ಹಾಸನ ನಗರದ ಚಿಕ್ಕನಾಳು ಏರಿಯಾದ ಕನ್ನಡ ಹಾಗೂ ಉರ್ದು ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ಮುಚ್ಚುವುದನ್ನು ಒಪ್ಪುವುದಿಲ್ಲವೆಂದು AIDSO ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಪ್ರತಿಭಟನೆ ಮಂಗಳವಾರ ನಡೆಸಿದರು.
KPS- ಮ್ಯಾಗ್ನೆಟ್ ಹೆಸರಿನಲ್ಲಿ ಮುಚ್ಚಲೊರಟಿರುವ ಹಾಸನ ನಗರದ ಚಿಕ್ಕನಾಳುವಿನಲ್ಲಿರುವ ಕನ್ನಡ ಹಾಗೂ ಉರ್ದು ಹಿರಿಯ ಪ್ರಾಥಮಿಕ ಶಾಲೆ ಶಾಲೆಯನ್ನು ಉಳಿಸಲು AIDSO ನೇತೃತ್ವದಲ್ಲಿ ನಡೆದ ಹೋರಾಟದಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರನ್ನು ಉದ್ದೇಶಿಸಿ ರಾಜ್ಯ ಖಜಾಂಚಿ ಸುಭಾಷ್ ರವರು ಮಾತನಾಡಿ ಸರ್ಕಾರ KPS- ಮ್ಯಾಗ್ನೆಟ್ ಹೆಸರಿನಲ್ಲಿ ಗ್ರಾಮ ಪಂಚಾಯಿತಿಗೊಂದು ಸರ್ಕಾರಿ ಶಾಲೆ ಮಾಡುತ್ತೇವೆ ಎಂದು ಹೇಳಿ 40,000 ಕ್ಕಿಂತ ಹೆಚ್ಚು ಸರ್ಕಾರಿ ಶಾಲೆಗಳನ್ನು ವಿಲೀನದ ಹೆಸರಿನಲ್ಲಿ ಮುಚ್ಚಲೊರಟಿದೆ. ಈ ಎರಡು ಶಾಲೆಗಳಲ್ಲಿ ಚಿಕ್ಕನಾಳು ಏರಿಯಾದ 30ಕ್ಕಿಂತ ಹೆಚ್ಚು ಮಕ್ಕಳು ಓದುತ್ತಿದ್ದಾರೆ. ಈ ಶಾಲೆಗಳು ಉಳಿದರೆ ಮಾತ್ರ ಅವರಿಗೆ ಶಿಕ್ಷಣ, ಸರ್ಕಾರ ಈ ಶಾಲೆಯನ್ನು ಮುಚ್ಚಿ ನಗರದ ಚಿಪ್ಪಿನಕಟ್ಟೆಯಲ್ಲಿರುವ ಪ್ರೌಢಶಾಲೆಗೆ ಇಲ್ಲಿನ ಮಕ್ಕಳು ಹೋಗಿ ಓದಬೇಕು ಎಂದು ಸರ್ಕಾರ ಆದೇಶ ಹೊರಡಿಸಿದೆ. ಈ ಶಾಲೆ ವಿಲೀನ ಮಾಡಲಾಗುತ್ತದೆ ಎಂದು ಹೇಳುತ್ತಿರುವುದು ಬಹಳ ಖಂಡನೀಯ, ಸರ್ಕಾರ ವ್ಯವಸ್ಥಿತವಾಗಿ ಶಿಕ್ಷಣವನ್ನು ಬಡವರ , ಕೂಲಿ ಕಾರ್ಮಿಕರ ಮಕ್ಕಳಿಂದ ಶಿಕ್ಷಣವನ್ನು ಕಸಿಯುವ ಹುನ್ನಾರ ಮಾಡುತ್ತಿದೆ. ಶಿಕ್ಷಣ ಸಚಿವರು ನಮ್ಮ ರಕ್ತದಲ್ಲಿ ಕನ್ನಡವಿದೆ ಒಂದೇ ಒಂದು ಸರ್ಕಾರಿ ಶಾಲೆಯನ್ನು ಕೂಡ ಮುಚ್ಚುವುದಿಲ್ಲ ಎಂದು ಸದನದಲ್ಲಿ ಹೇಳಿ ಹಿಂಬಾಗಿಲಿನಿಂದ ಆದೇಶವನ್ನು ಹೊರಡಿಸಿ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿದ್ದಾರೆ ಎಂದು AIDSO ಪ್ರತಿಭಟನೆ ನಡೆಸಿದರು.
ಕಳೆದ ಎಂಟು ವರ್ಷಗಳಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಅಧಿಕಾರ ನಡೆಸಿವೆ. ಈ ಎಂಟು ವರ್ಷಗಳಲ್ಲಿ ಮೂರುವರೆ ಸಾವಿರಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಅನುಮತಿ ನೀಡಿದ್ದಾರೆ. ಸರ್ಕಾರಿ ಶಾಲೆಗಳ ಅಭಿವೃದ್ಧಿ ಮಾಡದೆ ಖಾಸಗಿ ಶಾಲೆಗಳ ಪರ ಕೆಲಸ ಮಾಡಿದ್ದಾರೆ. 60,000ಕ್ಕೂ ಹೆಚ್ಚು ಶಿಕ್ಷಕರ ಹುದ್ದೆ ಖಾಲಿ ಇವೆ. 21,000ಕ್ಕೂ ಹೆಚ್ಚಿಗೆ ಕೊಠಡಿಗಳು ದುರಸ್ತಿಯಾಗಿಲ್ಲ. ಇನ್ನೂ ಹಲವಾರು ಸಮಸ್ಯೆಗಳು ಸರ್ಕಾರಿ ಶಾಲೆಗಳಲ್ಲಿ ಇವೆ. ಈ ಸಮಸ್ಯೆಗಳನ್ನು ಮೊದಲು ಪರಿಹರಿಸಬೇಕು. ಪೋಷಕರಾದ ಸಲ್ಮಾ ಬಾನು ರವರು ಮಾತನಾಡಿ “ಇಲ್ಲಿ ವಾಸವಾಗಿರುವುದು ಹಲವಾರು ಕಾರ್ಮಿಕರು, ಗಾರ್ಮೆಂಟ್ಸ್ ನಲ್ಲಿ ದುಡಿಯುವ ಹೆಣ್ಣು ಮಕ್ಕಳು ಅವರ ಮಕ್ಕಳು ಸ್ವಲ್ಪವಾದರೂ ಶಿಕ್ಷಣ ತೆಗೆದುಕೊಳ್ಳಬೇಕೆಂದರೆ ಸರ್ಕಾರಿ ಶಾಲೆ ಬೇಕೇ ಬೇಕು ಎಂದು ಆಗ್ರಹಿಸಿದರು. ನಾವು ಸಹ ಇದ ಶಾಲೆಯಲ್ಲಿ ಓದಿ ಬೆಳೆದವರು ಈ ಊರಿನ ಶಾಲೆಯನ್ನು ಯಾವುದೇ ಕಾರಣಕ್ಕೂ ಮುಚ್ಚಲು ಬಿಡುವುದಿಲ್ಲ” AIDSOಎಂದು ತಿಳಿಸಿದರು.
ಇದನ್ನೂ ಓದಿದ್ದೀರಾ?ಹಾಸನ ಮಣ್ಣಿನ ಹೆಣ್ಣು ಬೇರುಗಳು | ಹಾಸನದ ರಾಜಕೀಯ ಕ್ಷೇತ್ರದಲ್ಲಿ ಮಹಿಳೆಯರು
ಈ ವೇಳೆ ಪ್ರತಿಭಟನೆಯಲ್ಲಿ ಖಜಾಂಚಿ ಸುಭಾಷ್ ಬೆಟ್ಟದ ಕೊಪ್ಪ, ಜಿಲ್ಲಾಧ್ಯಕ್ಷರಾದ ಚೈತ್ರ, ಉಪಾಧ್ಯಕ್ಷರಾದ ಅಭಿಷೇಕ್, ಪೋಷಕರಾದ ಆಯಿಷಾ, ಸಲ್ಮಾ ಬಾನು,ಸುಷ್ಮಾ ಅಮೀರ ಬಾನು, ಫಾತಿಮಾ ಜಹಾರ, ಸಮೀನಾ, ಜಮೀರ್ ಹಾಗೂ ಆ ಶಾಲೆಯ ವಿದ್ಯಾರ್ಥಿಗಳು ಹಾಗೂ ಮುಂತಾದವರು ಭಾಗವಹಿಸಿದ್ದರು.





