ಹಾಸನ | ಪ್ರಾಥಮಿಕ ಶಾಲಾ ಶಿಕ್ಷಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಸಾಧನೆಗೈದ ಶಿಕ್ಷಕರು, ನಿವೃತ್ತ ಶಿಕ್ಷಕರಿಗೆ ಅಭಿನಂದನಾ ಸಮಾರಂಭ

Date:

ಸರ್ಕಾರಿ ನೌಕರರ ಸೊಸೈಟಿಯು ಸೇವಾ ಮನೋಭಾವದಿಂದ ಎಲ್ಲರನ್ನೂ ಒಳಗೊಂಡಂತೆ ಅನ್ಯೋನ್ಯತೆಯಿಂದ ಯಶಸ್ವಿಯಾಗಿ ನಡೆದುಕೊಂಡು ಬರುತ್ತಿದ್ದು, ನಮ್ಮ ಸೊಸೈಟಿ ಒಂದೇ ಕುಟುಂಬದಂತೆ ನಡೆದುಕೊಂಡು ಬರುತ್ತಿದೆ. ಶಿಕ್ಷಕರ ಸಂಘ ಸುಸಜ್ಜಿತವಾದ ಕಟ್ಟಡವನ್ನೂ ಹೊಂದುವಲ್ಲಿ ಯಶಸ್ವಿಯಾಗಿದೆ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಕೋ-ಆಪರೇಟಿವ್ ಸೊಸೈಟಿ ಉಪಾಧ್ಯಕ್ಷ ಹಿರಿಯಣ್ಣ ಹೇಳಿದರು.

ಹಾಸನ ನಗರದ ಕನ್ನಡ ಸಾಹಿತ್ಯ ಪರಿಷತ್ತು ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪ್ರಾಥಮಿಕ ಶಾಲಾ ಶಿಕ್ಷಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಸಾಧನೆಗೈದ ಶಿಕ್ಷಕರು ಹಾಗೂ ನಿವೃತ್ತ ಶಿಕ್ಷಕರಿಗೆ ಅಭಿನಂದನಾ ಸಮಾರಂಭ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಮುಂದಿನ ದಿನಗಳಲ್ಲಿ ಸೇವಾ ಮನೋಭಾವ ಇರುವವರು 1,235ಕ್ಕೂ ಹೆಚ್ಚು ಸದಸ್ಯತ್ವ ಹೊಂದುವ ಸಂಸ್ಥೆಯಾಗಿದೆ. ಇಡೀ ಜಿಲ್ಲೆಯಲ್ಲಿ 73 ಸದಸ್ಯರಿಗೆ 90 ಲಕ್ಷಕ್ಕೂ ಹೆಚ್ಚು ಸಾಲವನ್ನು ನೀಡಲಾಗಿದೆ. ಮುಂದಿನ ದಿನಗಳಲ್ಲಿ ಶಿಕ್ಷಕರಿಗೆ ಆರ್ಥಿಕವಾಗಿ ಸಹಕಾರ ನೀಡುವ ನಿಟ್ಟಿನಲ್ಲಿ ಸೊಸೈಟಿ ಕಾರ್ಯ ನಿರ್ವಹಿಸುತ್ತಿದ್ದು, ಶಿಕ್ಷಕರ ಸಹಕಾರದಿಂದ ಇವೆಲ್ಲವೂ ಸಾಧ್ಯವಾಗುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಾಗೂರು ಕೃಷ್ಣೇಗೌಡ ಮಾತನಾಡಿ, “ರಾಜ್ಯದ ದಕ್ಷಿಣ ಭಾಗದಲ್ಲಿ ಕ್ಷೇಮಾಭಿವೃದ್ಧಿಗೋಸ್ಕರ ಸೊಸೈಟಿಗಳು, ಉತ್ತರ ಭಾಗಕ್ಕೆ ಹೋಲಿಸಿದರೂ ಕೂಡ ಕಡಿಮೆ ಪ್ರಮಾಣದಲ್ಲಿವೆ. ಜಿಲ್ಲೆಯಲ್ಲಿ 6 ಸಾವಿರ ಶಿಕ್ಷಕರು ಇದ್ದರೂ ಕೂಡ ಸದಸ್ಯತ್ವ ಹೊಂದಿರುವವರು 1 ಸಾವಿರದಷ್ಟು ಮಾತ್ರ ಇರುವುದರಿಂದ ಮುಂದಿನ ದಿನಗಳಲ್ಲಿ ಸದಸ್ಯತ್ವದ ಸಂಖ್ಯೆ ಹೆಚ್ಚಾಗಬೇಕು” ಎಂದು ಹೇಳಿದರು.

“ಇತ್ತೀಚಿನ ದಿನಗಳಲ್ಲಿ ಶಿಕ್ಷಣದ ಮಟ್ಟ ಹೆಚ್ಚಿದಂತೆ ಶಿಕ್ಷಕರ ಕೆಲಸದ ಒತ್ತಡವೂ ಹೆಚ್ಚಾಗಿದೆ. ಈ ನಡುವೆಯೂ ಕೂಡ ಸೊಸೈಟಿ ಪ್ರಾರಂಭ ಮಾಡಿ ಶಿಕ್ಷಕರಿಗೆ ಸಹಕಾರ ನೀಡುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ” ಎಂದರು.

ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಚಂದ್ರಶೇಖರ್ ಹೆಚ್ ಎನ್ ಮಾತನಾಡಿ, “ಸೊಸೈಟಿಯು ಶಿಸ್ತಿನಿಂದ ಯಶಸ್ವಿಯಾಗಿ ಬೆಳವಣಿಗೆ ಕಾಣುತ್ತಿರುವುದು ಅಭಿನಂದನಾರ್ಹ, ಈ ಸೊಸೈಟಿಯು ಯಾವುದೇ ರೀತಿಯ ಋಣಾತ್ಮಕ ಯೋಜನೆಗಳಿಗೆ ಬಲಿಯಾಗದೆ ಯಾವುದೇ ರೀತಿಯಲ್ಲಿ ಲೋಪದೋಷಗಳು ಆಗದಂತೆ ನಡೆದುಕೊಂಡು ಹೋಗಲಿ, ಇನ್ನೂ ಹೆಚ್ಚಿನ ಶಿಕ್ಷಕರು ಸೊಸೈಟಿಯಲ್ಲಿ ಸದಸ್ಯತ್ವ ಪಡೆದುಕೊಳ್ಳುವಂತಾಗಲಿ” ಎಂದು ಹಾರೈಸಿದರು.

“ಮುಂದಿನ ದಿನಗಳಲ್ಲಿ ಮಕ್ಕಳ ಹಿತದೃಷ್ಟಿಯಲ್ಲಿ ಶಿಕ್ಷಕರು ಹೆಚ್ಚಿನ ಕೆಲಸ ನಿರ್ವಹಿಸುವ ಕೆಲಸವಾಗಬೇಕು. ವಾರ್ಷಿಕ ಪಠ್ಯಕ್ರಮ ಸರಿಯಾದ ರೀತಿಯಲ್ಲಿ ಆಗಬೇಕು. ಆರ್ಥಿಕ ವ್ಯವಹಾರವೇ ಆಗಲಿ, ಬೋಧನೆಯೇ ಆಗಲಿ ವ್ಯವಸ್ಥಿತವಾಗಿ ಆಗಬೇಕು. ಗುರಿ ಮುಟ್ಟಿಸುವಂತಾಗಬೇಕು. ಮುಂದಿನ ದಿನಗಳಲ್ಲಿ ಪ್ರತಿಭಾ ಪುರಸ್ಕಾರಗಳು ಹೆಚ್ಚಾಗಬೇಕು. ಅದೇ ರೀತಿಯಲ್ಲಿ ಸೊಸೈಟಿಯಿಂದ ತಾಲೂಕಿಗೊಂದು ಶಾಲೆಯನ್ನಾದರೂ ದತ್ತು ತೆಗೆದುಕೊಂಡು ಸಹಕಾರ ನೀಡಬೇಕು” ಎಂದು ಅಭಿಪ್ರಾಯಪಟ್ಟರು.

ಶಿಕ್ಷಕಿ ಮಹಾಲಕ್ಷ್ಮಿ ಅವರು ಸೊಸೈಟಿಯ ವಾರ್ಷಿಕ ವರದಿಯನ್ನು ವಾಚಿಸಿದರು. ವಿವಿಧ ವಿಭಾಗಗಳಲ್ಲಿ ಅತಿಹೆಚ್ಚು ಅಂಕ ಪಡೆದ ಶಿಕ್ಷಕರ ಮಕ್ಕಳಿಗೆ, ನಿವೃತ್ತಿ ಹೊಂದಿದ ಶಿಕ್ಷಕರಿಗೆ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಶಿಕ್ಷಕರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಶಿರಸಿ | ಸಂವಿಧಾನದ ಆಶಯಕ್ಕೆ ಬದ್ದವಾಗಿ ಕೆಲಸ ಮಾಡುವೆ: ಎಸ್‌ಪಿ ದೀಪನ್ ಎಂ ಎನ್

ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೃಷ್ಣೇಗೌಡ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಚಂದ್ರಶೇಖರ್, ಕೋ ಪ್ರಾಥಮಿಕ ಶಾಲಾ ಶಿಕ್ಷಕರ ಆಪರೇಟಿವ್ ಸೊಸೈಟಿ ಅಧ್ಯಕ್ಷ ರಮೇಶ್, ಗೃಹ ನಿರ್ಮಾಣ ಸಹಕಾರ ಸಂಘದ ಯೋಗೇಶ್, ವೈ ಎಸ್ ತಮ್ಮಣ್ಣ ಶೆಟ್ಟಿ, ರಂಗನಾಥ್ ಕೆ, ಹಿರಿಯಣ್ಣ ಬಿ ಎಲ್, ಯೂನಿಯನ್ ಬ್ಯಾಂಕ್ ಸಂಜೀವ್, ಸೊಸೈಟಿಯ ನಿರ್ದೇಶಕರಾದ ಧರ್ಮಪ್ಪ ನಾಯಕ, ರಾಜು ಬಿ ಹೆಚ್, ಅಶೋಕ್ ಯು ಎನ್, ಪೂರ್ಣೇಶ್, ರೇವಣ್ಣ, ಗೌಡ ಲೋಹಿತ ಜವರಪ್ಪ, ದಿನೇಶ್, ಶ್ರೀನಿವಾಸ್, ರಾಘವೇಂದ್ರ, ಮೀನಾಕ್ಷಿ, ಶುಭಮಂಗಳ, ವೀಣಾ ಸತೀಶ್ ಕುಮಾರ್, ಕಾಂತರಾಜ್, ರೇಣುಕಾ ಪ್ರಸಾದ್, ಕೇಶವಮೂರ್ತಿ, ಆಂಥೋನಿ ಸ್ವಾಮಿ ಸೇರಿದಂತೆ ಶಿಕ್ಷಕರು, ಇಸಿಒ, ಬಿಅರ್‌ಪಿ, ಸಿಅರ್‌ಪಿ, ಬಿಐಇಆರ್‌ಟಿಗಳು ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...