ಹಾಸನ | ಪ್ರಜ್ವಲ್ ರೇವಣ್ಣನನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ

Date:

ಹಾಸನ ಸಂಸದ ಪ್ರಜ್ವಲ್ ರೇವಣ್ಣನನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿ ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯ ಸ್ಲಂ ಮಹಿಳಾ ಘಟಕ ಪ್ರತಿಭಟನೆ ನಡೆಸಿದೆ.

ಪ್ರತಿಭಟನೆ ನೇತೃತ್ವವಹಿಸಿ ಮಹಿಳಾ ಘಟಕದ ಸಂಚಾಲಕರಾದ ಅನುಪಮ ಮಾತನಾಡಿ, ಪ್ರಜ್ವಲ್ ಕರ್ಮಕಾಂಡ ಮೊದಲೇ ಗೊತ್ತಿದ್ದರು ಹಾಸನದಿಂದ ಲೋಕಸಭೆ ಸ್ಪರ್ಧಿಸಲು ಅವಕಾಶ ನೀಡಿದ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಹೆಣ್ಣು ಮಕ್ಕಳಿಗೆ ದ್ರೋಹ ಬಗೆದಿವೆ, ತಾಳಿ ಬಗ್ಗೆ ಮಾತನಾಡುವ ಪ್ರಧಾನಿಗಳು ಈ ಪ್ರಕರಣದ ಬಗ್ಗೆ ಮೌನವಹಿಸಿರುವುದು ಏಕೆ? ಮಂಗಳಸೂತ್ರ ಬರೀ ಮಾತಿಗಾಗಿ ಅಥವಾ ರಾಜಕಾರಣಕ್ಕೆ ಬಳಸಿಕೊಳ್ಳುವುದು ಎಷ್ಟು ಸರಿ. ತಕ್ಷಣ ಚುನಾವಣಾ ಆಯೋಗ ಈ ಪ್ರಕರಣದ ಬಗ್ಗೆ ಮಧ್ಯೆ ಪ್ರವೇಶ ಮಾಡಬೇಕೆಂದು ಆಗ್ರಹಿಸಿದರು.

ಬೆಳಗುಂಬ ರಸ್ತೆಯ ಸ್ಲಂ ಭವನದಲ್ಲಿ ಮಾತನಾಡಿದ ಪ್ರತಿಭಟನಾಕಾರರು, ಪ್ರಜ್ವಲ್ ಪೆನ್‌ಡ್ರೖವ್  ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದ್ದು ಕೂಡಲೇ ಅವರನ್ನು ಬಂಧಿಸಿ ದೌರ್ಜನ್ಯಕ್ಕೆ ಒಳಗಾದ ಹಾಗೂ ಸಾವಿರಾರು ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯನಡೆಸಿರುವ ಆರೋಪದ ಹಿನ್ನಲೆಯಲ್ಲಿ ಮಹಿಳಾ ಆಯೋಗದ ಶಿಫಾರಸಿನ ಮೇಲೆ ರಾಜ್ಯ ಸರ್ಕಾರ ಕ್ರಮವಹಿಸಿರುವುದನ್ನು ಸಂಘಟನೆ ಸ್ವಾಗತಿಸುತ್ತದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ಆರೋಪಿಗೆ ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಪ್ರಮುಖ ರಾಜಕಾರಣಿಗಳ ಬೆಂಬಲವಿರುವುದರಿಂದ ಈಗಾಗಲೇ ವಿದೇಶಕ್ಕೆ ಪಲಾಯನಗೊಂಡಿದ್ದು ತಕ್ಷಣವೇ ಎಸ್‌ಐಟಿ ಬಂಧಿಸಿ ನೊಂದ ಮಹಿಳೆಯರಿಗೆ ನ್ಯಾಯ ಒದಗಿಸಿಕೊಡಬೇಕೆಂದು ಸ್ಲಂ ಮಹಿಳಾ ಸಮಿತಿ ಆಗ್ರಹಿಸಿದೆ.

ಪ್ರತಿಭಟನೆಯಲ್ಲಿ ಸ್ಲಂ ಸಮಿತಿಯ ಕಾರ್ಯದರ್ಶಿ ಅರುಣ್, ತಿರುಮಲಯ್ಯ ಪದಾಧಿಕಾರಿಗಳಾದ ಮಂಗಳಮ್ಮ, ಪೂರ್ಣಿಮಾ, ಸಂದ್ಯಾಯಾದವ್, ಹನುಮಕ್ಕ, ಶಾರದಮ್ಮ, ಗಂಗಾ, ಸುಧಾ, ಪಾರ್ವತಮ್ಮ, ವಸಂತಮ್ಮ, ದೇವಿಕಾ, ಶಾಂತಮ್ಮ, ಮುಂತಾದವರು ಪಾಲ್ಗೊಂಡಿದದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...