ಹಾಸನ | ಕೆರೆ ನೀರು ತರಲು ವಿದ್ಯಾರ್ಥಿಗಳನ್ನು ಕಳಿಸಿದ್ದ ಶಾಲೆ ಸಿಬ್ಬಂದಿ; ಕ್ರಮಕ್ಕೆ ಆಗ್ರಹ

Date:

ವಸತಿ ಶಾಲೆಯಲ್ಲಿ ನೀರಿನ ಸಮಸ್ಯೆಯಿದೆ ಎಂದು ಸಮೀಪದ ಕೆರೆಯಿಂದ ನೀರು ತರಲು ವಿದ್ಯಾರ್ಥಿಗಳನ್ನು ಶಾಲೆಯ ಪ್ರಾಂಶುಪಾಲರು ಕಳುಹಿಸಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಆಂದೂರು ಗ್ರಾಮದಲ್ಲಿರುವ ಡಾ. ಬಿ.ಆರ್‌ ಅಂಬೇಡ್ಕರ್ ವಸತಿ ಶಾಲೆಯ 20 ವಿದ್ಯಾರ್ಥಿಗಳನ್ನು ಕೆರೆಯಿಂದ ನೀರು ತರಲು ಕಳುಹಿಸಲಾಗಿದೆ. ವಿದ್ಯಾರ್ಥಿಗಳನ್ನು ಕೆರೆಗೆ ಕಳುಹಿಸಿದ್ದ ಪ್ರಾಂಶುಪಾಲರು, ಕಚೇರಿ ಸಹಾಯಕ, ಸೆಕ್ಯುರಿಟಿ ಹಾಗೂ ವಾರ್ಡನ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಾಮಾಜಿಕ ಕಾರ್ಯಕರ್ತರ ಶಶಿಧರ್ ಮೌರ್ಯ ಆಗ್ರಹಿಸಿದ್ದಾರೆ.

“ಭಾರೀ ಮಳೆಯಿಂದಾಗಿ ಸೋಮವಾರ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ಈ ವೇಳೆ, ವಸತಿ ಶಾಲೆಯಲ್ಲಿ ಉಳಿದುಕೊಂಡಿದ್ದ ವಿದ್ಯಾರ್ಥಿಗಳನ್ನು ಶಾಲೆಯಿಂದ 0.5 ಕಿಮೀ ದೂರದಲ್ಲಿರುವ ಕೆರೆಗೆ ನೀರು ತರಲು ಕಳುಹಿಸಿದ್ದಾರೆ. ಕೆರೆ ಸಂಪೂರ್ಣ ತುಂಬಿದೆ. ಮಾತ್ರವಲ್ಲದೆ, “ನೀರು ತರಲು ವಿದ್ಯಾರ್ಥಿಗಳನ್ನು ಕರೆದೊಯ್ದಿದ್ದ ವಾರ್ಡನ್, ವಿದ್ಯಾರ್ಥಿಗಳನ್ನು ದನಗಳನ್ನು ಓಡಿಸುವ ಹಾಗೆ, ಬೆತ್ತ ಹಿಡಿದು ಓಡಿಸುತ್ತಿದ್ದರು” ಎಂದು ಶಶಿಧರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಳೆಯಿಂದಾಗಿ ಕೆರೆಯ ದಡ ಕೂಡ ಪಸಿಯಾಗಿದೆ. ಮಕ್ಕಳು ಕೆರೆ ಬಳಿ ಹೋದಾಗ, ಕಾಲು ಜಾರಿ ಬಿದ್ದು, ಏನಾದರೂ ಅನಾಹುತ ಸಂಭವಿಸಿದರೆ, ಯಾರು ಹೊಣೆ. ವಿದ್ಯಾರ್ಥಿಗಳ ಜೀವಕ್ಕೆ ಅಪಾಯವಾಗುವ ಸಂಭವವನ್ನೂ ಯೋಚಿಸದೆ, ವಿದ್ಯಾರ್ಥಿಗಳನ್ನು ನೀರು ತರಳು ಕಳುಹಿಸಿದ್ದ ಪ್ರಾಂಶುಪಾಲರು, ವಾರ್ಡನ್, ಸೆಕ್ಯುರಿಟಿ, ಶಾಲಾ ಅಟೆಂಡರ್‌ಅನ್ನು ಸೇವೆಯಿಂದ ಅಮಾನತು ಮಾಡಬೇಕು. ತನಿಖೆ ನಡೆಸಿ, ಕ್ರಮ ಕೈಗೊಳ್ಳಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...