ಹಾಸನ | ವಿದ್ಯಾರ್ಥಿನಿ ಅಪಹರಣಕ್ಕೆ ಯತ್ನ ಪ್ರಕರಣಕ್ಕೆ ಟ್ವಿಸ್ಟ್; ಓಮ್ನಿ ಚಾಲಕ ನಿಧಾನಕ್ಕೆ ಚಲಿಸಿದ್ದನ್ನೇ ತಪ್ಪಾಗಿ ಗ್ರಹಿಸಿದ್ದ ಬಾಲಕಿ!

Date:

ಶಾಲೆಗೆ ತೆರಳುತ್ತಿದ್ದಾಗ ಓಮ್ನಿ ವಾಹನವೊಂದು ತನ್ನ ಬಳಿ ನಿಧಾನವಾಗಿ ಬಂದಿದ್ದರಿಂದ ಆತಂಕಗೊಂಡ ವಿದ್ಯಾರ್ಥಿನಿಯೊಬ್ಬಳು ಹೆದರಿ ಅಪಹರಣಕ್ಕೆ ಯತ್ನಿಸಿದರೆಂದು ಹೇಳಿ ಪೊಲೀಸರನ್ನು ಪೇಚಿಗೆ ಸಿಲುಕಿಸಿದ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನಲ್ಲಿ ಗುರುವಾರ ನಡೆದಿದೆ.

ಆಲೂರು ತಾಲೂಕಿನ ಹಂಚೂರು ಸರ್ಕಾರಿ ಪ್ರೌಢ ಶಾಲೆಯಲ್ಲಿ 8ನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿ ತನ್ನ ಊರಿನಿಂದ ಬೆಳಿಗ್ಗೆ ಶಾಲೆಗೆ ಬರುತ್ತಿದ್ದಾಗ ಲಗೇಜ್ ತುಂಬಿದ ಓಮ್ನಿಯೊಂದು ಹಿಂದಿನಿಂದ ಬಂದಿದೆ. ಹದಗೆಟ್ಟ ರಸ್ತೆ ಅದಾಗಿರುವುದರಿಂದ ವಿದ್ಯಾರ್ಥಿನಿ ಸಮೀಪ ಬಂದಾಗ ಚಾಲಕ ನಿಧಾನಕ್ಕೆ ಚಲಿಸಿದ್ದಾನೆ. ತನ್ನ ಅಪಹರಣಕ್ಕಾಗಿಯೇ ಬಂದರೆಂದು ಆತಂಕಗೊಂಡ ವಿದ್ಯಾರ್ಥಿನಿ ಬ್ಯಾಗ್ ಅನ್ನು ಪಕ್ಕದ ತೋಟಕ್ಕೆ ಎಸೆದು ಓಡಿ ಹೋಗಿದ್ದಾಳೆ.

omni

ರಸ್ತೆಯಲ್ಲಿ ಬರುತ್ತಿದ್ದ ಬೈಕ್ ಚಾಲಕನೋರ್ವ ವಿದ್ಯಾರ್ಥಿನಿ ಹೆದರಿರುವುದನ್ನು ಗಮನಿಸಿ, ಆಕೆಯನ್ನು ಕೂರಿಸಿಕೊಂಡು ಶಾಲೆಗೆ ಕರೆ ತಂದಿದ್ದಾರೆ. ಭಾರೀ ಆತಂಕದಲ್ಲಿದ್ದ ಬಾಲಕಿ, “ತನ್ನನ್ನು ಅಪಹರಣಕ್ಕೆ ಯತ್ನಿಸಿದರು. ವಾಹನದಲ್ಲಿ ನಮ್ಮದೇ ಶಾಲೆಯ ಸಮವಸ್ತ್ರ ಧರಿಸಿದ ಇಬ್ಬರು ಹುಡುಗಿಯರಿದ್ದರು. ಒಬ್ಬ ವ್ಯಕ್ತಿ ನನ್ನನ್ನು ಹಿಡಿಯಲು ವಾಹನದಿಂದ ಇಳಿದುಬಂದ. ಅವರಿಂದ ತಪ್ಪಿಸಿಕೊಂಡು ಬಂದೆ” ಎಂದು ಶಿಕ್ಷಕರಿಗೆ ಅಳುತ್ತಲೇ ವರದಿ ಒಪ್ಪಿಸಿದ್ದಾಳೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿದ್ಯಾರ್ಥಿನಿಯ ಅಳಲನ್ನು ಆಲಿಸಿದ ಸ್ಥಳೀಯರು ಬಾಲಕಿಯ ಹೇಳಿಕೆಯನ್ನು ಮೊಬೈಲ್ ಕ್ಯಾಮರಾದಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟರು. ಮುಖ್ಯ ಶಿಕ್ಷಕ ನಾಗರಾಜು ಸಹ ವಿದ್ಯಾರ್ಥಿನಿಯ ಹೇಳಿಕೆಯನ್ನೇ ನಂಬಿ ವಿಡಿಯೋ ಹೇಳಿಕೆ ಕೂಡ ನೀಡಿದ್ದರು.

Aloor

ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ್ದ ಆಲೂರು ಪಿಎಸ್‌ಐ ಮೋಹನ್‌ರೆಡ್ಡಿ, ಬಿಇಒ ಕೃಷ್ಣಗೌಡ ವಿದ್ಯಾರ್ಥಿ ಹೇಳಿಕೆ ಆಧರಿಸಿ ಸಮೀಪದ ಮನೆಯೊಂದರ ಸಿಸಿಟಿವಿ ಕ್ಯಾಮರಾ ಪರಿಶೀಲಿಸಿದಾಗ ಓಮ್ನಿ ವಾಹನವೊಂದು ಚಲಿಸಿರುವುದು ತಿಳಿದಿದೆ. ಅದರ ನಂಬರ್‌ನ ಜಾಡು ಹಿಡಿದು ಪರಿಶೀಲನೆ ನಡೆಸಿದಾಗ ತಾಲೂಕಿನ ಪಾಳ್ಯ ಹೋಬಳಿ ಕುಂಬಾರಹಳ್ಳಿ ಗ್ರಾಮದ ರವಿ ಎಂಬಾತ ಲಗೇಜ್‌ನೊಂದಿಗೆ ರಸ್ತೆಯಲ್ಲಿ ತೆರಳಿರುವುದು ತಿಳಿದುಬಂದಿದೆ. ಚಾಲಕನನ್ನು ವಿಚಾರಿಸಿದಾಗ, “ನಾನು ಯಾರನ್ನೂ ಅಪಹರಣಕ್ಕೆ ಯತ್ನಿಸಿಲ್ಲ. ರಸ್ತೆ ಸರಿ ಇಲ್ಲದ್ದರಿಂದ ನಿಧಾನಕ್ಕೆ ಚಲಿಸುತ್ತಿದ್ದೆ” ಎಂದು ತಿಳಿಸಿದ್ದಾನೆ. ಬಳಿಕ ಈ ವಿಚಾರವನ್ನು ಪೊಲೀಸರು, ಬಾಲಕಿ ಪೋಷಕರನ್ನು ಕರೆಸಿ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ‘ಶೋಲೆ’ @ 50: ಇವತ್ತಿಗೂ ಅದೇ ತಾಜಾತನ, ಅದೇ ಆಕರ್ಷಣೆ, ಅದೇ ಕುತೂಹಲ

ಬಾಲಕಿ ಸಣ್ಣಪುಟ್ಟ ವಿಚಾರಗಳಿಗೆ ಹೆದರುವುದು, ಮನೆಯಲ್ಲಿ ಯಾರಾದರೂ ಜೋರಾಗಿ ಮಾತನಾಡಿದರೆ ಕಿರುಚುವುದು ಮಾಡುತ್ತಾಳೆ. ವಾಹನ ನಿಧಾನಕ್ಕೆ ಚಲಿಸಿದ್ದರಿಂದ ಭ್ರಮೆಯಲ್ಲಿ ಅಪಹರಣವೆಂದು ಬಿಂಬಿಸಿದ್ದಾಳೆ. ಹಲವು ವರ್ಷಗಳಿಂದ ಆಕೆಗೆ ಚಿಕಿತ್ಸೆ ನಡೆಯುತ್ತಿದ್ದು ಆ ವಿಚಾರ ಶಿಕ್ಷಕರಿಗೆ ತಿಳಿದಿರಲಿಲ್ಲ. ಪೋಷಕರೇ ಅದನ್ನು ದೃಢಪಡಿಸಿದ್ದರಿಂದ ಎಲ್ಲರೂ ನಿರಾಳರಾದರು.

ಸ್ವಲ್ಪ ಸಮಯದ ಬಳಿಕ ಪೊಲೀಸರು ಆಕೆಯನ್ನು ಮತ್ತೆ ಪ್ರಶ್ನಿಸಿದಾಗ, “ರಾತ್ರಿ ಕನಸಿನಲ್ಲಿ ಅಪಹರಣವಾಗಿತ್ತು ಅದನ್ನೇ ನಿಜವೆಂದು ತಿಳಿದಿದ್ದೆ” ಎಂಬ ಹೇಳಿಕೆ ನೀಡಿದ್ದಾಳೆ. ಈ ಸಂಬಂಧ ಆಲೂರು ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...