ಹಾಸನ | ಅರೇಹಳ್ಳಿಯಲ್ಲಿ ಎಸ್‌ಎಸ್‌ಎಲ್‌ಸಿ ಅಣಕು ಪರೀಕ್ಷೆ

Date:

ಅರೇಹಳ್ಳಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ(ಪ್ರೌಡಶಾಲಾ ವಿಭಾಗ) ಪರೀಕ್ಷಾ ಕೇಂದ್ರಗಳ ವ್ಯಾಪ್ತಿಗೆ ಸೇರಿರುವ ವಿವಿಧ ಶಾಲೆಯ ಸುಮಾರು 260 ಮಕ್ಕಳಿಗೆ 2024-25ನೇ ಸಾಲಿನ ಮುಖ್ಯ ಪರೀಕ್ಷೆಯ ಮಾದರಿಯಲ್ಲಿಯೇ ಎಸ್‌ಎಸ್‌ಎಲ್‌ಸಿ ಅಣಕು ಪರೀಕ್ಷೆ ನಡೆಸಲಾಯಿತು.

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಅರೇಹಳ್ಳಿ ಪಟ್ಟಣದ ವ್ಯಾಪ್ತಿಯ ಶಾಲೆಗಳಲ್ಲಿ ನಡೆಸಿದ ಅಣಕು ಪರೀಕ್ಷೆ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಗೌಡ ಮಾತನಾಡಿ, “ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಅಂತಿಮ ಪರೀಕ್ಷೆ ಯಾವ ರೀತಿಯಲ್ಲಿ ನಡೆಯುತ್ತದೆಯೋ ಅದೆ ಮಾದರಿಯಲ್ಲಿ ಈ ಪರೀಕ್ಷೆಯು ನಡೆಡಿದ್ದು, ವಿದ್ಯಾರ್ಥಿಗಳಲ್ಲಿ ಮನೋಸ್ಥೈರ್ಯ ಹೆಚ್ಚಿಸಿದೆ, ವಿದ್ಯಾರ್ಥಿಗಳು ಮಾನಸಿಕ ಒತ್ತಡವನ್ನು ಮಾಡಿಕೊಳ್ಳದೆ ಆರೋಗ್ಯವನ್ನು ಕಾಪಾಡಿಕೊಳ್ಳುತ್ತ ದಿನನಿತ್ಯ ಸಮಯ ಪಾಲನೆ ಮಾಡಿಕೊಂಡು ಪಠ್ಯಪುಸ್ತಕವನ್ನು ಓದುತ್ತ ಪರೀಕ್ಷೆಯನ್ನು ಎದುರಿಸಬೇಕು” ಎಂದು ಸಲಹೆ ನೀಡಿದರು.

“ಮುಖ್ಯ ಪರೀಕ್ಷೆಗೆ ಇನ್ನು ಕೆಲವೇ ದಿನಗಳು ಉಳಿದಿದ್ದು, ಈಗಲೂ ಸಮಯವಿದೆ. ಚೆನ್ನಾಗಿ ಓದಿ ಉತ್ತಮ ಅಂಕಗಳನ್ನು ಪಡೆಯಬೇಕು. ಈ ಬಾರಿ ತಾಲೂಕಿನ ಎಲ್ಲ ಶಾಲೆಯ ಶಿಕ್ಷಕರು ಹೆಚ್ಚಿನ ಶ್ರಮವಹಿಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಿದ್ದು, ಶೇ.90ಕ್ಕೂ ಮೇಲ್ಪಟ್ಟು ಉತ್ತಮ ಫಲಿತಾಂಶ ಪಡೆಯಬಹುದೆಂಬ ನಿರೀಕ್ಷೆಯಲ್ಲಿದ್ದೇವೆ. ಈ ಬಾರಿ ಎಲ್ಲ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆಯಲಿ ಎಂಬ ಉದ್ದೇಶದಿಂದ ಪಾಸಿಂಗ್ ಮತ್ತು ಸ್ಕೋರಿಂಗ್ ಎಂಬ ಎರಡು ಪ್ಯಾಕೇಜ್ ಮಾಡಿದ್ದು, ಯಾವ ವಿದ್ಯಾರ್ಥಿ ಶಿಕ್ಷಣದಲ್ಲಿ ಹಿನ್ನಡೆ ಇದ್ದಾರೆ ಅವರ ಮೇಲೆ ನಿಗಾವಹಿಸಿ ಅವರಿಂದ ಉತ್ತಮ ಫಲಿತಾಂಶ ಪಡೆಯಲು ಹಾಗೂ ಉತ್ತಮ ಕಲಿಕಾ ಜ್ಞಾನವಿರುವ ವಿದ್ಯಾರ್ಥಿಗಳಿಂದ ಹೆಚ್ಚಿನ ಅಂಕಗಳಿಸಲು ಈ ಪ್ಯಾಕೆಜ್ ಸಹಕಾರಿಯಾಗಲಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಸಾಗರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸರ್ವಾಧ್ಯಕ್ಷ ಅ ರಾ ಶ್ರೀನಿವಾಸರ ಭಾಷಣ

ಈ ವೇಳೆ ಶಿಕ್ಷಣ ಸಂಯೋಜನಾಧಿಕಾರಿ ಗೋಪಾಲ್, ಜಗದೀಶ್, ಮುಖ್ಯ ಶಿಕ್ಷಕರಾದ ಶಿವಕುಮಾರ್ ಎಸ್ ಎನ್, ಮಂಜುಳಾ, ಶಿಕ್ಷಕರಾದ ಪ್ರಸನ್ನ ಅರಸ್, ಪ್ರವೀಣ್, ನವೀನ್, ಪಾಟೀಲ್ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...