ಕಾರ್ಯಾಚರಣೆಯಲ್ಲಿ ದಾರುಣ ಅಂತ್ಯ ಕಂಡ ಅರ್ಜುನ; ಕಂಬನಿ ಮಿಡಿದ ಕರ್ನಾಟಕ

Date:

ಕಾಡಾನೆಯೊಂದನ್ನು ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ 8 ಬಾರಿ ಅಂಬಾರಿ ಹೊತ್ತಿದ್ದ ‘ಅರ್ಜುನ’ ಆನೆ ದಾರುಣವಾಗಿ ಸಾವನ್ನಪ್ಪಿದೆ. ಒಂಟಿ ಸಲಗ ಹೊಟ್ಟಿಗೆ ತಿವಿದಿದ್ದರಿಂದ ತೀವ್ರವಾಗಿ ಗಾಯಗೊಂಡಿದ್ದ ಅರ್ಜುನ ಸೋಮವಾರ ಕೊನೆಯುಸಿರೆಳೆದಿದೆ. ಆನೆಯ ಸಾವಿಗೆ ಕರ್ನಾಟಕ ಕಂಬನಿ ಮಿಡಿದಿದೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಕಾಡಾನೆಯೊಂದರ ಉಪಟಳ ಹೆಚ್ಚಾಗಿತ್ತು. ಅದನ್ನು ಸೆಳೆ ಹಿಡಿಯಲು ನಾಲ್ಕು ಸಾಕಾನೆಗಳೊಂದಿಗೆ ತಾಲೂಕಿನ ಬಾಳೆಕೆರೆ ಅರಣ್ಯ ಪ್ರದೇಶದಲ್ಲಿ ಸೋಮವಾರ ಕಾರ್ಯಾಚರಣೆ ನಡೆಸಲಾಗಿತ್ತು. ನಾಲ್ಕು ಸಾಕಾನೆಗಳಿಂದಲೂ ಕಾಡಾನೆಯನ್ನು ಹಿಮ್ಮೆಟ್ಟಲು ಸಾಧ್ಯವಾಗಲಿಲ್ಲ.

ಈ ವೇಳೆ, ಮೂರು ಸಾಕಾನೆಗಳು ಹಿಂದೆ ಸರಿದಿವೆ. ಆದರೆ, ಅರ್ಜುನ ಕಾರ್ಯಾಚರಣೆಯಲ್ಲಿ ಮುಂದೆ ಹೋಗಿದೆ. ಕಾಡಾನೆ ಅರ್ಜುನನ ಮೇಲೆ ನಡೆದಿದೆ. ಅರ್ಜುನನನ್ನು ಮುನ್ನಡೆಸುತ್ತಿದ್ದ ಮಾವುತ ಕೆಳಗಿಳಿದು ಓಡಿ ಹೋಗಿದ್ದಾರೆ. ಗಾಯಗೊಂಡಿದ್ದ ಆನೆ ಮೃತಪಟ್ಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅರ್ಜುನನ ಸಾವಿಗೆ ಹಲವಾರು ಮಂದಿ ಕಂಬನಿ ಮಿಡಿದಿದ್ದಾರೆ. ಅರ್ಜುನನನ್ನು ನೆನೆದಿರುವ ನಟ ದರ್ಶನ್, “೮ ಬಾರಿ ದಸರಾ ಅಂಬಾರಿ ಹೊತ್ತು ನಾಡಿನ ಜನಮನ ಗೆದ್ದಿದ್ದ ೬೪ ವರ್ಷದ ‘ಅರ್ಜುನ’ ಇಂದು ಕಾಡಾನೆಗಳ ಕಾಳಗದಲ್ಲಿ ಸಾವನ್ನಪ್ಪಿರುವುದು ವಿಷಾದದ ಸಂಗತಿ. ಅರ್ಜುನನ ಗಜಗಾಂಭೀರ್ಯಕ್ಕೆ ಅವನೇ ಸಾಟಿ!
ಓಂ ಶಾಂತಿ!” ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಅರ್ಜನನನ್ನು ಸ್ಮರಿಸಿರುವ ಅರಣ್ಯ ಸಚಿವ ಈಶ್ವರ್‌ ಖಂಡ್ರೆ, “ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಹಲವು ಬಾರಿ ಅಂಬಾರಿ ಹೊತ್ತಿದ್ದ 64 ವರ್ಷದ ಅರ್ಜುನ ಆನೆಯ ಸಾವಿನ ಸುದ್ದಿ ತಿಳಿದು ಬಹಳ ದುಃಖವಾಗಿದೆ.
ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಪುಂಡಾನೆ ಸೆರೆ ಕಾರ್ಯಾಚರಣೆಯ ವೇಳೆ ದುರ್ಘಟನೆ ಸಂಭವಿಸಿದ್ದು, ಮದಗಜವೊಂದು, ಅರ್ಜುನನ ಮೇಲೆ ದಾಳಿ ಮಾಡಿ, ತನ್ನ ದಂತದಿಂದ ಚುಚ್ಚಿ ಘಾಸಿಗೊಳಿಸಿ, ಸಾವಿಗೆ ಕಾರಣವಾಗಿರುವುದು ಅತ್ಯಂತ ದುರಾದೃಷ್ಟಕರ. ಕಾರ್ಯಾಚರಣೆಯಲ್ಲಿ ಪುಂಡಾನೆ ರೌದ್ರಾವತಾರ ತಾಳಿ, ಅರ್ಜುನನ ಮೇಲೆ ದಾಳಿ ಮಾಡಿದೆ. ಸಿಬ್ಬಂದಿ ಗಾಳಿಯಲ್ಲಿ ಗುಂಡು ಹಾರಿಸಿದರೂ ಜಗ್ಗದೆ ದಾಳಿ ಮಾಡಿದೆ. ಮಾವುತ ಮತ್ತು ಪಶುವೈದ್ಯರು ಕೂದಲೆಳೆಯ ಅಂತರದಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಳಿದ ಮೂರು ಆನೆಗಳು ಹಿಮ್ಮೆಟ್ಟಿವೆ. ಆದರೆ ಅರ್ಜುನ ಪುಂಡಾನೆಯೊಂದಿಗೆ ಏಕಾಂಗಿಯಾಗಿ ಹೋರಾಡುವಾಗ ಈ ದುರಂತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅರ್ಜುನ ಆನೆ ಈ ಹಿಂದೆ ಹಲವು ಆನೆ ಸೆರೆ ಕಾರ್ಯಾಚರಣೆಯಲ್ಲಿ ಭಾಗಿಯಾದ ಅನುಭವ ಹೊಂದಿತ್ತು ಮತ್ತು ತರಬೇತಿ ಕೂಡಾ ಪಡೆದಿತ್ತು.
ತಾಯಿ ಶ್ರೀ ಚಾಮುಂಡೇಶ್ವರಿಯು ಅರ್ಜುನನ ಆತ್ಮಕ್ಕೆ ಶಾಂತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಹೇಳಿದ್ದಾರೆ.

arjuna

ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, “ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಎಂಟು ಬಾರಿ ಅಂಬಾರಿ‌ ಹೊತ್ತಿದ್ದ ಅರ್ಜುನ ಆನೆ, ಸಕಲೇಶಪುರ ತಾಲೂಕಿನ ಯಸಳೂರು ವಲಯದ ಬಾಳೆಕೆರೆ ಫಾರೆಸ್ಟ್‌ನಲ್ಲಿ ನಡೆದ ಕಾಡಾನೆ ಕಾರ್ಯಾಚರಣೆಯಲ್ಲಿ ಸಾವಿಗೀಡಾದ ಸಂಗತಿ ತಿಳಿದು ದುಃಖವಾಗಿದೆ. ಒಂದು ಕಾಲದಲ್ಲಿ ಮೈಸೂರು ದಸರಾದ ಕೇಂದ್ರಬಿಂದುವಾಗಿದ್ದ ಅರ್ಜುನ ನಮ್ಮೆಲ್ಲರ ಹೃದಯದಲ್ಲಿ ಮರೆಯಲಾರದ ನೆನಪುಗಳನ್ನು ಬಿಟ್ಟುಹೋಗಿದ್ದಾನೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡ ಅರ್ಜನನ ಸಾವಿಗೆ ಕಂಬನಿ ಮಿಡಿದಿದ್ದು, “ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಯಸಳೂರು ಬಳಿ ಕಾಡಾನೆಗಳ ಸೆರೆಗೆ ನಡೆಸಿದ ಕಾರ್ಯಾಚರಣೆ ವೇಳೆ ಒಂಟಿ ಸಲಗದ ದಾಳಿಗೆ ತುತ್ತಾಗಿ ಸಾಕಾನೆ ಅರ್ಜುನ ವೀರಮರಣ ಹೊಂದಿದ ಘಟನೆ ತಿಳಿದು ಬಹಳ ನೋವುಂಟಾಯಿತು. ದಸರಾ ಅಂಬಾರಿಯನ್ನು ಹೊತ್ತು ಸಾಗಿದ್ದ ಅರ್ಜುನ ಇನ್ನು ನೆನಪಷ್ಟೇ. ಸ್ಥಳಾಂತರ ಕಾರ್ಯಾಚರಣೆ ವೇಳೆ ಸಾಕಾನೆಗಳು-ಕಾಡಾನೆಗಳ ನಡುವಿನ ಭೀಕರ ಕಾಳಗದ ವೇಳೆ ಇತರೆ ಸಾಕಾನೆಗಳು ಪಲಾಯನ ಮಾಡಿದರೆ, ಅರ್ಜುನ ಮಾತ್ರ ಒಂಟಿ ಸಲಗದ ಜತೆ ವಿರೋಚಿತವಾಗಿ ಸೆಣಸಾಡಿತ್ತು. ಇಂಥ ವಿರೋಚಿತ ಆನೆ ಸಾವನ್ನಪ್ಪಿರುವುದು ಅತ್ಯಂತ ದುಃಖದ ಸಂಗತಿ. ಕಾಡಾನೆಗಳನ್ನು ಸೆರೆ ಹಿಡಿಯುವಾಗ ತಮ್ಮ ಪ್ರಾಣ ರಕ್ಷಣೆಯ ಜತೆಗೆ ವನ್ಯಮೃಗಗಳ ಜೀವಕ್ಕೆ ಹಾನಿ ಆಗದಂತೆ ಅರಣ್ಯ ಸಿಬ್ಬಂದಿ ಮುನ್ನೆಚ್ಚರಿಕೆ ವಹಿಸಲಿ. ಅರ್ಜುನನ ಆತ್ಮಕ್ಕೆ ಚಿರಶಾಂತಿ ಸಿಗಲಿ. ಆ ತಾಯಿ ಚಾಮುಂಡೇಶ್ವರಿ ಸದ್ಗತಿ ಕರುಣಿಸಲಿ” ಎಂದಿದ್ದಾರೆ.

“ಮೈಸೂರು ದಸರಾದಲ್ಲಿ 8 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಗಜರಾಜ ಅರ್ಜುನ ಆನೆಗಳ ಕಾರ್ಯಾಚರಣೆ ವೇಳೆ ಮರಣ ಹೊಂದಿರುವ ಸುದ್ದಿ ತೀವ್ರ ನೋವುಂಟು ಮಾಡಿದೆ. ಅರ್ಜುನನ ಆತ್ಮಕ್ಕೆ ಶಾಂತಿ ಕರುಣಿಸಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...