ಹಾಸನ | ಸೇಬು, ಮೋಸಂಬಿ ಹಣ್ಣಿನೊಳಗೆ ಗಾಂಜಾ; ಜೈಲಿನೊಳಗೆ ಎಸೆಯಲು ಯತ್ನಿಸಿದ ಇಬ್ಬರ ಬಂಧನ

Date:

ಜೈಲಿನಲ್ಲಿದ್ದ ಕೈದಿಗಳ ಬಳಿ ಮಾದಕ ವಸ್ತುಗಳನ್ನು ಪತ್ತೆಹಚ್ಚಿದ್ದ ಪೊಲೀಸರು ಇದೀಗ ಜೈಲಿನೊಳಗೆ ಮಾದಕ ವಸ್ತು ಹೋಗುವುದನ್ನೇ ತಡೆಯಲು ಮುಂದಾಗಿದ್ದು, ಹಣ್ಣುಗಳೊಳಗೆ ಗಾಂಜಾ ಇಟ್ಟು ಜೈಲಿನ ಕಾಂಪೌಂಡ್ ಒಳಗೆ ಎಸೆಯಲು ಯತ್ನಿಸಿದ ಇಬ್ಬರು ವ್ಯಕ್ತಿಗಳನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ.

ಸೇಬು ಹಾಗೂ ಮೋಸಂಬಿ ಹಣ್ಣಿನ ಒಳಗೆ ಗಾಂಜಾ ಸೊಪ್ಪಿನ ಪ್ಯಾಕೆಟ್‌ಗಳನ್ನಿಟ್ಟು ಅವುಗಳಿಗೆ ಸ್ಟಿಕ್ಕರ್‌ನ್ನು ಅಂಟಿಸಿ, ಜೈಲಿನ ಕಾಂಪೌಂಟ್‌ ಒಳಗಡೆಗೆ ಎಸೆಯಲು ಹೋಗುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ, ತನಿಖೆ ನಡೆಸುತ್ತಿದ್ದಾರೆ. ಅಂಬೇಡ್ಕರ್ ನಗರದ ತರಕಾರಿ ವ್ಯಾಪಾರಿ ತಬ್ರೇಜ್ (28), ಪೆನ್‌ಷನ್ ಮೊಹಲ್ಲಾದ ಗುಜರಿ ಅಂಗಡಿ ವ್ಯಾಪಾರಿ ವಾಸಿಂ (21) ಬಂಧಿತ ಆರೋಪಿಗಳು.

ಈ ಸುದ್ದಿ ಓದಿದ್ದೀರಾ? ಸೌಜನ್ಯ ಪ್ರಕರಣ | ಮರು ತನಿಖೆಗೆ ಆಗ್ರಹಿಸಿ ಬಿಜೆಪಿ ನಿಯೋಗದಿಂದ ರಾಜ್ಯಪಾಲ, ಮುಖ್ಯಮಂತ್ರಿಗೆ ಮನವಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾನುವಾರ ಮಧ್ಯಾಹ್ನದ ವೇಳೆಯಲ್ಲಿ ಸೇಬು ಹಾಗು ಮೂಸಂಬಿ ಹಣ್ಣನ್ನು ಕೊರೆದು ಅದರೊಳಗೆ ಗಾಂಜಾಸೊಪ್ಪನ್ನು ಇಟ್ಟು, ಜೈಲಿನ ಹಿಂದಿಯಿಂದ ಕಾಂಪೌಂಡ್ ಒಳಗೆ ಎಸೆಯಲು ಇಬ್ಬರು ಆರೋಪಿಗಳು ಹೊಂಚು ಹಾಕುತ್ತ ಜೈಲು ಸಮೀಪದ ನಗರದ ಹಳೇಬಸವಣ್ಣ ವೃತ್ತದ ಬಳಿ ಓಡಾಡುತ್ತಿದ್ದರು. ಈ ವೇಳೆ ನಗರ ಠಾಣೆ ಪಿಎಎಸ್‌ಐ ರೇವಣ್ಣ ಹಾಗೂ ಸಿಬ್ಬಂದಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದವರನ್ನು ವಿಚಾರಿಸಿ ಅವರ ಬಳಿಯಿದ್ದ ಬ್ಯಾಗ್ ಪರಿಶೀಲಿಸಿದಾಗ ಗಾಂಜಾ ತುಂಬಿದ್ದ 3 ಸೇಬು ಮತ್ತು 2 ಮೋಸುಂಬಿ ಹಣ್ಣು ಪತ್ತೆಯಾಗಿವೆ. ಈ ಬಗ್ಗೆ ವಿಚಾರಣೆ ನಡೆಸಿದಾಗ ಜೈಲ್‌ನೊಳಗೆ ಎಸೆಯಲು ಯತ್ನಿಸುತ್ತಿದ್ದುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ. ಗಾಂಜಾ ವಶಪಡಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ ಮಣ್ಣಿನ ಹೆಣ್ಣು ದನಿಗಳು | ಕವಯಿತ್ರಿ, ಅನುವಾದಕಿ, ಕಲಾವಿದೆ- ಎಂ.ಆರ್. ಕಮಲ

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಹಾಸನ | ಫ್ಲಿಪ್‌ಕಾರ್ಟ್, ಅಮೇಜಾನ್ ಕಛೇರಿ ಎದುರು ಬೃಹತ್ ಪ್ರತಿಭಟನೆ ಎಚ್ಚರಿಕೆ; ಕೆಪಿಆರ್‌ಎಸ್

ಅಮೇಜಾನ್ ಸಹಭಾಗಿತ್ವದ ಪ್ಲಿಪ್‌ಕಾರ್ಟ್ ನಲ್ಲಿ ಒಂದು ಲೀಟರ್ ಹಾಲನ್ನು ಒಂದು ರೂ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಕಾನೂನು ಕ್ಷೇತ್ರದಲ್ಲಿ ಜಿಲ್ಲೆಯ ಮಹಿಳೆಯರು 

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಹಾಸನ ಮಣ್ಣಿನ ಹೆಣ್ಣು ದನಿಗಳು | ವೈದ್ಯಕೀಯ ಕ್ಷೇತ್ರಕ್ಕೆ ಜಿಲ್ಲೆಯ ಮಹಿಳೆಯರ ಕೊಡುಗೆ

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...