ಹಾಸನ | ಕೆ.ಎಸ್.ಆರ್.ಟಿ.ಸಿ ದಲಿತ ನೌಕರ; ಬರ್ಬರ ಹತ್ಯೆ ಖಂಡಿಸಿ ಪ್ರತಿಭಟನೆ 

Date:

ಹಾಸನ ಜಿಲ್ಲೆಯ ಆಲೂರು ತಾಲ್ಲೂಕು ರಾಜನಹಳ್ಳಿಯಲ್ಲಿ ಪ. ಜಾತಿಗೆ ಸೇರಿದ ವ್ಯಕ್ತಿಯನ್ನು ಬರ್ಬರ ಹತ್ಯೆ ಖಂಡಿಸಿ, ಹಾಗೂ ಪ್ರಕರಣವನ್ನು ತ್ವರಿತವಾಗಿ ತನಿಖೆ ನಡೆಸಿ, ಹತ್ಯೆಗೈದವರನ್ನು ಶಿಕ್ಷೆಗೆ ಗುರಿಪಡಿಸಿ, ವ್ಯಕ್ತಿಯ ಕುಟುಂಬಕ್ಕೆ ನ್ಯಾಯಕ್ಕಾಗಿ ಸಿಐಟಿಯು,ಡಿಎಚ್ ಎಸ್, ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿಯಿಂದ ಜಿಲ್ಲಾಧಿಕಾರಿ ಕಛೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಬರ್ಬರವಾಗಿ ಹತ್ಯೆಯಾದ ವ್ಯಕ್ತಿ ವೀರಪ್ಪ (58), ಫೆ. 17ರಂದು ಕೆ.ಎಸ್.ಆರ್.ಟಿ.ಸಿ. ಚಾಲಕರಾಗಿದ್ದರು. ಆರ್.ಡಿ. ವೀರಪ್ಪ ರವರನ್ನು ಅವರ ಜಮೀನಿನಲ್ಲೇ ಹತ್ಯೆಗೈದು ಅತ್ಯಂತ ಬರ್ಬರವಾಗಿ ಪೆಟ್ರೋಲ್ ಹಾಕಿ ಸುಟ್ಟುಹಾಕಿರುವ ಪ್ರಕರಣ ಇಡೀ ಜಿಲ್ಲೆಯನ್ನೆ ಬೆಚ್ಚಿಬೀಳಿಸಿರುವ ಹಾಗೂ ಕಂಡು ಕೇಳಿರದ ಅತ್ಯಂತ ಅಮಾನುಷ ಘಟನೆಯಾಗಿದೆ. ಇಂತಹ ಬರ್ಬರ ಘಟನೆ ನಡೆದು 15 ದಿನಗಳು ಕಳೆಯುತ್ತಾ ಬಂದರೂ ಈ ಪ್ರಕರಣದ ತನಿಖೆ ಅತ್ಯಂತ ನಿಧಾನಗತಿಯಲ್ಲಿದ್ದು, ಹತ್ಯೆಗೈದಿರುವವರ ಮೇಲೆ ಕಾನೂನು ಕ್ರಮ ಕೈಗೊಳ್ಳದಿರುವುದು ಪೊಲೀಸ್ ತನಿಖೆಯ ಮೇಲೆಯೇ ಅ‌ನುಮಾನಗಳನ್ನು ಮೂಡಿಸುತ್ತಿದೆ. ಜೊತೆಗೆ ಇದು ಕೃತ್ಯ ನಡೆಸಿದವರು ಕಾನೂನನ್ನೂ ಕಣ್ಮರೆಸಿ ತಪ್ಪಿಸಿಕೊಳ್ಳಲು ಅವಕಾಶ ನೀಡಿದಂತಾಗುತ್ತದೆ.

ಈ ಹತ್ಯೆ ಪ್ರಕರಣ ಮೇಲ್ನೊಟಕ್ಕೆ ಆಸ್ತಿ ವಿವಾದಕ್ಕೆ ದಾಯಾದಿಗಳು ಹತ್ಯೆ ಮಾಡಿರಬಹುದೆಂದು ಕಂಡರೂ ವೀರಪ್ಪರವರನ್ನು ಈ ರೀತಿಯಾಗಿ ಅತ್ಯಂತ ಬರ್ಬರವಾಗಿ ಹತ್ಯೆ ಮಾಡಿರುವುದನ್ನು ನೋಡಿದರೆ ಇದೊಂದು ವ್ಯವಸ್ಥಿತ ಪಿತೂರಿಯನ್ನು ರೂಪಿಸಿ ಸಂಚುಮಾಡಿ ಹತ್ಯೆ ಮಾಡಿರುವಂತಿದೆ. ವೀರಪ್ಪ ಅವರ ಹತ್ಯೆಯ ಹಿಂದೆ ಮೇಲ್ಜಾತಿಗೆ ಸೇರಿದ ಹಾಗೂ ಆರ್ಥಿಕ ಮತ್ತು ರಾಜಕೀಯ ಪ್ರಭಾವ ಹೊಂದಿರುವ ಕಾಣದ ಕೈಗಳು ಸೇರಿ ಅತ್ಯಂತ ವ್ಯವಸ್ಥಿಯವಾಗಿ ಸಂಚು ನಡೆಸಿ ಕೃತ್ಯ ನಡೆಸಿರಬಹುದೆಂಬಂತೆ ಅನುಮಾನ ನಮಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದ್ದರಿಂದ ಪೊಲೀಸ್ ಇಲಾಖೆಯು ಸಮಗ್ರವಾಗಿ ಎಲ್ಲಾ ಆಯಾಮಗಳಲ್ಲೂ ಅತ್ಯಂತ ತ್ವರಿತಗತಿಯಲ್ಲಿ ತನಿಖೆ ನಡೆಸಬೇಕು. ಮತ್ತು ಸರ್ಕಾರವು ಈ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೂ ಶಿಫಾರಸ್ಸು ಮಾಡುವ ಮೂಲಕ ಹತ್ಯೆಗೈದವರನ್ನು ಶಿಕ್ಷೆಗೆ ಗುರಿಪಡಿಸಬೇಕೆಂದು ಈ ಮೂಲಕ ಆಗ್ರಹ ಪಡಿಸುತ್ತಾ ವೀರಪ್ಪ ಅವರ ಸಾವು ಮತ್ತು ಅವರ ಕುಟುಂಬಕ್ಕೆ ನ್ಯಾಯ‌ ದೊರಕಿಸಬೇಕೆಂದು ಒತ್ತಾಯಿಸಿ‌ ಮನವಿ ಮಾಡುತ್ತೇವೆ. ತನಿಖೆಯನ್ನು ತೀವ್ರಗೊಳಿಸಿ ತಪ್ಪಿತಸ್ಥರನ್ನು ಕೂಡಲೇ ಬಂದಿಸದಿದ್ದಲ್ಲಿ ವೀರಪ್ಪನವರ ಸಾವಿಗೆ ನ್ಯಾಯ ಸಿಗುವವರೆಗೂ ತೀವ್ರವಾದ ಬೃಹತ್ ಸ್ವರೂಪದ ಪ್ರತಿಭಟನೆ ನಡೆಸಲಾಗುವುದು ಎಂದು ಈ ಮೂಲಕ ಸಿಐಟಿಯು, ಡಿಎಚ್ ಎಸ್, ಮಾದಿಗ ದಂಡೂರ ಮೀಸಲಾತಿ ಹೋರಾಟ ಸಮಿತಿಯಿಂದ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿದ್ದೀರಾ?ಹಾಸನ | ಪೆಟ್ರೋಲ್ ಸುರಿದು ಸಾರಿಗೆ ನೌಕರನ ಬರ್ಬರ ಹತ್ಯೆ

ಈ ವೇಳೆ ಧರ್ಮೇಶ್ ಸಿಐಟಿಯು, ಟಿ.ಆರ್ ವಿಜಯ್ ಕುಮಾರ್, ಪೃಥ್ವಿ ಎಂ.ಜಿ, ರಾಜಶೇಖರ್ ಹುಲಿಕಲ್, ನಾರಾಯಣದಾಸ್, ಎಚ್ ಆರ್ ನವೀನ್ ಕುಮಾರ್, ರಾಜು ಗೊರೂರು, ಕೃಷ್ಣದಾಸ್, ಅಂಬುಗ ಮಲ್ಲೇಶ್ ಹಾಗೂ ದಲಿತ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...