ಹಾಸನ | ಅನುಮಾನ ಮೂಡಿಸಿದ ಪ್ರಕರಣ; ಮಹಿಳೆ ಪತ್ತೆ

Date:

ಹಾಸನ ತಾಲ್ಲೂಕಿನ ಕಲ್ಕೆರೆ ಬಳಿ ನಡೆದಿದ್ದ ಮಹಿಳೆ ನಾಪತ್ತೆ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್​ ಎದುರಾಗಿದೆ. ಮೊದಲು ಕೊಲೆ ಅಥವಾ ಅಪಹರಣ ಎಂದು ಶಂಕಿಸಲಾಗಿದ್ದ ಪ್ರಕರಣದಲ್ಲಿ, ಮಹಿಳೆ ಪತ್ತೆಯಾಗಿದ್ದಾರೆ.

ಮದುವೆಗೆ ಬಂದಿದ್ದ 29 ವರ್ಷದ ಪ್ರಿಯಾಂಕ ಬಟ್ಟೆಗಳು ಹಾಸನ ತಾಲೂಕಿನ ಕಲ್ಕೆರೆ ಬಳಿ ಪತ್ತೆಯಾಗಿತ್ತು, ಇದರಿಂದ ಆತಂಕಗೊಂಡ ಪೊಲೀಸರು ಹುಡುಕಾಟ ಆರಂಭಿಸಿದ್ದರು. ನಿಗೂಢವಾಗಿ ನಾಪತ್ತೆಯಾಗಿದ್ದ ಪ್ರಿಯಾಂಕ ಬೇರೊಬ್ಬರ ಜೊತೆ ಸಂಸಾರ ಮಾಡಲು ಸ್ವಯಂ ಓಡಿಹೋಗಿದ್ದರು ಎಂದು ಹಾಸನ ಎಸ್‌ಪಿ ಶುಭನ್ವಿತಾ ತಿಳಿಸಿದ್ದಾರೆ. ಮೊದಲಿಗೆ ಪ್ರಿಯಾಂಕ ತುಮಕೂರು ಜಿಲ್ಲೆಯ ಕುಣಿಗಲ್‌ನಿಂದ ಚಿಕ್ಕಮಗಳೂರಿಗೆ ಮದುವೆಗೆ ಬಂದಿದ್ದರು. ಫೆಬ್ರವರಿ 12ರಂದು ರಾತ್ರಿ 7:15ರ ವೇಳೆ ತಾಯಿಗೆ ಕರೆ ಮಾಡಿ ಮಾತನಾಡಿದ್ದರು. 8 ಗಂಟೆಗೆ ಚಿಕ್ಕಮ್ಮನೊಂದಿಗೆ ಕೊನೆಯ ಬಾರಿಗೆ ಮಾತನಾಡಿದ ನಂತರ ಅವರ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಫೆಬ್ರವರಿ 13ರಂದು ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಾಗಿತ್ತು. ಮೈಮೇಲೆ 30 ಲಕ್ಷ ರೂಪಾಯಿ ಮೌಲ್ಯದ ಒಡವೆಗಳಿದ್ದುದರಿಂದ ಕೊಲೆ ಅಥವಾ ಅಪಹರಣ ಎಂದು ಶಂಕಿಸಲಾಗಿತ್ತು. ಪೊಲೀಸರು ಕಾಲ್ ಡಿಟೇಲ್‌ಗಳು ಮತ್ತು ಸಿಸಿಟಿವಿ ಫುಟೇಜ್‌ಗಳನ್ನು ಪರಿಶೀಲಿಸಿದರು. ನಂತರ ಶೋಧಕಾರ್ಯ ಆರಂಭಿಸಿದ್ದು ಪ್ರಿಯಾಂಕ ಡೇವಿಡ್​ ಜೊತೆಗೆ ಪತ್ತೆಯಾಗಿದ್ದಾಳೆ.

ಪ್ರಿಯಾಂಕ ತಮ್ಮ ಗಂಡನೊಂದಿಗೆ ಇರಲು ಇಷ್ಟಪಡದೆ ಬೇರೊಬ್ಬರ ಜೊತೆ ಹೋಗಲು ಪ್ಲಾನ್ ಮಾಡಿದ್ದರು ಎಂದು ಬಯಲಾಗಿದೆ. ಆ ವ್ಯಕ್ತಿ ಹೆಸರು ಡೇವಿಡ್. ಫೆಬ್ರವರಿ 12ರ ಸಂಜೆ 8 ಗಂಟೆ ನಂತರ ಬೇಲೂರಿನಿಂದ ಪ್ರಿಯಾಂಕ ಮತ್ತು ಡೇವಿಡ್ ಬೈಕ್‌ನಲ್ಲಿ ತೆರಳಿದ್ದರು. ಫಾರೆಸ್ಟ್ ಪ್ರದೇಶದಲ್ಲಿ ಪ್ರಿಯಾಂಕ ತಾನು ಧರಿಸಿದ್ದ ಬಟ್ಟೆಗಳನ್ನು ಬದಲಾಯಿಸಿ, ಹಳೆಯ ಬಟ್ಟೆಗಳನ್ನು ಕಲ್ಕೆರೆ ಕೆರೆ ಬಳಿ ಎಸೆದಿದ್ದಳು ಎಂದು ಬಯಲಾಗಿದೆ. ಪ್ರಿಯಾಂಕ ಡೇವಿಡ್‌ನೊಂದಿಗೆ ಬೇರೊಂದು ಫೋನ್‌ನಿಂದ ಸಂಪರ್ಕಿಸಿಕೊಂಡಿದ್ದರು. ಡೇವಿಡ್ ನನ್ನು ಬೇಲೂರಿಗೆ ಕರೆಸಿಕೊಂಡಿದ್ದಳು ಎಂದು ತನಿಖೆಯಲ್ಲಿ ದೃಢಪಟ್ಟಿದೆ. ಪ್ರಿಯಾಂಕ ಗಂಡನಿಂದ ದೂರವಾಗಲು ಯೋಜನೆ ಮಾಡಿ ಬೇರೊಬ್ಬರ ಜೊತೆ ಹೋಗಿದ್ದರು. ಇದು ಸ್ವಯಂ ಓಡಿಹೋಗುವ ಪ್ರಕರಣವಾಗಿದೆ ಎಂದು ಹೇಳಿದ್ದಾರೆ. ಪೊಲೀಸರು ಕಾಲ್ ಡಿಟೇಲ್‌ಗಳು, ಸಿಸಿಟಿವಿ ಮತ್ತು ಇತರ ಸಾಕ್ಷ್ಯಗಳನ್ನು ಆಧರಿಸಿ ಪ್ರಕರಣ ಭೇದಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿದ್ದೀರಾ?ಹಾಸನ | ಮದುವೆಗೆ ಬಂದಿದ್ದ ಯುವತಿ ನಾಪತ್ತೆ

ಪ್ರಿಯಾಂಕ ತಮ್ಮ ಇಚ್ಛೆಯಂತೆ ಬೇರೊಬ್ಬರ ಜೊತೆ ಹೋಗಿರುವುದು ದೃಢಪಟ್ಟಿದೆ. ಈ ಪ್ರಕರಣ ತನಿಖೆಯಲ್ಲಿ ಪೊಲೀಸರು ತ್ವರಿತ ಕ್ರಮ ಕೈಗೊಂಡಿದ್ದಾರೆ. ಸಿಸಿಟಿವಿ ಫುಟೇಜ್ ಮತ್ತು ಕಾಲ್ ರೆಕಾರ್ಡ್‌ಗಳು ಪ್ರಮುಖ ಸಾಕ್ಷ್ಯಗಳಾಗಿವೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...