ಹಾಸನ | ಅಲೆಮಾರಿ ಸಮುದಾಯದ ಜನರ ಮೇಲೆ ಸವರ್ಣೀಯರ ದೌರ್ಜನ್ಯ; ಪ್ರಕರಣ ದಾಖಲು

Date:

ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಬೆಟ್ಟದ ಸಾತೇನಹಳ್ಳಿಯಲ್ಲಿ ವಾಸಿಸುತ್ತಿರುವ ಅಲೆಮಾರಿ ಸುಡುಗಾಡುಸಿದ್ದ ಸಮುದಾಯದ ಕುಟುಂಬಗಳ ಮೇಲೆ ಸವರ್ಣೀಯರು ದೌರ್ಜನ್ಯ ಎಸಗುತ್ತಿದ್ದಾರೆ. ಆ ಕುಟುಂಬಗಳಿಗೆ ರಕ್ಷಣೆ ನೀಡಿ, ಮೂಲ ಸೌಕರ್ಯಗಳನ್ನು ಒದಗಿಸಬೇಕು. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಅಲೆಮಾರಿ ಬುಡಕಟ್ಟು ಮಹಾಸಭಾ ಒತ್ತಾಯಿಸಿದೆ.

ಕಳೆದ 18 ವರ್ಷಗಳಿಂದ ಸುಡುಗಾಡುಸಿದ್ದ ಸಮುದಾಯದ ಕುಟುಂಬಗಳು ಬೆಟ್ಟದ ಸಾತೇನಹಳ್ಳಿಯಲ್ಲಿ ವಾಸಿಸುತ್ತಿದ್ದಾರೆ. ಅವರ ಮೇಲೆ ಕಳೆದ 10 ವರ್ಷಗಳಿಂದ ನಿರಂತರ ದೌರ್ಜನ್ಯ, ದಬ್ಬಾಳಿಕೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.

ಕಳೆದ ತಿಂಗಳು (2024ರ ಜನವರಿ), ಸಮುದಾಯದ ಮೂವರ ಮೇಲೆ ಸವರ್ಣೀಯರು ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ಸಮುದಾಯದ ಮಂಜುಳ ಎಂಬವರು ಹೊಳೆನರಸೀಪುರ ಪೊಲೀಸ್‌ ಠಾಣೆಯಲ್ಲಿ ದೂರನ್ನೂ ದಾಖಲಿಸಿದ್ದಾರೆ. ಅವರ ದೂರಿನ ಆಧಾರದ ಮೇಲೆ ಐವರು ಆರೋಪಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜನವರಿ 28ರಂದು ಪ್ರಬಲ ಜಾತಿಯ ಡ್ರೈವರ್‍‌ ತುಂಗಾ ಎಂಬಾತ ತನ್ನ ಟ್ರ್ಯಾಕ್ಟರ್‌ನಿಂದ ಸುಡುಗಾಡುಸಿದ್ದ ಸಮುದಾಯದ ರಾಮಚಂದ್ರ ಎಂಬವರ ಬೈಕ್‌ಗೆ ಢಿಕ್ಕಿ ಹೊಡೆದಿದ್ದ. ಘಟನೆ ಸಂಬಂಧ ಪೊಲೀಸ್‌ ಠಾಣೆಗೆ ದೂರು ನೀಡದಂತೆ ತುಂಗಾ ಸೇರಿದಂತೆ ಐವರು ಪ್ರಬಲ ಜಾತಿಯವರು ರಾಮಚಂದ್ರ-ಮಂಜುಳ ಅವರ ಮನೆಯ ಬಳಿ ಹೋಗಿ ಬೆದರಿಕೆ ಹಾಕಿದ್ದರು ಎಂದು ಆರೋಪಿಸಲಾಗಿದೆ.

ಘಟನೆ ಬಗ್ಗೆ ದೂರು ನೀಡಿರುವ ಮಂಜುಳ, “ನಮ್ಮ ಮನೆ ಬಳಿ ಬಂದಿದ್ದ ಪ್ರಬಲ ಜಾತಿ ಐವರು ನಮಗೆ ಬೆದರಿಕೆ ಹಾಕಿದ್ದಾರೆ. ಅಪಘಾತ ಸಂಬಂಧ ದೂರು ನೀಡಿದರೆ, ನಿಮ್ಮನ್ನು ಕೊಲೆ ಮಾಡುತ್ತೇವೆಂದು ಬೆದರಿಕೆ ಹಾಕಿದ್ದಾರೆ. ತನ್ನನ್ನು ಎಳೆದಾಡಿ, ನೆಲಕ್ಕೆ ಬೀಳಿಸಿ ಹಲ್ಲೆ ಮಾಡಿದ್ದಾರೆ. ತನ್ನ ಪತಿ ರಾಮಚಂದ್ರ ಮತ್ತು ಸಮುದಾಯದ ಮಂಜಣ್ಣ ಮೇಲೂ ಹಲ್ಲೆ ಮಾಡಿದ್ದಾರೆ. ಅವಾಚ್ಯ ಶಬ್ದಗಳಿಂದ ಜಾತಿ ನಿಂದನೆ ಮಾಡಿದ್ದಾರೆ. ಗುಡಿಸಲುಗಳಿಗೆ ಪೆಟ್ರೋಲ್ ಸುರಿದು, ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ್ದಾರೆ” ಎಂದು ಆರೋಪಿಸಿದ್ದಾರೆ.

ಮಂಜುಳ ಅವರ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿ ಡ್ರೈವರ್ ತುಂಗಾ, ಮಹೇಶ, ಅಶೋಕ, ನಾಗೇಶ ಮತ್ತು ಮತ್ತೊಬ್ಬ ಮಹೇಶ ಎಂಬವರ ವಿರುದ್ಧ ಐಪಿಸಿ ಸೆಕ್ಷನ್‌ 354, 324, 323, 504, 506, 149 ಹಾಗೂ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅಲೆಮಾರಿ ಬುಡಕಟ್ಟು ಮಹಾಸಭಾಕ್ಕೆ ಪತ್ರ

ಗ್ರಾಮದಲ್ಲಿ ಸುಡುಗಾಡುಸಿದ್ದ ಸಮುದಾಯದ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಬಗ್ಗೆ ಅಲೆಮಾರಿ ಬುಡಕಟ್ಟು ಮಹಾಸಭಾಕ್ಕೆ ಕರ್ನಾಟಕ ರಾಜ್ಯ ಅಲೆಮಾರಿ ಬುಡಕಟ್ಟು ಮಹಾಸಭಾದ ಅಧ್ಯಕ್ಷ ಹನುಮಂತ ಬಿ.ಎಲ್‌ ಪತ್ರ ಬರೆದಿದ್ದಾರೆ. “ಬೆಟ್ಟದ ಸಾತೇನಹಳ್ಳಿ ಗ್ರಾಮದಲ್ಲಿ ಸುಮಾರು 18 ವರ್ಷಗಳಿಂದ ವಾಸ ಮಾಡುತ್ತಿರುವ 12 ಸುಡುಗಾಡುಸಿದ್ದ ಕುಟುಂಬಗಳ ಮೇಲೆ ಬೆಟ್ಟದ ಸಾತೇನಹಳ್ಳಿಯ ಕೆಲ ಜಾತಿವಾದಿ, ಸವರ್ಣಿಯರು ದೌರ್ಜನ್ಯ ಎಸಗುತ್ತಿದ್ದಾರೆ. ಈ ಕುಟುಂಬಗಳಿಗೆ ಮನೆ ನಿರ್ಮಾಣಕ್ಕಾಗಿ ಸರ್ಕಾರ 2020ರಲ್ಲಿ ಅರ್ಧ ಎಕರೆ ಜಾಗ ಮಂಜೂರು ಮಾಡಿದೆ. ಆದರೆ, ಇದುವರೆಗೂ ಅವರಿಗೆ ಮೂಲ ಸೌಕರ್ಯಗಳನ್ನು ನೀಡದಂತೆ ಕೆಲ ರಾಜಕೀಯ ವ್ಯಕ್ತಿಗಳು ತಡೆದಿದ್ದಾರೆ” ಎಂದು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಜಾತಿ ದೌರ್ಜನ್ಯ | ದಲಿತ ಮಹಿಳೆಯರಿಗೆ ತೆಂಗಿನ ಚಿಪ್ಪಿನಲ್ಲಿ ಚಹಾ ಕೊಟ್ಟ ಸವರ್ಣೀಯರು

“ಈ ಕುಟುಂಬಗಳನ್ನು ಗ್ರಾಮದಿಂದ ಖಾಲಿ ಮಾಡಿಸಲು ಗ್ರಾಮದ ಸವರ್ಣೀಯರು ಯತ್ನಿಸುತ್ತಿದ್ದಾರೆ. ಇದಕ್ಕೆ, ರಾಜಕೀಯ ಪ್ರಭಾವಿಗಳ ಬೆಂಬಲವೂ ಇದೆ. ಹೀಗಾಗಿ, ಪದೇ ಪದೇ ಮಹಿಳೆಯರು, ಮಕ್ಕಳು ಏನ್ನದೇ ಸಮುದಾಯದ ಎಲ್ಲರ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ. ಸಮುದಾಯದ ಜನರನ್ನು ಕಳ್ಳರಂತೆ ನೋಡಲಾಗುತ್ತಿದೆ. ದೌರ್ಜನ್ಯ ಎಸಗುತ್ತಿರುವ ಆರೋಪಿಗಳ ಮೇಲೆ ಕ್ರಮ ಕೈಗೊಳ್ಳಬೇಕು. ಅಲೆಮಾರಿ ಸಮುದಾಯದ ಕುಟುಂಬಗಳಿಗೆ ರಕ್ಷಣೆ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...