ಹಾಸನ | ಬಿಜೆಪಿ ಸಂಸದನ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Date:

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಕುಸ್ತಿ ಫೆಡರೇಷನ್ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಬಂಧನಕ್ಕೆ ಆಗ್ರಹಿಸಿ ಹಾಸನದಲ್ಲಿ ಸಿಐಟಿಯು, ಎಸ್‌ಎಫ್‌ಐ, ಡಿವೈಎಫ್‌ಐ, ಕೆಪಿಆರ್‌ಎಸ್‌, ಡಿಎಚ್‌ಒ ಹಾಗೂ ದಲಿತ, ಜನಪರ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ.

ಒಲಂಪಿಕ್ ಪದಕ ವಿಜೇತರು, ವಿಶ್ವ ಚಾಂಪಿಯನ್‌ಗಳು ಸೇರಿದಂತೆ ದೇಶದ ಹೆಮ್ಮೆಯ ಕುಸ್ತಿಪಟುಗಳು 2023 ಏಪ್ರಿಲ್ 24 ರಿಂದ ನವದೆಹಲಿಯ ಜಂತರ್ ಮಂಥರ್ ನಲ್ಲಿ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೂ, ಅವರ ಅಳಲನ್ನು ಕೇಳದ ಪ್ರಧಾನಿ ಮೋದಿ ಮತ್ತು ಕೇಂದ್ರ ಸರ್ಕಾರ ಆರೋಪಿ ಸಂಸದನ ರಕ್ಷಣೆಗೆ ನಿಂತಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ಸಾಹಿತಿ ರೂಪ ಹಾಸನ, “ಅಪ್ರಾಪ್ತ ಹೆಣ್ಣು ಮಕ್ಕಳು ಸೇರಿದಂತೆ ಪ್ರಖ್ಯಾತ ಮಹಿಳಾ ಕುಸ್ತಿಪಟುಗಳಿಗೆ ಕುಸ್ತಿ ಫೆಡರೇಶನ್ ಮುಖ್ಯಸ್ಥ ಹಾಗೂ ಇನ್ನಿತರ ಸಿಬ್ಬಂದಿಗಳು ಲೈಂಗಿಕ ಕಿರುಕುಳ ಹಾಗೂ ಹಿಂಸೆ ನೀಡಿರುವುದು ಅತ್ಯಂತ ಅಘಾತಕಾರಿ ಮತ್ತು ದೇಶವೇ ತಲೆತಗ್ಗಿಸುವಂತಹ ಕೃತ್ಯ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಭೇಟಿ ಬಚಾವೋ, ಭೇಟಿ ಪಡಾವೋ’ ಎಂದು ಪ್ರಚಾರ ಮಾಡುವ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಆರೋಪಿ ಬಿಜೆಪಿ ಸಂಸದನನ್ನು ರಕ್ಷಿಸುತ್ತಿರುವುದು ನಾಚೀಕೆಗೇಡಿನ ಸಂಗತಿ. ದೂರಿನ ಆಧಾರದಲ್ಲಿ ಕಾನೂನು ಕ್ರಮ ಜರುಗಿಸಿ ನೊಂದ ಮಹಿಳಾ ಕ್ರೀಡಾಪಟುಗಳಿಗೆ ರಕ್ಷಣೆ ಒದಗಿಸಬೇಕಾಗಿದ್ದ ಸರ್ಕಾರ, ತನ್ನ ಪೊಲೀಸ್ ಪಡೆಗಳನ್ನು ಬಳಸಿ, ನ್ಯಾಯಕ್ಕಾಗಿ ಪ್ರತಿಭಟಿಸುತ್ತಿರುವ ಕ್ರೀಡಾಪಟುಗಳ ಮೇಲೆ ದಮನಕಾರಿ ಕ್ರಮಗಳನ್ನು ಅನುಸರಿಸುತ್ತಿದೆ. ಕಳೆದ ವಾರ ಪ್ರತಿಭಟನಾನಿರತರ ಮೇಲೆ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂದು ಕಿಡಿಕಾರಿದ್ದಾರೆ.

“ನೂತನ ಸಂಸತ್ ಕಟ್ಟಡದ ಒಳಗಡೆ ಆರೋಪಿ ಬಿಜೆಪಿ ಸಂಸದ ಆತಿಥ್ಯ ಪಡೆಯುತ್ತಿರುವಾಗಲೇ, ಪ್ರತಿಭಟನಾ ನಿರತ ಕುಸ್ತಿಪಟುಗಳ ಮೇಲೆ ಹೀನಾಯ ದೌರ್ಜನ್ಯ ನಡೆಸಲಾಗಿದೆ. ಪ್ರಜಾಪ್ರಭುತ್ವದ ಹೆಮ್ಮೆಯ ಸಂಸ್ಥೆಯಾದ ಸಂಸತ್ತಿನಲ್ಲಿ ಸಂವಿಧಾನದ ನೀತಿ-ನಡಾವಳಿಗೆ ವಿರುದ್ದವಾಗಿ, ಪುರುಷ ಅಹಂಕಾರವನ್ನು ಸಮರ್ಥಿಸುವ ಪುರೋಹಿತಶಾಹಿ ಯಜಮಾನಿಕೆಯನ್ನು ಸಂಕೇತಿಸುವ ಧಾರ್ಮಿಕ ಆಚರಣೆಗಳನ್ನು ನಡೆಸಲಾಗಿದೆ. ಇದು ನಮ್ಮ ಸಂವಿಧಾನ ಪರಂಪರೆಗೆ ಆಗಿರುವ ಗಂಭೀರ ಧಕ್ಕೆ” ಎಂದು ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಗ್ಯಾರಂಟಿ ಯೋಜನೆ ಹೇಗೆ ವಿರೋಧಿಸಬೇಕು ಎಂಬ ಗೊಂದಲದಲ್ಲಿ ಬಿಜೆಪಿ‌ ಇದೆ : ಕಾಂಗ್ರೆಸ್ ಟೀಕೆ

ಲೈಂಗಿಕ ಕಿರುಕುಳ ಹಾಗೂ ಹಿಂಸೆ ಕೊನೆಗಾಣಬೇಕು ಇದಕ್ಕಾಗಿ ದೇಶದ ಎಲ್ಲ ನಾಗರಿಕರು ಕುಸ್ತಿಪಟುಗಳ ಪ್ರತಿಭಟನೆಯನ್ನು ಬೆಂಬಲಿಸಬೇಕು. ಅಂತರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ಗೆದ್ದು ನಮ್ಮ ದೇಶಕ್ಕೆ ಕೀರ್ತಿ ತಂದವರಿಗೆ ಇಷ್ಟು ಕಿರುಕುಳ ನೀಡಲಾಗಿದೆ. ಇನ್ನು ಸಾಮಾನ್ಯ ಮಹಿಳೆಯರ ಹಾಗೂ ಹೆಣ್ಣು ಮಕ್ಕಳ ಸುರಕ್ಷತೆ ಕೇಳುವುದು ಹೇಗೆ? ದೇಶಕ್ಕೆ ಕೀರ್ತಿ ತಂದ ಕ್ರೀಡಾಪಟುಗಳ ಆತ್ಮಸ್ಥೈರ್ಯ ಕುಂದಿಸುವ ಕೆಲಸವನ್ನು ಬಿಜೆಪಿ ಸರ್ಕಾರ ನಿಲ್ಲಿಸಬೇಕು. ಆರೋಪಿಯನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಪ್ರತಿಭಟನೆಯಲ್ಲಿ ಪ್ರಧಾನ ಕಾರ್ಯದರ್ಶಿ ಪುಷ್ಪ, ಕೆಪಿಆರ್‌ಎಸ್‌ ಜಿಲ್ಲಾಧ್ಯಕ್ಷ ಎಚ್.ಆರ್ ನವೀನ್ ಕುಮಾರ್, ಹಿರಿಯ ದಲಿತ ಮುಖಂಡರಾದ ರಾಜಶೇಖರ, ಡಿವೈಎಫ್‌ಐ ಜಿಲ್ಲಾ ಕಾರ್ಯದರ್ಶಿ ಪೃಥ್ವಿ ಹಾಗೂ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...