ಹಾಸನ | ಮದುವೆಗೆ ಬಂದಿದ್ದ ಯುವತಿ ನಾಪತ್ತೆ

Date:

ಮದುವೆ ಕಾರ್ಯಕ್ರಮಕ್ಕೆ ಬಂದಿದ್ದ 29 ವರ್ಷದ ಮಹಿಳೆ ನಿಗೂಢವಾಗಿ ಕಣ್ಮರೆಯಾಗಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನಲ್ಲಿ ನಡೆದಿದೆ.

ಹಾಸನ ತಾಲ್ಲೂಕಿನ ಕಲ್ಕೆರೆ ಗ್ರಾಮದ ಬಳಿ ಮಹಿಳೆಯ ಒಳ ಉಡುಪು, ಚಪ್ಪಲಿ ಹಾಗೂ ವ್ಯಾನಿಟಿ ಬ್ಯಾಗ್‌ ಪತ್ತೆಯಾಗಿದ್ದು, ಸಮೀಪದಲ್ಲಿರುವ ಕೆರೆಯಲ್ಲಿ ಶವ ಎಸೆದಿರುವ ಶಂಕೆಯ ಮೇರೆಗೆ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಮಹಿಳೆ ಮೂಲತಃ ಬೇಲೂರು ತಾಲೂಕಿನವರಾಗಿದ್ದು, ತುಮಕೂರು ಜಿಲ್ಲೆ ಕುಣಿಗಲ್ ಮೂಲದ ರುದ್ರೇಶ್ ಅವರೊಂದಿಗೆ ವಿವಾಹವಾಗಿದ್ದ ಪ್ರಿಯಾಂಕ (29), ಫೆ.12 ರಂದು ಚಿಕ್ಕಮಗಳೂರಿನ ಮದುವೆ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಅದೇ ದಿನ ಸಂಜೆ 7.30ರ ವೇಳೆಗೆ ಕುಟುಂಬ ಸದಸ್ಯರಿಗೆ ಕರೆ ಮಾಡಿದ ಪ್ರಿಯಾಂಕ, ಪರಿಚಯಸ್ಥರ ಜೊತೆ ಇರುವುದಾಗಿ ತಿಳಿಸಿ ಫೋನ್ ಕಟ್ ಮಾಡಿದ್ದರು. ರಾತ್ರಿ 8 ಗಂಟೆಯ ಬಳಿಕ ಮೊಬೈಲ್‌ ಸ್ವಿಚ್‌ ಆಫ್‌ ಆಗಿದ್ದು, ನಂತರದಿಂದ ಅವರ ಸಂಪರ್ಕ ಕಡಿತವಾಗಿದೆ. ಪ್ರಿಯಾಂಕ ಸುಮಾರು 30 ಲಕ್ಷ ರೂ. ಮೌಲ್ಯದ ಒಡವೆ ಧರಿಸಿದ್ದರೆಂದು ಕುಟುಂಬಸ್ಥರು ತಿಳಿಸಿದ್ದಾರೆ. ಒಡವೆಗಾಗಿ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಸಾಧ್ಯತೆ ಇರುವುದಾಗಿ ಕುಟುಂಬದವರು ಶಂಕೆ ವ್ಯಕ್ತಪಡಿಸಿದ್ದಾರೆ.

ಕುಟುಂಬಸ್ಥರು ನೀಡಿದ ಮಾಹಿತಿಯಂತೆ, ಫೆ. 12ರ ರಾತ್ರಿ ಪ್ರಿಯಾಂಕ ಬೇಲೂರು ಬಸ್ ನಿಲ್ದಾಣದಿಂದ ನಿಗೂಢವಾಗಿ ಕಣ್ಮರೆಯಾಗಿದ್ದಾರೆ. ತಕ್ಷಣವೇ ಅರೇಹಳ್ಳಿ ಹಾಗೂ ಬೇಲೂರು ಪೊಲೀಸರಿಗೆ ದೂರು ನೀಡಲು ಮುಂದಾದರೂ, ದೂರು ಸ್ವೀಕರಿಸಿ ತನಿಖೆ ಆರಂಭಿಸಲು ವಿಳಂಬವಾಯಿತು ಎಂಬ ಆರೋಪ ಕೇಳಿಬಂದಿದೆ. “ನಿನ್ನೆ ದೂರು ಸ್ವೀಕರಿಸಿ ತಕ್ಷಣ ಹುಡುಕಾಟ ನಡೆಸಿದ್ದರೆ ನಮ್ಮ ಮಗಳು ಬದುಕಿ ಸಿಗುತ್ತಿದ್ದಳೋ ಏನೋ,” ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿದ್ದೀರಾ?ಹಾಸನ | ಸೈಟ್ ಹೋರಾಟ: ನ್ಯಾಯಾಲಯ ಮಹತ್ವದ ಆದೇಶ

ಘಟನಾ ಸ್ಥಳಕ್ಕೆ ಹಾಸನ ಜಿಲ್ಲಾ ಪೊಲೀಸ್‌ ಅಧೀಕ್ಷಕಿ ಶುಭಾನ್ವಿತಾ ಭೇಟಿ ನೀಡಿ ಖುದ್ದು ಪರಿಶೀಲನೆ ನಡೆಸಿದರು. ಕುಟುಂಬಸ್ಥರ ಆಕ್ರೋಶಕ್ಕೆ ಸ್ಪಂದಿಸಿದ ಅವರು, “ತಪ್ಪು ನಡೆದಿದ್ದರೆ ಖಂಡಿತ ಕಠಿಣ ಕ್ರಮ ಕೈಗೊಳ್ಳುತ್ತೇನೆ. ಮಹಿಳೆ ಮೃತಪಟ್ಟಿಲ್ಲ ಎನ್ನುವುದು ನಮ್ಮ ನಂಬಿಕೆ. ತನಿಖೆಗೆ ಸಹಕಾರ ನೀಡಿ,” ಎಂದು ಭರವಸೆ ನೀಡಿದ್ದಾರೆ. ಸ್ಥಳದ ಪಕ್ಕದಲ್ಲಿರುವ ಕೆರೆಯಲ್ಲಿ ಶವ ಎಸೆದಿರುವ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿದರು. ಆದರೆ ಇದುವರೆಗೆ ಯಾವುದೇ ಮೃತದೇಹ ಪತ್ತೆಯಾಗಿಲ್ಲ. ಬಳಿಕ ಪೊಲೀಸ್‌ ಪ್ರೋಣ್‌ ತಂಡ ಆಗಮಿಸಿ ಕೆರೆಯ ಸುತ್ತಮುತ್ತ ಹಾಗೂ ಬಟ್ಟೆ ಪತ್ತೆಯಾದ ಪ್ರದೇಶದಲ್ಲಿ ವಿಸ್ತ್ರತ ಹುಡುಕಾಟ ಕೈಗೊಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...