ಹಾಸನ | ರಾಜ್ಯ ಸರ್ಕಾರ 9 ಹೊಸ ವಿಶ್ವವಿದ್ಯಾಲಯ ಮುಚ್ಚುವ ತೀರ್ಮಾನ ಹಿಂಪಡೆಯುವಂತೆ ಎಸ್‌ಎಫ್‌ಐ ಪ್ರತಿಭಟನೆ

Date:

ರಾಜ್ಯದ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವ ರಾಜ್ಯ ಸರ್ಕಾರದ ನಡೆಯನ್ನು ವಿರೋಧಿಸಿ, ಹಾಸನ ವಿವಿಯನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು ಎಂದು ಆಗ್ರಹಿಸಿ ಹಾಸನ ಜಿಲ್ಲಾ ಎಸ್‌ಎಫ್‌ಐ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲಿಸಿದರು.

ನಗರದ ಗಂಧದಕೋಠಿ ಆವರಣದಿಂದ ಹೊರಟ ಪ್ರತಿಭಟನಾ ಮೆರವಣಿಗೆಯು ಆರ್‌ಸಿ ರಸ್ತೆ, ಬಿಎಂ ರಸ್ತೆ ಮೂಲಕ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಬಂದರು. ಇದೇ ವೇಳೆ ಎಸ್‌ಎಫ್‌ಐ ಜಿಲ್ಲಾ ಕಾರ್ಯದರ್ಶಿ ರಮೇಶ್ ಮಾತನಾಡಿ, “ರಾಜ್ಯದಲ್ಲಿ 9 ಹೊಸ ವಿಶ್ವವಿದ್ಯಾಲಯಗಳನ್ನು  ಮುಚ್ಚಲು ರಾಜ್ಯ ಸರ್ಕಾರದ ಸಚಿವ ಸಂಪುಟದ ಉಪಸಮಿತಿ ತೀರ್ಮಾನಿಸಿದೆ. ಸರ್ಕಾರದ ಈ ನಡೆ ವಿದ್ಯಾರ್ಥಿ ವಿರೋಧಿ ನಡೆಯಾಗಿದೆ”‌ ಎಂದು ಆಕ್ರೋಶ ವ್ಯಕ್ತಪಡಿಸಿದರು.

“ರಾಜ್ಯದ ಹಿಂದುಳಿದ ಜಿಲ್ಲೆಗಳಲ್ಲಿ ಸ್ಥಾಪನೆಗೊಂಡಿರುವ ವಿಶ್ವವಿದ್ಯಾಲಯಗಳು ಮುಚ್ಚುವುದರಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ, ಹೆಣ್ಣು ಮಕ್ಕಳ ಉನ್ನತ ಶಿಕ್ಷಣಕ್ಕೆ, ಅಷ್ಟೇ ಅಲ್ಲದೆ ಪ್ರಾದೇಶಿಕವಾಗಿ ಅಯಾ ಜಿಲ್ಲೆಗಳ ಸರ್ವಾಂಗೀಣ ಅಭಿವೃದ್ಧಿಗೆ ಮಾರಕವಾಗಬಹುದು. ಹಾಗಾಗಿ ರಾಜ್ಯ ಸರ್ಕಾರ ವಿವಿಗಳನ್ನು ಮುಚ್ಚುವ ತೀರ್ಮಾನವನ್ನು ರದ್ದುಪಡಿಸಿ ಯಥಾಸ್ಥಿತಿಯಲ್ಲಿ ವಿವಿಗಳನ್ನು ಮುಂದುವರೆಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಹಾಸನ ವಿವಿ ಮುಚ್ಚದಂತೆ ಎಸ್‌ಎಫ್‌ಐ ಆಗ್ರಹಿಸಿ ಮನವಿ
ಹಾಸನ ವಿವಿ ಮುಚ್ಚದಂತೆ ಆಗ್ರಹಿಸಿ ಎಸ್‌ಎಫ್‌ಐನಿಂದ ಜಿಲ್ಲಾಡಳಿತಕ್ಕೆ ಮನವಿ

“2023ರಲ್ಲಿ ಅಂದಿನ ಬಿಜೆಪಿ ಸರ್ಕಾರ ರಾಜ್ಯದಲ್ಲಿ ‌9 ಹೊಸ ವಿಶ್ವ ವಿದ್ಯಾಲಯಗನ್ನು ಪ್ರಾರಂಭ ಮಾಡಿತ್ತು. ಆದರೆ ಅಂದಿನ ಸರ್ಕಾರ ಅಗತ್ಯ ಅನುದಾನ ಹಾಗೂ ವಿಶ್ವವಿದ್ಯಾಲಯ ಸ್ಥಾಪಿಸಲು ಬೇಕಾದ ಸೌಲಭ್ಯಗಳನ್ನು ಒದಗಿಸದೇ ಏಕಾಏಕಿ ವಿವಿಗಳನ್ನು ಪ್ರಾರಂಭಿಸಿತ್ತು. ನಂತರ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಕಾಂಗ್ರೆಸ್‌ ಸರ್ಕಾರವೂ ಕೂಡ ಕಳೆದ ಎರಡು ವರ್ಷದಿಂದ ಯಾವುದೇ ಅನುದಾನ ನೀಡಲಿಲ್ಲ. ಇಂತಹ ಸಂಕಷ್ಟಮಯ ಪರಿಸ್ಥಿತಿಯಲ್ಲಿಯೂ ಕೂಡ ಕಾರ್ಯನಿರ್ವಹಿಸಿಕೊಂಡು ಬರುತ್ತಿರುವ ವಿಶ್ವವಿದ್ಯಾಲಯಗಳನ್ನು ಮುಚ್ಚಲು ರಾಜ್ಯ ಸರ್ಕಾರ ತೀರ್ಮಾನಿಸಿರುವುದು ಯಾವುದೇ ರೀತಿಯಲ್ಲಿ ಸಮರ್ಥನೀಯವಲ್ಲ. ಕೂಡಲೇ ಈ ಆದೇಶವನ್ನು ವಾಪಸ್ ಪಡೆಯಬೇಕು. ಇಲ್ಲವಾದಲ್ಲಿ ವಿಶ್ವವಿದ್ಯಾಲಯದ ಉಳಿವಿಗಾಗಿ ರಾಜ್ಯವ್ಯಾಪಿ ಪ್ರತಿಭಟನೆಗೆ ಮುಂದಾಗಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಉಪನ್ಯಾಸಕ ಡಾ. ಮಹೇಶ್ ಮಾತನಾಡಿ, “ಸರ್ಕಾರ ಮುಚ್ಚಲು ಹೊರಟಿರುವ ಈ ವಿವಿಗಳಿಗೆ ಪೂರ್ಣಕಾಲಿಕ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ನೇಮಕ, ಗ್ರಾಂಥಾಲಯ, ಪ್ರಯೋಗಾಲಯ, ಹಾಸ್ಟೆಲ್, ಅನುದಾನ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ಸರ್ಕಾರ ಒದಗಿಸಬೇಕಿತ್ತು. ಈ ಸೌಕರ್ಯಗಳನ್ನು ಒದಗಿಸದಿರುವ ಸ್ಥಿತಿಯಲ್ಲಿಯೂ ಹಲವು ಪ್ರಮುಖ ಸಂಸ್ಥೆಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ವಿದ್ಯಾರ್ಥಿಗಳಿಗೆ ಅಗತ್ಯವಿರುವ ಉನ್ನತ ಶಿಕ್ಷಣ ಪಡೆಯಲು ವಿವಿಧ ಶೈಕ್ಷಣಿಕ ಚಟುವಟಿಕೆಗಳೊಂದಿಗೆ ಮುನ್ನಡೆಯುತ್ತಿವೆ”‌ ಎಂದು ಹೇಳಿದರು.‌

“ಈಗಾಗಲೇ ಈ ವಿವಿಯಲ್ಲಿ ಓದುತ್ತಿರುವ ಸಾವಿರಾರು ವಿದ್ಯಾರ್ಥಿಗಳು, ನೂರಾರು ಬೋಧಕ ಮತ್ತು ಬೋಧಕೇತರ ವರ್ಗ ಮತ್ತು ಈ ವಿವಿಗಳಿಗೆ ಸೇರ್ಪಡೆಯಾಗಿರುವ ನೂರಾರು ಪದವಿ ಕಾಲೇಜುಗಳು ಮತ್ತು ಸಾವಿರಾರು ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಅತಂತ್ರವಾಗಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣವನ್ನು ಕೇವಲ ಲಾಭದ ದೃಷ್ಟಿಯಲ್ಲಿ ನೋಡದೆ ಮಾನವ ಸಂಪನ್ಮೂಲ ಅಭಿವೃದ್ಧಿಯ ದೃಷ್ಟಿಯಿಂದ ಈ ಎಲ್ಲ ವಿಶ್ವವಿದ್ಯಾಲಯಗಳಿಗೂ ಹೆಚ್ಚಿನ ಅನುದಾನ ಬಿಡುಗಡೆ ಮಾಡಿ ವಿವಿಗಳನ್ನು ಉಳಿಸಬೇಕಾಗಿದೆ” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಹಾಸನ | ರಾಷ್ಟ್ರೀಯ ಹೆದ್ದಾರಿ 75ರ ಹಲವು ಕಾಮಗಾರಿ ಸ್ಥಳ ಪರಿಶೀಲಿಸಿದ ಸಂಸದ ಶ್ರೇಯಸ್ ಎಂ ಪಟೇಲ್

“ವಿಶ್ವ ವಿದ್ಯಾಲಯಗಳನ್ನು ಬಲಿಷ್ಠಪಡಿಸುವ ಬದಲು ಮುಚ್ಚುವ ತೀರ್ಮಾನವು ಆಯಾ ಜಿಲ್ಲೆಯ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ವಂಚಿಸುವುದಾಗಿದೆ. ಹಾಗಾಗಿ ಸಚಿವ ಸಂಪುಟದ ಉಪಸಮಿತಿ ತೆಗೆದುಕೊಂಡಿರುವ ನಿರ್ಧಾರವನ್ನು ಸರ್ಕಾರ ಯಾವುದೇ ಕಾರಣ ನೀಡದೆ ಕೂಡಲೇ ಹಿಂಪಡೆಯಬೇಕು. ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಹಾಗೂ ಬೌದ್ದಿಕ ಸ್ವಾವಲಂಬನೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ವಿವಿಗಳಿಗೆ ಅಗತ್ಯ ಕ್ರಮಗಳನ್ನು ಕೈಗೊಂಡು ಬಲಪಡಿಸಬೇಕು.‌ ವಿಶ್ವ ವಿದ್ಯಾಲಯಗಳಿಗೆ ಉಪನ್ಯಾಸಕರನ್ನು ನೇಮಕಾತಿ ಮಾಡಬೇಕು ಹಾಗೂ ಅನುದಾನವನ್ನು ನೀಡುವ ಮೂಲಕ ವಿಶ್ವ ವಿದ್ಯಾಲಯಗಳನ್ನು ಬಲಪಡಿಸಬೇಕು. ಸಂಪುಟ ಉಪಸಮಿತಿಯ ತೀರ್ಮಾನವನ್ನು ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳು ಕೂಡಲೇ ಹಿಂಪಡೆಯಬೇಕು” ಎಂದು ಮನವಿ ಮಾಡಿದರು.  

ಪ್ರತಿಭಟನೆಯಲ್ಲಿ ಎಸ್‌ಎಫ್‌ಐ ಜಿಲ್ಲಾ ಕಾರ್ಯದರ್ಶಿ ರಮೇಶ್‌ ಹಾಸನ್‌,  ಸಹ ಕಾರ್ಯದರ್ಶಿ ವಿವೇಕ್, ರಾಜ್ಯ ಉಪಾಧ್ಯಕ್ಷ  ಬಸವರಾಜ ಗುಳೆದಾಳ್, ಡಿವೈಎಫ್‌ಐ, ಎಂ ಜಿ ಪೃಥ್ವಿ, ಮುಖಂಡರಾದ ಜಯಲಕ್ಷ್ಮಿ, ಸೌಮ್ಯ, ಧರ್ಮ, ಉಪನ್ಯಾಸಕರಾದ ಡಾ. ಮಹೇಶ್, ಡಾ. ಲೋಕೇಶ್ ಸೇರಿದಂತೆ ಇತತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...