ಹಾಸನ | ಫೆಬ್ರವರಿಯೊಳಗೆ ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ನೀಡದಿದ್ದರೆ ಮತ್ತೆ ಹೋರಾಟ; ಜಯಕರ್ನಾಟಕ ಎಚ್ಚರಿಕೆ

Date:

ಫೆಬ್ರವರಿಯೊಳಗೆ ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ನೀಡದಿದ್ದರೆ ಮತ್ತೆ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದ ಜಯಕರ್ನಾಟಕ ಸಂಘಟನೆ ಐದನೇ ದಿನದ ಹೋರಾಟ ಕೊನೆಗೊಳಿಸಿದೆ.

ಹಾಸನ ನಗರದ ಹೇಮಾವತಿ ಪ್ರತಿಮೆ ಬಳಿ ಕಾಡಾನೆಯಿಂದ ಶಾಶ್ವತ ಪರಿಹಾರಕ್ಕಾಗಿ ಜಯಕರ್ನಾಟಕ ಸಂಘಟನೆ ಐದು ದಿನದಿಂದ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನಾ ಸ್ಥಳಕ್ಕೆ ಮಾಜಿ ಸಚಿವ ಹೆಚ್ ಕೆ ಕುಮಾರಸ್ವಾಮಿ ಆಗಮಿಸಿ ಕೆಲ ಸಮಯ ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಕಾಡಾನೆ ವಿಚಾರದಲ್ಲಿ ಹೋರಾಟ ಮಾಡುತ್ತಿರುವ ಜಯಕರ್ನಾಟಕಕ್ಕೆ ನಮ್ಮ ಬೆಂಬಲ ಇದ್ದೆ ಇರುತ್ತದೆ ಎಂದು ಭರವಸೆ ನೀಡಿದರು. ಕಾಡಾನೆ ವಿಚಾರದಲ್ಲಿ ಹೋರಾಟ ಮಾಡುತ್ತಿರುವ ಜಯಕರ್ನಾಟಕಕ್ಕೆ ನಮ್ಮ ಬೆಂಬಲ ಇದ್ದೇ ಇರುತ್ತದೆ ಎಂದು ಭರವಸೆ ನೀಡಿದ ಬಳಿಕ ಸಂಘಟನಾಕಾರರು ಪ್ರತಿಭಟನೆ ಹಿಂಪಡೆದಿದ್ದಾರೆ.

“ಕಾಡಾನೆ ವಿಚಾರವಾಗಿ ಸರ್ಕಾರಗಳು ಹಾಗೂ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದು, ಆಲೂರು, ಬೇಲೂರು ಭಾಗಗಳಲ್ಲಿ ಆನೆಗಳ ಹಾವಳಿ ಅಧಿಕವಾಗಿದೆ. ಸಕಲೇಶಪುರದಲ್ಲಿ ಸ್ವಲ್ಪ ಕಡಿಮೆಯಿದೆ. ರೈತರ ಬೆಳೆಗಳು ಸಾಕಷ್ಟು ನಷ್ಟವಾಗಿದೆ. ಕಳೆದ 10 ವರ್ಷಗಳ ಹಿಂದೆ ಕಾಂಗ್ರೆಸ್ ಸರ್ಕಾರದ ವೇಳೆ ಎ ಮಂಜು ಸಚಿವರಾಗಿದ್ದಾಗ ಬೇಲೂರು ತಾಲೂಕಿನಲ್ಲಿ ಒಂದು ಕಾಡಾನೆ ಕಾರಿಡರ್ ಮಾಡಿ ಒಂದು ಶಾಶ್ವತ ಪರಿಹಾರ ಮಾಡಬೇಕು, ತಾತ್ಕಲಿಕ ಪರಿಹಾರದಿಂದ ಯಾವುದೇ ಪ್ರಯೋಜನ ಆಗುವುದಿಲ್ಲವೆಂದು ಮನಗಂಡು 17 ಸಾವಿರ ಎಕರೆ ಅರಣ್ಯ ಭೂಮಿ ಮತ್ತು ರೆವಿನ್ಯೂ ಭೂಮಿಯನ್ನು ಆನೆಕಾರಿಡರ್ ಮಾಡುವ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗಿತ್ತು” ಎಂದು ಮಾಜಿ ಸಚಿವ ಎಚ್‌ ಕೆ ಕುಮಾರಸ್ವಾಮಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆನೆ ಕಾರಿಡಾರ್‌ಗೆ ರೈತರಿಂದ ಪಡೆದಿರುವ ಭೂಮಿಗೆ ಭೂ ಪರಿಹಾರ ಕೊಡಬೇಕೆಂದು ಎಷ್ಟೇ ಒತ್ತಡ ಹಾಕಿದರೂ ಕೂಡಾ ಈವರೆಗೆ ಜಾರಿಗೆ ಬಂದಿಲ್ಲ. ತಾತ್ಕಲಿಕ ಕ್ರಮ ಆಗುತ್ತಿದೆಯೇ ಹೊರತು ಮೂಲ ಉದ್ದೇಶ, ಮೂಲ ಕಾರಣ ಇಲಾಖೆಗೆ ಗೊತ್ತಾಗುತ್ತಿಲ್ಲ” ಎಂದು ದೂರಿದರು.

“ಯಾವ ಕಾರಣಕ್ಕಾಗಿ ಕಾಡಾನೆಗಳು ನಾಡಿಗೆ ಬರುತ್ತಿವೆಂದರೆ ಕಾಡಿನಲ್ಲಿ ಆಹಾರವಿಲ್ಲ, ಕಾಡು ನಾಡಾಗಿ ಪರಿವರ್ತನೆಯಾಗಿರುವುದರಿಂದ ಕಾಡಾನೆಗಳು ನಾಡಿನೊಳಗೆ ಲಗ್ಗೆಯಿಡುತ್ತಿವೆ. ಈಗಲಾದರೂ ಸರ್ಕಾರ ಎಚ್ಚೆತ್ತುಕೊಂಡು, ಸೌತ್ ಆಪ್ರಿಕಾದ ನ್ಯಾಷನಲ್ ಪಾರ್ಕ್‌ನಲ್ಲಿರುವ ಆನೆಗಳ ಪಾರ್ಕ್‌ನಂತಹ ನಿರ್ಮಾಣಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮುಂದಾಗಬೇಕು. ನಾಲ್ಕು ತಾಲೂಕುಗಳಲ್ಲಿ ಉಂಟಾಗಿರುವ ಬೆಳೆಹಾನಿ ಬಗ್ಗೆ ಗಮನಹರಿಸಬೇಕು. ಆನೆ ದಾಳಿಯಾದ ಕುಟುಂಬಕ್ಕೆ ಒಂದು ಶಾಶ್ವತ ಉದ್ಯೋಗ ನೀಡಿ, ಬೆಳೆಹಾನಿಗೆ ವೈಜ್ಞಾನಿಕವಾಗಿ ಪರಿಹಾರ ತುಂಬಿಕೊಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಹಾಸನ | ಅನುಭವ ಮಂಟಪದಲ್ಲಿ ಅಸ್ಪೃಶ್ಯರಿಗೆ ಪಾಠ ಪ್ರವಚನ ಕಲಿಸುತ್ತಿದ್ದರು: ಲೋಕೇಶ್ ಚಂದ್ರ

ಪ್ರತಿಭಟನೆಯಲ್ಲಿ ಜಯಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ಎಂಕೆಆರ್ ಸೋಮೇಶ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಮಾಜಿ ಗೌರವಾಧ್ಯಕ್ಷ ರವಿನಾಕಲಗೂಡು, ರೈತ ಸಂಘದ ಮುಖಂಡ ಬಳ್ಳೂರು ಸ್ವಾಮಿಗೌಡ, ಜೆಡಿಎಸ್ ತಾಲೂಕು ಅಧ್ಯಕ್ಷ ಎಸ್ ದ್ಯಾವೇಗೌಡ, ಜಯಕರ್ನಾಟಕ ಬೇಲೂರು ತಾಲೂಕು ಅಧ್ಯಕ್ಷ ಎಸ್ ಎಂ ರಾಜು, ಆಲೂರು ತಾಲೂಕು ಅಧ್ಯಕ್ಷ ಸಂದೇಶ್, ಕಾಯಾಧ್ಯಕ್ಷ ಲಕ್ಷ್ಮಣ್, ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...