ಹಾಸನ | ಜಾತಿ-ಆದಾಯ ದೃಢೀಕರಣ ನೀಡಲು ಕಂಬ ಸುತ್ತಿಸಿದ ಸಮಿತಿ; ₹2 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

Date:

ಹಾಸನ ಜಿಲ್ಲಾ ಜಾತಿ ಮತ್ತು ಆದಾಯ ದೃಢೀಕರಣ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ಕಾನೂನುಬಾಹಿರವಾಗಿ ವರ್ತಿಸಿದ್ದಕ್ಕಾಗಿ ಹೈಕೋರ್ಟ್ ₹2 ಲಕ್ಷ ದಂಡವನ್ನು ವಿಧಿಸಿದೆ.

ಸರ್ಕಾರಿ ಉದ್ಯೋಗಕ್ಕೆ ಆಯ್ಕೆಯಾದ ಅಭ್ಯರ್ಥಿಯೊಬ್ಬರ ಜಾತಿ ಮತ್ತು ಆದಾಯ ಪ್ರಮಾಣಪತ್ರಗಳನ್ನು ದೃಢೀಕರಿಸಲು ಒಂದು ವರ್ಷದವರೆಗೆ ಕಾಯಿಸಿದ್ದು, ಕಾನೂನಿಗೆ ವಿರುದ್ಧವಾಗಿ ದೃಢೀಕರಣ ನೀಡಲು ನಿರಾಕರಿಸಿರುವುದು ಮತ್ತು ಕೋರ್ಟ್‌ನ ಹಸ್ತಕ್ಷೇಪದ ನಂತರವೇ ಅವುಗಳನ್ನು ಅನುಮೋದಿಸಿದಕ್ಕಾಗಿ ಹೈಕೋರ್ಟ್‌ ದಂಡ ವಿಧಿಸಿದೆ.

ಕೋರ್ಟ್ ತನ್ನ ಆದೇಶದಲ್ಲಿ, “ಸಮಿತಿಯ ಸದಸ್ಯರು ಕಾನೂನನ್ನು ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸಿದ್ದಾರೆ. ಇದರ ಪರಿಣಾಮವಾಗಿ ಅರ್ಜಿದಾರರು ಅನಗತ್ಯ ಮೊಕದ್ದಮೆಗೆ ಒಳಗಾಗಿ 12 ತಿಂಗಳುಗಳ ಉದ್ಯೋಗದ ನಷ್ಟವನ್ನು ಅನುಭವಿಸಿದ್ದಾರೆ. ಆದ್ದರಿಂದ, ಸಮಿತಿಯವರಿಗೆ ದಂಡ ವಿಧಿಸಬೇಕು” ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಮುತ್ತುಲಕ್ಷ್ಮಿ ಬಿ ಎನ್ ಅವರು ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಅಂಗೀಕರಿಸುವಾಗ ಈ ಆದೇಶ ನೀಡಿದ್ದಾರೆ.

ಕಾನೂನಿನ ಉಲ್ಲಂಘನೆ ಮತ್ತು ಸಮಿತಿಯ ಟಿಪ್ಪಣಿ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಮುತ್ತುಲಕ್ಷ್ಮಿ ಬಿ ಎನ್ ಎಂಬುವವರು 2023ರ ಜನವರಿಯಲ್ಲಿ ಕ್ಯಾಟಗರಿ 3ಎ ಅಡಿಯಲ್ಲಿ ಸಹಾಯಕ ಸಾರ್ವಜನಿಕ ಪ್ರಾಸಿಕ್ಯೂಟರ್ ಹುದ್ದೆಗೆ ಆಯ್ಕೆಯಾಗಿದ್ದರು. ಆದರೆ, 2023ರ ಮೇ ವೇಳೆ ಸರ್ಕಾರಿ ಪೋರ್ಟಲ್‌ನಲ್ಲಿ ತಮ್ಮ ಮೂಲ ಪ್ರಮಾಣಪತ್ರಗಳ ಚಿತ್ರಗಳನ್ನು ಅಪ್‌ಲೋಡ್ ಮಾಡಲು ಸೂಚಿಸಲಾಗಿತ್ತು. ಆದರೂ, ಸಮಿತಿಯು ದೃಢೀಕರಣ ನೀಡಲು ನಿರಾಕರಿಸಿತು.

ಸರ್ವೋಚ್ಚ ನ್ಯಾಯಾಲಯದ ಕಾನೂನಿನ ನಿರ್ದೇಶನದಂತೆ, ಸಮಿತಿಯು ಅಂತಿಮವಾಗಿ “ಅರ್ಜಿದಾರರ ಪತಿಯ ಆದಾಯವು ಮಿತಿಯನ್ನು ಮೀರಿದ್ದರೂ, ಕೋರ್ಟ್‌ನ ನಿರ್ದೇಶನದ ಆಧಾರದ ಮೇಲೆ ಮಾತ್ರ ಮಾನ್ಯತಾ ಪ್ರಮಾಣಪತ್ರವನ್ನು ನೀಡಲಾಗಿದೆ” ಎನ್ನುವ ಟಿಪ್ಪಣಿಯೊಂದಿಗೆ ಪ್ರಮಾಣಪತ್ರವನ್ನು ಜಾರಿಗೊಳಿಸಿತ್ತು.

ಸಮಿತಿಯ ಈ ಟಿಪ್ಪಣಿಯನ್ನು, “ಸರ್ವೋಚ್ಚ ನ್ಯಾಯಾಲಯದಿಂದ ಸ್ಥಾಪಿತವಾದ ಕಾನೂನಿನ ಅಜ್ಞಾನ ಮಾತ್ರವಲ್ಲದೇ, ಉದ್ಧಟತನದಿಂದ ನ್ಯಾಯಾಲಯಕ್ಕೆ ಅವಮಾನ ಎಸಗಿದೆ. ಮುತುಲಕ್ಷ್ಮಿ ಅವರ ಅರ್ಜಿಯನ್ನು ಅಂಗೀಕರಿಸುವಾಗ, ಸಮಿತಿಯ ಸದಸ್ಯರು ಉದ್ದೇಶಪೂರ್ವಕವಾಗಿ ಕಾನೂನನ್ನು ನಿರ್ಲಕ್ಷಿಸಿದ್ದಾರೆ” ಎಂದು ತೀರ್ಪು ನೀಡಿದರು.

“ಸಮಿತಿಯ ಕಾನೂನುಬಾಹಿರ ಕೃತ್ಯದಿಂದಾಗಿ ಮುತ್ತುಲಕ್ಷ್ಮಿಯವರು ಅನಗತ್ಯ ಮೊಕದ್ದಮೆಗೆ ಒಳಗಾಗಿ 12 ತಿಂಗಳುಗಳ ಕಾಲ ಉದ್ಯೋಗದ ನಷ್ಟವನ್ನು ಅನುಭವಿಸಿದ್ದಾರೆ. ಆದ್ದರಿಂದ ಆ ಈ ವೇಳೆ ಆಯ್ಕೆಯಾಗಿದ್ದ ಇತರೆ ಅಭ್ಯರ್ಥಿಗಳು ಜೂನ್ 2024ರಲ್ಲಿ ಸೇವೆಗೆ ಸೇರಿದ್ದಾರೆ. ಇದೀಗ ಉದ್ಯೋಗನಷ್ಟ ಅನುಭವಿಸಿರುವ ಮುತ್ತುಲಕ್ಷ್ಮಿಯವರಿಗೆ ಆಗಿನ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ತಮ್ಮ ವೈಯಕ್ತಿಕ ಖರ್ಚಿನಿಂದ ₹2 ಲಕ್ಷ ದಂಡವನ್ನು ಪಾವತಿಸಬೇಕು” ಎಂದು ಕೋರ್ಟ್ ಆದೇಶಿಸಿದೆ.

ಹೈಕೋರ್ಟ್‌ನ ಈ ತೀರ್ಪು, ಕಾನೂನಿನ ಉಲ್ಲಂಘನೆ ಮತ್ತು ಅಧಿಕಾರದ ದುರುಪಯೋಗವನ್ನು ತಡೆಯಲು ಸರ್ಕಾರಿ ಸಮಿತಿಗಳು ಜವಾಬ್ದಾರಿಯುತವಾಗಿ ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕೆಂಬ ಸಂದೇಶವನ್ನು ಸಾರುತ್ತದೆ. ಈ ಘಟನೆಯಿಂದಾಗಿ, ಜಾತಿ ಮತ್ತು ಆದಾಯ ದೃಢೀಕರಣ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹಾಗೂ ಕಾನೂನಿನ ಪಾಲನೆಯ ಮಹತ್ವವನ್ನು ಒತ್ತಿಹೇಳಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...