ಹಾಸನ | ಹಂತನಮನೆ ಗ್ರಾಮದಲ್ಲಿ ಅಸ್ಪೃಶ್ಯತೆ ಆಚರಣೆ; ಪ್ರಕರಣ ದಾಖಲಿಸಲು ಪೊಲೀಸರ ಮೀನಮೇಷ

Date:

ಹಾಸನ ಜಿಲ್ಲೆ ಆಲೂರು ತಾಲೂಕಿನ ಹಂತನಮನೆ ಗ್ರಾಮದಲ್ಲಿ ಅಸ್ಪೃಶ್ಯತೆ ಆಚರಣೆ ನಡೆದ ಹಿನ್ನೆಲೆಯಲ್ಲಿ ಸಕಲೇಶಪುರ ಉಪ ವಿಭಾಗಾಧಿಕಾರಿ ಡಾ ಶೃತಿ ಅವರು ಗುರುವಾರ ಹಂತನಮನೆ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮಾಹಿತಿ ಪಡೆದಿದ್ದಾರೆ.

“ಈಗಾಗಲೇ ಘಟನೆ ಬಗ್ಗೆ ಪೂರ್ಣ ಮಾಹಿತಿ ಪಡೆಯಲಾಗಿದೆ. ಘಟನೆ ಸೂಕ್ಷ್ಮವಾಗಿದ್ದು, ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ. ಘಟನೆಗೆ ಕಾರಣರಾದವರನ್ನು ಕರೆಸಿ ಎಚ್ಚರಿಕೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಗ್ರಾಮಸ್ಥರು ಈ ರೀತಿ ನಡೆದುಕೊಂಡರೆ ಜಾತಿನಿಂದನೆ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಘಟನೆ ಹಿನ್ನೆಲೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಫೆಬ್ರವರಿ 27ರಂದು ಬೆಳಿಗ್ಗೆ 11ರ ವೇಳೆ ದಲಿತ ಮಹಿಳೆಯರು ಕೆರೆಯಲ್ಲಿ ಬಟ್ಟೆ ತೊಳೆಯುತ್ತಿದ್ದರು. ಅದೇ ಗ್ರಾಮದ ಮಣಿಯಮ್ಮ, ಹೊನ್ನಮ್ಮ ರಾಧಮ್ಮ, ಗೌರಮ್ಮ, ಸುನಂದ ಹಾಗೂ ಕಮಲಮ್ಮ ಎಂಬುವರು ನೀವು ಕೆರೆಯಲ್ಲಿ ಬಟ್ಟೆ ತೊಳೆಯುವಂತಿಲ್ಲ. ಈ ಕೆರೆ ನಮಗೇ ಹಿಂದಿನಿಂದಲೂ ಮೀಸಲಾಗಿದೆ” ಎಂದು ಸೋಪಾನ ಕಟ್ಟೆಯ ಮೇಲಿದ್ದ ಬಟ್ಟೆ ತೆಗೆದು ಎಸೆದಿದ್ದಾರೆ.

ಇದನ್ನು ಪ್ರಶ್ನಿಸಿದ್ದಕ್ಕೆ ಜಾತಿನಿಂದನೆ ಮಾಡಿ ಅವಮಾನ ಮಾಡಿದ್ದಲ್ಲದೆ, ಹಲ್ಲೆ ನಡೆಸಲು ಮುಂದಾಗಿ ಕೈ ಕೈ ಮಿಲಾಯಿಸುವ ಹಂತಕ್ಕೂ ಹೋಗಿದ್ದಾರೆ. ನಂತರ ದಲಿತ ಮಹಿಳೆಯರು ಸ್ಥಳೀಯ ಠಾಣೆಗೆ ದೂರು ನೀಡಿದ್ದರು.

ಸಿಪಿಐ ಗಂಗಾಧರ್ ಮತ್ತು ಪಿಎಸ್‌ಐ ಜನಬಾಯಿ ಕಡಪಟ್ಟಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನಿಸಿದ್ದಾರೆ. ಅದರೂ ಸವರ್ಣೀಯ ಮಹಿಳೆಯರು ಈ ಕೆರೆಯಲ್ಲಿ ಹಿಂದಿನಿಂದಲೂ ದಲಿತರಿಗೆ ನೀರು ಬಳಸಲು ಅವಕಾಶ ನೀಡುತ್ತಿಲ್ಲ. ಈಗಲೂ ನೀಡುವುದಿಲ್ಲ ಎಂದು ಪಟ್ಟು ಹಿಡಿದಿದ್ದರು.

“ಗ್ರಾಮದಲ್ಲೂ ನಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯ ಆದರೆ ಸೇದುವ ಬಾವಿಯಲ್ಲಿ ನೀರು ತರಲು ದಲಿತರು ಹೋದಾಗ ಸವರ್ಣೀಯರ ಬಿಂದಿಗೆಯಿಂದಲೇ ನೀರು ಸುರಿಸಿಕೊಳ್ಳಬೇಕು. ನೇರವಾಗಿ ದಲಿತರೇ ಬಾವಿ ಬಳಸುವಂತಿಲ್ಲ. ಈ ಮೂಲಕ ಅಸ್ಪೃಶ್ಯತೆ ಆಚರಣೆ ಇಂದಿಗೂ ಜೀವಂತವಾಗಿರುವುದು ದುರ್ದೈವ. ಆದರೆ ಈ ಬಗ್ಗೆ ಇನ್ನೂ ದೂರು ದಾಖಲಾಗಿಲ್ಲ” ಎಂದು ಸ್ಥಳೀಯ ಸಾರ್ವಜನಿಕರು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೈಸೂರು | ನಾಲ್ಕು ವರ್ಷದ ಪದವಿ ಕೋರ್ಸ್‌ನ ನಿರ್ಧಾರ ಘೋಷಣೆ ವಿಳಂಬ; ಎನ್‌ಇಪಿ ಹಿಂಪಡೆಗೆ ಆಗ್ರಹ

ಮಾನವ ಬಂಧುತ್ವ ವೇದಿಕೆ ತಾಲೂಕು ಅಧ್ಯಕ್ಷ ಪ್ರತಾಪ್ ಕುಮಾರ್ ಮಾತನಾಡಿ, “ಇಂತಹ ಹತ್ತಾರು ಪ್ರಕರಣ ಪೊಲೀಸ್ ಠಾಣೆಗೆ ಬರುತ್ತವೆ. ಆದರೆ ಅಧಿಕಾರಿಗಳು ಹಣ ಮಾಡುವ ಉದ್ದೇಶದಿಂದ ಮಧ್ಯವರ್ತಿಗಳ ಮೂಲಕ ರಾಜಿ ಸಂಧಾನ ಮಾಡಿಸಿ ಹಣ ಪೀಕುತ್ತಿದ್ದಾರೆ. ಆದ್ದರಿಂದಲೇ ಇಂತಹ ಪ್ರಕರಣಗಳು ತಾಲೂಕಿನಲ್ಲಿ ಹೆಚ್ಚುತ್ತಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಸ್ಪೃಶ್ಯತೆ ಆಚರಣೆ ಅಡಿ ಕೇಸು ದಾಖಲಿಸಲು ಪೊಲೀಸರು ಮೀನಮೇಷ ಎಣಿಸುತ್ತಿದ್ದಾರೆ. ಇದನ್ನೂ ಮಧ್ಯವರ್ತಿಗಳ ಸಮ್ಮುಖದಲ್ಲಿ ರಾಜಿ ಮಾಡಿಸಿದರೆ ಪೊಲೀಸ್ ಠಾಣೆ ಏಕೆ ಬೇಕೆಂಬ ಪ್ರಶ್ನೆ ಸಾರ್ವಜನರಿಕರಲ್ಲಿ ಮೂಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...