. ರೇವಣ್ಣ ತಿರುಗೇಟು
ಜನರ ಸುರಕ್ಷತೆಗೆ ಮೊದಲ ಆದ್ಯತೆ ನೀಡಲಾಗಿದ್ದು, ಕಾರ್ಯಾಚರಣೆ ನಡೆಯುವ ಪ್ರದೇ ಶದಲ್ಲಿ ಸಾರ್ವಜನಿಕರ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಕಾಡಾನೆಯನ್ನು ಸುರಕ್ಷಿತವಾಗಿ ಸೆರೆ ಹಿಡಿದು, ಅರಣ್ಯ ಪ್ರದೇಶಕ್ಕೆ ಸ್ಥಳಾಂತರಿಸುವ ಗುರಿಯೊಂದಿಗೆ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಈ ಕಾರ್ಯಾಚರಣೆ ಯಶಸ್ವಿಯಾದರೆ, ಕಳೆದ ಕೆಲವು ದಿನಗಳಿಂದ ಭಯದ ವಾತಾವರಣದಲ್ಲಿರುವ ಜನರಿಗೆ ನಿಟ್ಟುಸಿರುವ ಬಿಟ್ಟಂತ್ತಾಗುತ್ತದೆ.





