ಹಾಸನ | ಬಿಜೆಪಿ-ಜೆಡಿಎಸ್‌ ಮೈತ್ರಿಯ ಸುಳಿವು ಕೊಟ್ಟ ಪ್ರೀತಂ ಗೌಡ

Date:

  • ʼಎಲ್ಲ ನದಿ ನೀರು ಹರಿಯೋದು ಸಮುದ್ರಕ್ಕೇನೆ, ಜೆಡಿಎಸ್‌ನವರು ಬರೋದು ನಮ್ಮತ್ರನೆʼ
  • ಬೇಜವಾಬ್ದಾರಿ ಹೇಳಿಕೆಗಳು ಖಂಡನೀಯ ಎಂದ ಅಶ್ವತ್ಥನಾರಾಯಣ

ಹಾಸನ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಪ್ರೀತಂ ಗೌಡ ಪ್ರಚಾರದ ವೇಳೆ ಹೊಸ ಬಾಂಬ್ ಸಿಡಿಸಿದ್ದು, ಜೆಡಿಎಸ್‌ಗೆ ಮತ ಹಾಕಿದ್ರೆ ನಮಗೇ ಮತ ಹಾಕಿದಂತೆ ಎಂದಿದ್ದಾರೆ.

“ಜನತಾದಳಕ್ಕೆ ಮತ ಹಾಕಿದರೂ ಬಿಜೆಪಿಗೆ ಮತ ಹಾಕಿದ ಲೆಕ್ಕಾನೆ. ದೇವೇಗೌಡರು, ಮೋದಿ ಸಾಹೇಬ್ರು ಮಾತನಾಡಿಕೊಂಡಿದ್ದಾರೆ. ಏಕೆಂದರೆ, ಜೆಡಿಎಸ್ 20 ಇಲ್ಲ 25 ಸೀಟು ಅಷ್ಟೇ ಪಡೆಯೋದು. ಎಲ್ಲ ನದಿ ನೀರು ಹರಿಯೋದು ಸಮುದ್ರಕ್ಕೇನೆ. ಹಾಗೆಯೇ ಜೆಡಿಎಸ್ ಅವರು ಬರೋದು ನಮ್ಮತ್ರಕ್ಕೆ. ನೀವು ಜೆಡಿಎಸ್‌ಗೆ ವೋಟು ಹಾಕಿದರೂ ನನ್ನ ಹತ್ರಕ್ಕೇ ಬರಬೇಕು” ಎನ್ನುವ ಮೂಲಕ ಬಿಜೆಪಿ-ಜೆಡಿಎಸ್‌ ನಡುವೆ ಮೈತ್ರಿ ಒಪ್ಪಂದ ನಡೆಯುತ್ತಿರುವ ಬಗ್ಗೆ ಸುಳಿವು ನೀಡಿದ್ದಾರೆ. ಶಾಸಕರ ಮಾತಿನ ವಿಡೀಯೊ ಎಲ್ಲಡೆ ಹರಿದಾಡುತ್ತಿದೆ.

ಈ ಸುದ್ದಿ ಓದಿದ್ದೀರಾ? ಹಾಸನ | ದೇವರ ಮುಂದೆ ಮಂಗಳಾರತಿ ಮಾಡಿ ನನಗೆ ಮತ ನೀಡುವುದಾಗಿ ಮಾತು ಕೊಡಿ; ಪ್ರೀತಂ ಗೌಡ ಒತ್ತಾಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರೀತಂ ಗೌಡರ ಮಾತುಗಳಿಗೆ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಪ್ರತಿಕ್ರಿಯಿಸಿದ್ದು, “ಬೇಜವಾಬ್ದಾರಿ ಹೇಳಿಕೆಗಳು ಖಂಡನೀಯ. ಇವೆಲ್ಲ ಸುಳ್ಳು ಹೇಳಿಕೆಗಳು, ಯಾರೂ ಕೂಡ ಯಾರೊಂದಿಗೂ ಮಾತನಾಡಿಲ್ಲ. ಜೆಡಿಎಸ್‌ ನಮ್ಮ ಪ್ರತಿಸ್ಪರ್ಧಿ, ಇದರಲ್ಲಿ ಯಾವುದೇ ಒಪ್ಪಂದ ಇಲ್ಲ” ಎಂದು ಹೇಳಿದ್ದಾರೆ.

“ಕಾಂಗ್ರೆಸ್‌ ಮತ್ತು ಜೆಡಿಎಸ್‌ ಬಿಜೆಪಿಯ ಪ್ರತಿಸ್ಪರ್ಧಿಗಳು. ಅವುಗಳನ್ನು ಸಂಪೂರ್ಣವಾಗಿ ವಿರೋಧಿಸುತ್ತೇವೆ. ಯಾವುದೇ ಪಕ್ಷಗಳೊಂದಿಗೂ ಅಡ್ಜಸ್ಟ್‌ಮೆಂಟ್‌ ಇಲ್ಲ. ಯಾವುದೇ ಒಪ್ಪಂದ ಇಲ್ಲ. ಎಲ್ಲ ಕ್ಷೇತ್ರದಲ್ಲಿಯೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದೇವೆ. ಈ ರೀತಿಯ ಬೇಜವಾಬ್ದಾರಿ ಹೇಳಿಕೆಗಳನ್ನು ಎಲ್ಲಿಯೂ ನೀಡಬಾರದು” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...