ಕಳೆದ ವರ್ಷ, ರೌಡಿಶೀಟರ್ ಮಾಸ್ತಿಗೌಡ ಎಂಬಾತನನ್ನು ಹತ್ಯೆಗೈದಿದ್ದ ರೌಡಿಶೀಟರ್ ಯಾಚೇನಹಳ್ಳಿ ಚೇತು ಸೇರಿ 9 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಹೆಚ್ಚುವರಿ ಸೆಷನ್ಸ್ ಕೋರ್ಟ್ ಆದೇಶ ಹೊರಡಿಸಿದೆ.
ಚನ್ನರಾಯಪಟ್ಟಣದಲ್ಲಿ 2023ರ ಜುಲೈ 4ರಂದು ಮಾಸ್ತಿಗೌಡ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ, ಕೊಲೆ ಮಾಡಲಾಗಿತ್ತು. ಪ್ರರಕಣದ ವಿಚಾರಣೆ ನಡೆಸಿರುವ ಕೋರ್ಟ್, ಘಟನೆ ನಡೆದ 10 ತಿಂಗಳಲ್ಲೇ ವಿಚಾರಣೆ ಮುಗಿಸಿದ್ದು, ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.
ಪ್ರಕರಣದಲ್ಲಿ, ಯಾಚೇನಹಳ್ಳಿ ಚೇತು, ಮಂಡ್ಯ ಶಿವು ಅಲಿಯಾಸ್ ಶಿವಕುಮಾರ್, ಉಲಿವಾಲ ಚೇತು, ರಾಕಿ ಸೇರಿದಂತೆ 9 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.
ಪ್ರಕರಣದಲ್ಲಿ ಯಾಚೇನಹಳ್ಳಿ ಚೇತು ಪ್ರಮುಖ ಆರೋಪಿಯಾಗಿದ್ದ. ಆತ, ಕಲಬುರಗಿ ಜೈಲಿನಲ್ಲಿದ್ದುಕೊಂಡೇ ಮಾಸ್ತಿಗೌಡನನ್ನು ಕೊಲೆ ಮಾಡಿಸಿದ್ದ ಎಂದು ಪೊಲೀಸರು ವರದಿ ಸಲ್ಲಿಸಿದ್ದರು.




