ರಸ್ತೆ ವಿಭಜಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಯುವಕ ಸ್ಥಳದಲ್ಲೇ ಸಾವು, ಮತ್ತೋರ್ವ ಯುವಕ ಗಂಭೀರ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನಲ್ಲಿ ನಡೆದಿದೆ.
ಅಪಘಾತ ಸ್ಥಳದಲ್ಲೇ ಮೃತಪಟ್ಟ ಯುವಕ ಕೊಪ್ಪಲು ಗ್ರಾಮದ ಸಂದೀಪ್ (23), ಎಂಬಾತ.ಇನ್ನೊಬ್ಬ ಯುವಕ ಚಾಗಹಳ್ಳಿ ರಘು ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾನೆ. ಯುಗಾದಿ ಹಬ್ಬದ ದಿನವಾದ ಗುರುವಾರ ರಾತ್ರಿ ಇಬ್ಬರು ಯುವಕರು ಬೈಕ್ ನಲ್ಲಿ ಊರಿಗೆ ತೆರಳುತ್ತಿದ್ದರು. ಮೈಸೂರು ರಸ್ತೆಯಲ್ಲಿರುವ ಫಾರೆಸ್ಟ್ ಆಫೀಸ್ ಎದುರು ನಿಯಂತ್ರಣ ತಪ್ಪಿ ಬೈಕ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.
ಇದನ್ನೂ ಓದಿದ್ದೀರಾ?ಹಾಸನ | ಹಣ ವಿಚಾರ: ಯುವಕನ ಹತ್ಯೆ
ಪ್ರಾಥಮಿಕ ಚಿಕಿತ್ಸೆಗಾಗಿ ಹಾಸನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಹಾಸನದ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಐಸಿಯುನಲ್ಲಿ ಚಿಕಿತ್ಸೆ ಪಡೆಯಲಾಗುತ್ತಿದೆ. ಈ ಘಟನೆ ಕುರಿತು ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.





