ಹಾಸನ | ಬೇಲೂರಿನ ದೇವಾಲಯ ಆವರಣ ಮತ್ತು ಕಲ್ಯಾಣಿ ಸ್ವಚ್ಛತೆ

Date:

ಡಾ. ನಾ.ಸು ಹರ್ಡೀಕರ್‌ ರವರ ಪುಣ್ಯಸ್ಮರಣೆಯ ಅಂಗವಾಗಿ ಭಾರತೀಯ ಸೇವಾದಳ ಮತ್ತು ಪುರಸಭೆಯ ಪೌರಕಾರ್ಮಿಕರು ಹಾಗೂ ವಿದ್ಯಾರ್ಥಿಗಳು ಬೇಲೂರಿನ ಐತಿಹಾಸಿಕ ಅಮೃತೇಶ್ವರ ದೇವಾಲಯದ ಆವರಣ ಮತ್ತು ಕಲ್ಯಾಣಿಯನ್ನು ಸ್ವಚ್ಛಗೊಳಿಸಿದ್ದಾರೆ.

ಸ್ವಚ್ಚಾತಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅಮೃತೇಶ್ವರ ದೇವಾಲಯ ಸಮಿತಿಯ ಅಧ್ಯಕ್ಷ ಅಶೋಕ್‌, “ಐತಿಹಾಸಿಕ ದೇವಾಲಯಗಳಲ್ಲಿ ಅಮೃತೇಶ್ವರಿ ದೇವಾಲಯ ಒಂದಾಗಿದೆ. ಈ ದಾವಾಲಯ ಪಾಳು ಬಿದ್ದು ಗಿಡ ಗಂಟಿಗಳು ಬೆಳೆದಿದ್ದು, ವಿಷಜಂತು ಪ್ರಾಣಿಗಳು ಜೀವಿಸುತ್ತಿದ್ದವು. ಇದನ್ನು ಮನಗಂಡು ನಮ್ಮ ಸಮಿತಿಯು ಸಮಾರು 50 ಲಕ್ಷಕ್ಕಿಂತ ಹೆಚ್ಚು ಖರ್ಚು ಮಾಡಿ ದೇವಾಲಯ ಜೀರ್ಣೋದ್ದಾರಕ್ಕೆ ಮುಂದಾಗಿದೆ. ಈ ಕಾರ್ಯಕ್ಕೆ ವಿವಿಧ ಸಂಘ-ಸಂಸ್ಥೆಗಳು ಮತ್ತು ಸರ್ಕಾರದಿಂದ ಅನುದಾನ ದೊರೆತಿದೆ” ಎಂದು ಹೇಳಿದ್ದಾರೆ.

ಪುರಸಭೆ ಅಧ್ಯಕ್ಷೆ ತೀರ್ಥ ಕುಮಾರಿ ಮಾತನಾಡಿ, “ನಮ್ಮ ಪುರಸಭೆ ವತಿಯಿಂದ ಅಮೃತೃಶ್ವರ ದೇವಾಲಯ ಆವರಣ ಸ್ವಚ್ಛತೆ ನಡೆಸುತ್ತಿದ್ದೇವೆ. ಅದರಂತೆ ಈ ಹಿಂದೆಯು ಸಹ ಪುರಸಭೆ ಮತ್ತು ಹಸಿರು ಭೂಮಿ ಪ್ರತಿಷ್ಟಾನ ವತಿಯಿಂದ ಬಿಷ್ಟಮ್ಮನ ಕೆರೆ ಪಕ್ಕದಲ್ಲಿರುವ ಕಲ್ಯಾಣಿ ಮತ್ತು ಸುತ್ತಮುತ್ತಲಿನ ಪ್ರದೇಶ ಸ್ವಚ್ಛತೆ ಮಾಡಿಸಿದ್ದೆವು. ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮವನ್ನು ನಿರಂತರವಾಗಿ ನಡೆಸುತ್ತಿದ್ದೇವೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇವಾಲಯಕ್ಕೆ ಬರುವ ಪ್ರವಾಸಿಗರು ಮತ್ತು ಭಾಕ್ತಾದಿಗಳು ಪ್ಲಾಸ್ಟಿಕ್‌ ಬಳಸದಂತೆ ಸೂಚನೆ ನೀಡಲಾಗುತ್ತಿದೆ. ಭಕ್ತಾದಿಗಳು ಸ್ನಾನ ಮಾಡಿದ ಬಟ್ಟೆಬರೆಗಳನ್ನು ಕಲ್ಯಾಣಿಯಲ್ಲೆ ಬಿಡಬಾರದು” ಎಂದು ಅವರು ಹೇಳಿದ್ದಾರೆ.

ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾರತೀಯ ಸೇವ ದಳದ ಜಿಲ್ಲಾ ಸಂಚಾಲಕಿ ರಾಣಿ, ಉಪಾಧ್ಯಕ್ಷ ಮಂಜಣ್ಣ, ಸೋಮಶೇಖರ್‌, ಗಿರೀಶ್‌, ಕೇಶವೇಗೌಡ, ಬಾಳೆಹಣ್ಣು ಮಂಜಣ್ಣ, ಜ್ಯೋತಿ, ಲೋಹಿತ್‌, ಮೇಸ್ತ್ರಿ ಹರೀಶ್‌, ನಾಗರಾಜು, ನೂರ್‌ ಅಹಮದ್ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ ಮಣ್ಣಿನ ಹೆಣ್ಣು ದನಿಗಳು | ಕವಯಿತ್ರಿ, ಅನುವಾದಕಿ, ಕಲಾವಿದೆ- ಎಂ.ಆರ್. ಕಮಲ

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಹಾಸನ | ಫ್ಲಿಪ್‌ಕಾರ್ಟ್, ಅಮೇಜಾನ್ ಕಛೇರಿ ಎದುರು ಬೃಹತ್ ಪ್ರತಿಭಟನೆ ಎಚ್ಚರಿಕೆ; ಕೆಪಿಆರ್‌ಎಸ್

ಅಮೇಜಾನ್ ಸಹಭಾಗಿತ್ವದ ಪ್ಲಿಪ್‌ಕಾರ್ಟ್ ನಲ್ಲಿ ಒಂದು ಲೀಟರ್ ಹಾಲನ್ನು ಒಂದು ರೂ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಕಾನೂನು ಕ್ಷೇತ್ರದಲ್ಲಿ ಜಿಲ್ಲೆಯ ಮಹಿಳೆಯರು 

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಹಾಸನ ಮಣ್ಣಿನ ಹೆಣ್ಣು ದನಿಗಳು | ವೈದ್ಯಕೀಯ ಕ್ಷೇತ್ರಕ್ಕೆ ಜಿಲ್ಲೆಯ ಮಹಿಳೆಯರ ಕೊಡುಗೆ

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...