ಹಾಸನ | ಅನಾಥೆಯಾಗಿ ಓಡಾಡುತ್ತಿದ್ದ ಮಹಿಳೆಯ ರಕ್ಷಣೆ

Date:

ಆರು ತಿಂಗಳಿಂದ ಬೇಲೂರು ಪಟ್ಟಣದಲ್ಲಿ ಅನಾಥೆಯಾಗಿ ಓಡಾಡುತ್ತಿದ್ದ ಮಹಿಳೆಯೊಬ್ಬರನ್ನು ’24 x7 ಸೋಷಿಯಲ್ ಸರ್ವಿಸ್’ ತಂಡ ರಕ್ಷಿಸಿದೆ. ಆಕೆಯನ್ನು ಮಹಿಳಾ ಮತ್ತು ಮಕ್ಕಳ ಇಲಾಖೆಯ ಸಿಡಿಪಿಯು ವೆಂಕಟೇಶ್ ಅವರ ಮೂಲಕ ಸಾಂತ್ವನ ಕೇಂದ್ರಕ್ಕೆ ಸೇರಿಸಿದ್ದಾರೆ.

ಮಹಿಳೆಯು ಆರು ತಿಂಗಳುಗಳಿಂದ ಯಾವುದೇ ನೆಲೆಯಿಲ್ಲದೆ, ಎಲ್ಲೆಂದರಲ್ಲಿ ಮಲಗಿ ಜೀವನ ಸವೆಸುತ್ತಿದ್ದರು. ಹಿಂದಿಯಲ್ಲಿ ಮಾತನಾಡುತ್ತಿದ್ದ ಆಕೆ, ತಾನು ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆ ಖೇಡ್ ಗ್ರಾಮದ ಸಂಗೀತಾ ಎಂದು ಹೇಳಿಕೊಂಡಿದ್ದರೆ ಎಂದು ಸಂಘಟನೆಯ ಮುಖಂಡರು ತಿಳಿಸಿದ್ದಾರೆ.

“ಬೇಲೂರು ಪಟ್ಟಣದಲ್ಲಿ ಅನಾಮಿಕ ಮಹಿಳೆ ತಿರುಗಾಡುತ್ತಿರುವುದನ್ನು ಸಮಾಜ ಸೇವಾ ತಂಡ ಗಮನಿಸಿದೆ. ಆ ಬಗ್ಗೆ ನಮ್ಮ ಗಮನಕ್ಕೆ ತಂದಿತ್ತು. ತಕ್ಷಣ ನಮ್ಮ ತಂಡ ಬೇಲೂರು ಪೊಲೀಸ್ ಇಲಾಖೆಯ ಸಹಾಯ ಪಡೆದು ಆ ಮಹಿಳೆಯನ್ನು ರಕ್ಷಿಸಿದೆ. ಆಕೆಯನ್ನು ಚನ್ನರಾಯಪಟ್ಟಣದ ಮಹಿಳಾ ಸ್ವಾಂತನ ಕೇಂದ್ರಕ್ಕೆ ರವಾನಿಸಲಾಗಿದೆ” ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಡಿಪಿಯು ವೆಂಕಟೇಶ್ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...